ಕಾಂಗ್ರೆಸ್‌ ಗೊಂದಲ: ಜಿಲ್ಲಾ ಕಾಂಗ್ರೆಸ್‌ ಶಿಸ್ತು ಕ್ರಮ ಕೈಗೊಳ್ಳಲಿ

ಕಾಂಗ್ರೆಸ್‌ ಒಳಗಿನ ಗೊಂದಲಗಳು ನಿಧಾನವಾಗಿ ಹೊರಬರತೊಡಗಿದ್ದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್‌ ಈಗ ಗೊಂದಲಪುರ ಆಗುತ್ತಿದೆಯೆ? ಎನ್ನುವ ಅನುಮಾನ ಕಾಡುವಂತಾಗಿದೆ.

ಸಿದ್ಧಾಪುರ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ರಾಜೀನಾಮೆ ನಂತರ ಅವರ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆ ಏಳುತಿದ್ದಂತೆ ಇದಕ್ಕೆ ಸಂಬಂಧಿಸಿದ ಕೆಲವು ಬೆಳವಣಿಗೆಗಳು ಕಾಂಗ್ರೆಸ್‌ ಗೊಂದಲ ಹೆಚ್ಚಿಸಿವೆ ಎನ್ನುವಂತಾಗಿದೆ.

ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ವಿಭಾಗದ ಹಿರಿಯ ಉಪಾಧ್ಯಕ್ಷ ಬಿ.ಆರ್.‌ ನಾಯ್ಕ ಹೆಗ್ಗಾರಕೈ ನಾವು ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಕೆಲಸಮಾಡಿದ್ದೇವೆ. ಕೆ.ಪಿ.ಸಿ.ಸಿ. ಓ.ಬಿ.ಸಿ. ವಿಭಾಗದ ಹಿರಿಯ ಉಪಾಧ್ಯಕ್ಷನಾದ ನನ್ನನ್ನೇ ಇವರು ಪಕ್ಷಕ್ಕೇ ಸೇರ್ಪಡೆಯಾಗಿಲ್ಲ ಎನ್ನುವ ಡಿ.ಸಿ.ಸಿ. ಪದಾಧಿಕಾರಿಯೊಬ್ಬರ ಹೇಳಿಕೆ ಪಕ್ಷದ ಶಿಸ್ತು,ವ್ಯವಸ್ಥೆಗಳ ವಿರುದ್ಧ ಆಗುವುದಿಲ್ಲವೆ? ಎಂದು ಪ್ರಶ್ನಿಸಿದರು. ಈ ಬಗ್ಗೆ ಜಿಲ್ಲಾಧ್ಯಕ್ಷರು ಕ್ರಮ ಕೈಗೊಳ್ಳದಿದ್ದರೆ ಪಕ್ಷದ ಶಿಥಿಲತೆಗೆ ಕಾರಣವಾಗುತ್ತದೆ ಎಂದು ಎಚ್ಚರಿಸಿದರು.

ಮಾಧ್ಯಮಗೋಷ್ಠಿ ನಡೆಸಿದ ಪ್ರಮುಖರಲ್ಲಿ ಒಬ್ಬರಾದ ಸುರೇಶ್‌ ನಾಯ್ಕ ಕಡಕೇರಿ ಮಾತನಾಡಿ ತಾಲೂಕಾ ಬ್ಲಾಕ್‌ ಅಧ್ಯಕ್ಷರ ಜೊತೆಗಿರುವವರಲ್ಲೇ ಅಧ್ಯಕ್ಷತೆಯ ಗಾದಿಗಾಗಿ ಪೈಪೋಟಿ ನಡೆದಿದೆ. ಕೆಲವರು ಮೂಗುತೂರಿಸುತ್ತಾರೆ ಎಂದು ಆರೋಪಿಸುವ ಡಿ.ಸಿ.ಸಿ. ಪದಾಧಿಕಾರಿಯೊಬ್ಬರಿಗೆ ಅವರ ಹುದ್ದೆಯ ಘನತೆ ಗೊತ್ತಿರಬೇಕು. ಅಂಥವರನ್ನು ಡಿ.ಸಿ.ಸಿ. ಪದಾಧಿಕಾರಿ ಮಾಡಿದ ಅಧ್ಯಕ್ಷರು ಅಪ್ರಬುದ್ಧರೊಬ್ಬರನ್ನು ಡಿ.ಸಿ.ಸಿ. ಪದಾಧಿಕಾರಿ ಮಾಡಿದ್ದಕ್ಕೆ ವಿಶಾಧಿಸಬೇಕು ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *