ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಣೆ: ಉತ್ತರ ಕನ್ನಡ ‘ಕೈ’ವಶ ಸಾಧ್ಯತೆ!

ಹಿಂದೂ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಣೆ: ಉತ್ತರ ಕನ್ನಡ ‘ಕೈ’ವಶ ಸಾಧ್ಯತೆ!

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಳೆದ 27 ವರ್ಷಗಳಿಂದ ಬಿಜೆಪಿ ಭದ್ರಕೋಟೆ ಕ್ಷೇತ್ರವಾಗಿತ್ತು, ಫೈರ್‌ಬ್ರಾಂಡ್ ಹಿಂದುತ್ವವಾದಿ ಅನಂತಕುಮಾರ್ ಹೆಗಡೆ ಇಲ್ಲಿನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

2019ರಲ್ಲಿ ಅವರು 4.79 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ನಂತರ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿಯಾದರು. ಅವುಗಳಿಂದ ಅವರು ಹೊರಬರಲು ಸಾಧ್ಯವಾದರೂ ಕೂಡ ಸಮಸ್ಯೆಗೆ ಅವರನ್ನು ಸಿಲುಕಿಸಿಹಾಕಿಕೊಂಡದ್ದು ಸುಳ್ಳಲ್ಲ. ಕಳೆದ ಮಾರ್ಚ್ ತಿಂಗಳಲ್ಲಿ ಲೋಕಸಭೆ ಚುನಾವಣಾ ಜ್ವರ ಕ್ರಮೇಣ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಧರ್ಮವನ್ನು ಉತ್ತೇಜಿಸಲು ಸಂವಿಧಾನವನ್ನು ಬದಲಾಯಿಸಲಾಗುವುದು ಎಂಬ ಹೇಳಿಕೆಯನ್ನು ಅನಂತ್ ಕುಮಾರ್ ಹೆಗಡೆ ನೀಡಿದರು.

ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನಗಳು ಏಕೆ ಬೇಕು, ಈ ಹಿಂದೆ ಕಾಂಗ್ರೆಸ್ ನಾಯಕರು ಹಿಂದೂ ಧರ್ಮವನ್ನು ಮುಂದಿಡದ ರೀತಿಯಲ್ಲಿ ಸಂವಿಧಾನದಲ್ಲಿ ಬದಲಾವಣೆ ಮಾಡಿದ್ದಾರೆ. ಅದನ್ನು ಬದಲಿಸಿ ನಮ್ಮ ಧರ್ಮವನ್ನು ಉಳಿಸಬೇಕು. ನಾವು ಈಗಾಗಲೇ ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಹೊಂದಿದ್ದೇವೆ, ಆದರೆ ರಾಜ್ಯಸಭೆಯಲ್ಲಿ ಸಂವಿಧಾನವನ್ನು ತಿದ್ದುಪಡಿ ಮಾಡಲು ಬಿಜೆಪಿಗೆ ಅಷ್ಟು ಸ್ಥಾನಗಳು ಸಾಕಾಗುವುದಿಲ್ಲ. ಈ ಬಾರಿಯ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಾಯ ಮಾಡಿ ಎಂದು ಕರೆ ನೀಡಿದರು.

ಆದರೆ ಇವರ ಹೇಳಿಕೆ ಬಿಜೆಪಿ ನಾಯಕರನ್ನು ಮುಜುಗರಕ್ಕೀಡುಮಾಡಿತು. ಪ್ರತಿಪಕ್ಷಗಳಿಗೆ ಈ ಹೇಳಿಕೆ ಆಹಾರವಾಯಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಈ ಹೇಳಿಕೆಯ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರು. ಪರಿಣಾಮ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಗಡೆಗೆ ಟಿಕೆಟ್ ನಿರಾಕರಿಸಿ ಬಿಜೆಪಿ ಹೈಕಮಾಂಡ್ ಮಾಜಿವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಿದೆ. ಇದು ಸಹಜವಾಗಿ ಅನಂತ್ ಕುಮಾರ್ ಹೆಗಡೆಯವರನ್ನು ತೀವ್ರ ಬೇಸರಕ್ಕೀಡು ಮಾಡಿದೆ, ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರ ಕೂಡ ಮಾಡುತ್ತಿಲ್ಲ.

ಸಾಂಕೇತಿಕ ಚಿತ್ರ

ಕಾಂಗ್ರೆಸ್ ಪಾಳಯವು ಈ ಅವಕಾಶವನ್ನು ರಾಜಕೀಯವಾಗಿ ಸದುಪಯೋಗಪಡಿಸಿಕೊಳ್ಳಲು ನೋಡುತ್ತಿದೆ. ಈ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳುವ ನಿರೀಕ್ಷೆಯಲ್ಲಿದ್ದು, ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಟಿಕೆಟ್ ನೀಡಿದೆ. ಅವರು ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿಯ ಪತ್ನಿ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಸೊಸೆ, ಅಶೋಕ್ ಚವಾಣ್ ಬಿಜೆಪಿಯಲ್ಲಿದ್ದಾರೆ.

ತರಬೇತಿಯಿಂದ ವೈದ್ಯಕೀಯ ವೃತ್ತಿಯಲ್ಲಿರುವ ಡಾ ನಿಂಬಾಳ್ಕರ್ ಅವರು ಮಹಾರಾಷ್ಟ್ರದಿಂದ ಬಂದವರು. ಅವರು 2018 ರಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರವನ್ನು ಗೆದ್ದಿದ್ದರು, ಆದರೆ 2023 ರಲ್ಲಿ ಸೋತರು.

ರಾಜ್ಯ ಸರ್ಕಾರದ ಖಾತರಿ ಯೋಜನೆಗಳು ಮತ ಸೆಳೆಯುವಂತಿವೆ ಎಂದು ಡಾ.ನಿಂಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಟ್ಟು 12.48 ಲಕ್ಷ ಮತದಾರರಲ್ಲಿ ಕ್ರಮವಾಗಿ 14.3%, 22.6% ಮತ್ತು 11.5% ರಷ್ಟಿರುವ ಅಲ್ಪಸಂಖ್ಯಾತರು, OBCಗಳು ಮತ್ತು SC/ST ಗಳ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ಅವರ ಪ್ರಚಾರ ಕಾರ್ಯ ಮಂದಗತಿಯಲ್ಲಿ ಸಾಗಿದೆ. ಅನಂತ್ ಕುಮಾರ್ ಹೆಗಡೆಯವರ ನಿಷ್ಕ್ರಿಯತೆ ಅವರ ಹಿನ್ನಡೆಗೆ ಮತ್ತೊಂದು ಕಾರಣವಾಗಿದೆ. ಕಾಗೇರಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನ ಬಲದ ಮೇಲೆ ನಿರೀಕ್ಷೆಯಲ್ಲಿದ್ದಾರೆ.

ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷದ ಇಬ್ಬರು ನಾಯಕರ ಲೈಂಗಿಕ ಹಗರಣ ಕೇಸು ಚುನಾವಣೆ ಮೇಲೆ ಪ್ರಭಾವ ಬೀರುತ್ತದೆಯೇ ಕಾದುನೋಡಬೇಕು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *