ಅಕ್ರಮ ಮರಳು: ಪೊಲೀಸರಿಗೆ ಕೈ ತುಂಬಾ ಕಾಸು!

ಅಕ್ರಮ ಮರಳು ಸಾಗಾಣಿಕೆಯಿಂದ ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಭರ್ಜರಿ ಕಮಾಯಿ ಮಾಡುತಿದ್ದಾರೆ ಎನ್ನುವ ಮಾತು ಚರ್ಚೆಯಲ್ಲಿದೆ. ಗೇರಸೊಪ್ಪಾ ಅಥವಾ ಮಲೆನಾಡು, ಕರಾವಳಿಯ ಮರಳು ಸಾಗಾಟಕ್ಕೆ ಈ ವರೆಗೆ ಜಿಲ್ಲೆಯಾದ್ಯಂತ ನಿರ್ಬಂಧಗಳಿರಲಿಲ್ಲ. ಜಿಲ್ಲೆಯೊಳಗೆ ಪರವಾನಗಿ ಪಡೆದ ಮರಳು ಸಾಗಾಟದ ವಾಹನಗಳು ಸುತ್ತುತಿದ್ದವು. ಆದರೆ ಗಣಿ ಇಲಾಖೆಯ ಆಂಶಿಕ ಪರವಾನಗಿ ಜೊತೆ ಪೊಲೀಸರಿಗೆ ತಿಂಗಳ ಮಾಮೂಲಿ ನೀಡಿ ಅನೇಕ ವಾಹನಗಳು ಅನಾಯಾಸವಾಗಿ ತಿರುಗುತಿದ್ದವು.

ಹಸಿರುಪೀಠದ ಆದೇಶ- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮರಳುಗಾರಿಕೆಗೆ ನಿರ್ಬಂಧ ಹೇರಿ ಕೇಂದ್ರದ ಹಸಿರುಪೀಠ ಕಳೆದ ವಾರ ಆದೇಶ ಹೊರಡಿಸಿದೆ. ಈ ಆದೇಶದ ನಂತರ ಪೊಲೀಸರ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ. ಹಸಿರುಪೀಠ ಮರಳುಗಾರಿಕೆ ನಿಷೇಧಿಸುವ ಮೊದಲು ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮರಳು ಮಾರಾಟ ಮತ್ತು ಸಾಗಾಟಕ್ಕೆ ಅನುಮತಿ ನೀಡುತಿತ್ತು. ಈಗಿನ ಹೊಸ ಆದೇಶದಿಂದಾಗಿ ಉತ್ತರ ಕನ್ನಡ ಗಣಿ ಮತ್ತು ಭೂವಿಜ್ಞಾನ ಇಲಾಖೆ ಪರವಾನಗಿ ನೀಡುತ್ತಿಲ್ಲ ಆದರೆ ಅಕ್ರಮ ಮರಳು ಸಾಗಾಟ ಮಾಡುವವರಿಗೆ ಇದು ವರದಾನವಾಗಿದೆ. ಅಧೀಕೃತ ಪರವಾನಗಿ ಈಗ ಅನಿವಾರ್ಯವಲ್ಲದಿರುವುದರಿಂದ ಗಣಿ ಇಲಾಖೆಗೆ ಅನುಮತಿ ಕೇಳದೆ ಮರಳುಗಾಡಿಗಳು ಮರಳು ಸಾಗಾಟ ಮಾಡುತಿದ್ದಾರೆ.

ಕಳೆದ ಸೋಮುವಾರ ಸಂಜೆ ಬಿ.ಜೆ.ಪಿ.ಯ ನಾಯಕರ ಎರಡು ಅಕ್ರಮ ಮರಳು ಸಾಗಾಟದ ಲಾರಿಗಳನ್ನು ಸಿದ್ದಾಪುರ ಪೊಲೀಸರು ವಶಕ್ಕೆ ಪಡೆದು ವ್ಯವಹಾರ ಮಾಡಿ ಬಿಟ್ಟುಕೊಟ್ಟಿದ್ದಾರೆ. ಇದರ ಜೊತೆಗೆ ಶಿರಸಿ ಶೆಟ್ಟಿ ಗ್ಯಾಂಗ್‌ ಕೂಡಾ ಸ್ಥಳೀಯ ಪೊಲೀಸರಿಗೆ ಕ್ಯಾರೆ ಎನ್ನದೆ ಅಕ್ರಮ ಮರಳು ಸಾಗಾಟ ಮಾಡುತಿದ್ದಾರೆ ಎನ್ನುವುದು ಸ್ಥಳೀಯರ ಆರೋಪ. ಈ ವ್ಯವಹಾರದ ನಡುವೆ ಚುನಾವಣೆವೇಳೆಗೆ ಬಂದಿದ್ದ ಸಿದ್ಧಾಪುರದ ಹಿರಿಯ ಅಧಿಕಾರಿಯೊಬ್ಬರು ಕೆಲವು ಪ್ರಮುಖ ಕಳ್ಳರಿಗೆ ರಿಯಾಯತಿ ನೀಡಿ ಸ್ಥಳೀಯ ಹೊಸ ಮರಳು ಸಾಗಾಟಗಾರರಿಗೆ ಎರಡು ತಿಂಗಳ ಮಾಮೂಲಿ ಮೊತ್ತ ಮೇ ತಿಂಗಳಲ್ಲೇ ಕೊಡಬೇಕೆಂದು ಫರ್ಮಾನು ಹೊರಡಿಸಿದ ವೇಳೆಗೆ ಸರಿಯಾಗಿ ಹಸಿರುಪೀಠ ಮರಳು ಸಾಗಾಟಕ್ಕೆ ನಿರ್ಬಂಧ ಹೇರಿದೆ.!

ಈ ಹೊಸ ಬೆಳವಣಿಗೆಯಿಂದ ಕಂಗಾಲಾದ ಪೊಲೀಸ್‌ ಅಧಿಕಾರಿ ಯುವ ಮರಳು ಸಾಗಾಟಗಾರರು ಮತ್ತು ಅವರ ಹಿತೈಶಿ ರಾಜಕಾರಣಿಯೊಬ್ಬರಿಗೆ ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ. ಈ ಘಟನೆಗೆ ಪ್ರತಿಕ್ರೀಯಿಸಿದ ಯುವ ರಾಜಕಾರಣಿ ಕೆಂಡಾಮಂಡಲರಾಗಿ ವಿಚಾರ ಶಾಸಕರ ವರೆಗೂ ತಲುಪಿದೆ!

ಎರಡು ತಿಂಗಳಲ್ಲಿಎರಡು ಡಜನ್‌ ಲಕ್ಷಗಳನ್ನು ಜೇಬಿಗಿಳಿಸಿದ ಅಧಿಕಾರಿ ಕೊನೆಯ ತಿಂಗಳಲ್ಲಿ ಡಬಲ್‌ ಲಾಭ ಮಾಡಲು ಹೋಗಿ ಕಾಗೇರಿ ಬಣದ ಲಾಭದ ರಾಜಕಾಣಿಗಳಿಗೆ ನೆರವಾಗಿ ಆಡಳಿತ ಪಕ್ಷದ ಹೊಸ ಹುಡುಗರಿಗೆ ಧಮಕಿ ಹಾಕುವ ವರೆಗೆ ನಡೆದ ಬೆಳವಣಿಗೆ ಪೊಲೀಸರ ಬ್ರಷ್ಟತೆ, ದುಷ್ಟತೆಯನ್ನು ಬಹಿರಂಗ ಮಾಡಿದೆ.ಇದು ರಾಜಕೀಯ ಬೆಳವಣಿಗೆ, ತಾಲೂಕಿನ ಕೆಲವರ ಕೆಂಗಣ್ಣಿಗೂ ಗುರಿಯಾಗಿದೆ. ಉಂಡು ಹೋದ ಕೊಂಡೂ ಹೋದ ಎನ್ನುವಂತಾಗಿರುವ ಪೊಲೀಸ್‌ ಅಧಿಕಾರಿಯ ಲೋಭ ಸ್ಥಳೀಯ ರಾಜಕೀಯದ ಮೇಲೂ ಕರಿನೆರಳು ಬೀರಿದೆ ಎನ್ನುವಲ್ಲಿಗೆ ಸಿದ್ಧಾಪುರದ ವಸೂಲಿ ಮುಖವಾಡಗಳ ಅನಾವರಣವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *