ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ

ನನ್ನ ತಂಗಿಯ ಗಂಡ ಡಾ.ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ

ಶಿವರಾಜ್ ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ

ಬೆಂಗಳೂರು: ನನ್ನ ತಂಗಿಯ ಗಂಡ ಡಾ.ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿ ಗೀತಾ ಶಿವಕುಮಾರ್ ವಿರುದ್ಧ ಬಿ.ವೈ ರಾಘವೇಂದ್ರ ಗೆಲುವು ಸಾಧಿಸಿದಕ್ಕಾಗಿ ಅವರನ್ನು ಅಭಿನಂದಿಸುತ್ತಾ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್​ ಮಾಡಿರುವ ಕುಮಾರ್ ಬಂಗಾರಪ್ಪ ಅವರು, ಇದೇ ವೇಳೆ ಸಹೋದರಿ ಗೀತಾ ಹಾಗೂ ಭಾವ ಶಿವರಾಜ್ ಕುಮಾರ್ ವಿರುದ್ದ ಹರಿಹಾಯ್ದಿದ್ದಾರೆ.

ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ, ರೈತ ಬಂಧುವೂ, ಗೇಣಿದಾರರ ಜೀವಜಲವೆನಿಸಿದ್ದ ಹೋರಾಟಗಾರ, ನಾಡು ನುಡಿ ಸಂಸ್ಕೃತಿಗಳ ರಕ್ಷಾ ಧೀಕ್ಷೆಯನ್ನು ತೊಟ್ಟಿದ್ದ ವೀರಯೋಧನೆನಿಸಿದ್ದ ಕರ್ನಾಟಕದ ಈ ಮಾಜಿ ಮುಖ್ಯಮಂತ್ರಿಯು ಲಿಂಗಾಯತ, ಬ್ರಾಹ್ಮಣ, ಒಕ್ಕಲಿಗರೆಲ್ಲರಲ್ಲಿಯೂ ಸಮ ಭಾವ, ಸಮಚಿತ್ತದಿಂದ ಬೆರೆತಿದ್ದವರು ಇವರ ಆಡಳಿತ ವ್ಯೆಖರಿಯು ಅನುಕರಣೀ ಯ ಮಾತ್ರವಲ್ಲದೆ ಆದರ್ಶರೂಪದ್ದಾಗಿತ್ತು.

ಇವರು ಜಾರಿಗೆ ತಂದಿದ್ದ ಪಂಚಮುಖಿ ಕಾರ್ಯಕ್ರಮಗಳಾದ ವಿಶ್ವ, ಸುಶ್ರತ, ಆರಾಧನ,ಆಶ್ರಯ, ಅಕ್ಷಯ ತಾದವನ್ನು ಇಡೀ ರಾಜ್ಯ ನೆನೆಯುತ್ತಾ ಆರಾಧಿಸುತ್ತಿದೆ, ಬೇರೆ ರಾಜ್ಯಗಳೂ ಅನುಕರಿಸುತ್ತಿವೆ. ಇಂತಹ ಒಬ್ಬ ಧಿರೋದ್ದಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ.

ಶಿವರಾಜ್ ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ

ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಮೇಲಾಗಿ, ಕನ್ನಡದ ಕಣ್ಮಣಿ ಡಾ.ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ, ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆಂದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ.

ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು.

ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ. ಈ ವಿಜಯೋತ್ಸವದ ಕೊಡುಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದ ಮತದಾರರಿಂದ ಲಭಿಸಿದ್ದು, ಅವರಿಗೆ ನಾವು ಚಿರಋಣಿಗಳಾಗಿರುತ್ತೇವೆ. ಅವರ ಆಶಯಗಳನ್ನು ಸಾಕಾರಗೊಳಿಸುತ್ತೇವೆ. ಅವರ ನಂಬಿಕೆಗೆ ಚ್ಯುತಿಬಾರದಂತೆ ನಡೆದುಕೊಳ್ಳುತ್ತೇವೆ.

ನಮ್ಮ ಪಕ್ಷದ ಕಾರ್ಯಕರ್ತರು, ಹಿರಿಯ-ಕಿರಿಯ ಪದಾಧಿಕಾರಿಗಳು, ಸಂಘಟನೆಯಲ್ಲಿ ತೊಡಗಿಸಿಕೊಂಡ ಬ್ರಿಗೇಡ್/ಶಿಸ್ತಿನ ಸಿಪಾಯಿಗಳು ಹಗಲಿರುಲೆನ್ನದೆ ದುಡಿದು ಬಿವೈ. ರಾಘವೇಂದ್ರರಿಗೆ ಅತ್ಯಧಿಕ ಬಹುಮತದಿಂದ ವಿಜಯಶಾಲಿಯನ್ನಾಗಿಸಿದ್ದಾರೆ ಅವರೆಲ್ಲರಿಗೂ ನನ್ನ ನಮನಗಳು.

ಶಿವರಾಜ್ ಕುಮಾರ್ ಹಾಗೂ ಕುಮಾರ್ ಬಂಗಾರಪ್ಪ

ರಾಜ್ಯಮಟ್ಟದಲ್ಲಿ, ರಾಷ್ಟ್ರ ಮಟ್ಟದಲ್ಲಿ ಮಾರ್ಗದರ್ಶನ ನೀಡಿದ ನಾಯಕರೆಲ್ಲರಿಗೂ ಧನ್ಯವಾದಗಳು. War is over but battle remains ಅನ್ನುವ ಹಾಗೆ ನಮ್ಮ ನಿಮ್ಮೆಲ್ಲರ ಗುರಿ ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಚುನಾವಣೆಗಳು, ಇದೇ ಓಟ ನಿರಂತರವಾಗಿ ನಡೆಯಬೇಕು, ಗೆಲುವನ್ನು ನಮ್ಮದಾಗಿಸಿಕೊಳ್ಳಬೇಕು. ಪಣತೋಡೋಣ, ಗುರಿ ಮುಟ್ಟೋಣ. ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ಚಾಲನೆಯಾಗಬೇಕು.

ಪಶ್ಚಿಮ ಘಟ್ಟದ ಈ ತಪ್ಪಲು ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಬೇಕು. ಇನ್ನು ನನ್ನ ತಮ್ಮ ಮಧು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ಇಲ್ಲ CM ಅವನನ್ನು ಸಂಪುಟ ದಿಂದ ವಜಾ ಮಾಡಬೇಕು. ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೊಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ ಭಾವ, ನನ್ನ ತಂಗಿಯ ಗಂಡ ಡಾ. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು.

ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು ಎಂದು ವ್ಯಂಗ್ಯವಾಡಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *