ಸಂಬಂಧವೇ ಇಲ್ಲದ ಮೂವರ ಶರಣಾಗಿಸಿ ಸಿಕ್ಕಿಬಿದ್ದ ನಟ ದರ್ಶನ್: ಪೊಲೀಸರು ರಹಸ್ಯ ಕೊಲೆ ಭೇದಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ…

ತಮ್ಮ ಗೆಳತಿಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಎಂಬ ಕಾರಣಕ್ಕೆ ತಮ್ಮದೇ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದು ರಾಜಕಾಲುವೆಗೆ ಎಸೆದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಬಂಂಧನಕ್ಕೊಳಪಡಿಸಿದ್ದಾರೆ.

ರೇಣುಕಾಸ್ವಾಮಿ-ದರ್ಶನ್

ರೇಣುಕಾಸ್ವಾಮಿ-ದರ್ಶನ್

ಬೆಂಗಳೂರು: ತಮ್ಮ ಗೆಳತಿಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಎಂಬ ಕಾರಣಕ್ಕೆ ತಮ್ಮದೇ ಅಭಿಮಾನಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಹತ್ಯೆಗೈದು ರಾಜಕಾಲುವೆಗೆ ಎಸೆದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಮಂದಿಯನ್ನು ಪೊಲೀಸರು ಬಂಂಧನಕ್ಕೊಳಪಡಿಸಿದ್ದಾರೆ.

ಅಷ್ಟಕ್ಕೂ ಏನಿದು ಪ್ರಕರಣ? ಚಿತ್ರದುರ್ಗದ ರೇಣುಕಾ ಸ್ವಾಮಿಗೂ ನಟ ದರ್ಶನ್‌ಗೂ ಎಲ್ಲಿಂದೆಲ್ಲಿಗೆ ಸಂಬಂಧ? ಕೊಲೆ ನಡೆದಿದ್ದು ಹೇಗೆ? ಕೊಲೆಗೂ ಮುನ್ನ ಏನೇನಾಯ್ತು? ಕೊಲೆ ಪ್ರಕರಣ ಇಂಚಿಂಚೂ ಮಾಹಿತಿ ಇಲ್ಲಿದೆ…

ಕಳೆದ 10 ವರ್ಷಗಳಿಂದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ನಡುವೆ ಸಂಬಂಧ ಇದೆ ಎನ್ನಲಾಗುತ್ತಿದ್ದು ದರ್ಶನ್- ವಿಜಯಲಕ್ಷ್ಮೀ ಮಧ್ಯೆ ಪವಿತ್ರಾ ಗೌಡ ಬಂದಿದ್ದಾರೆ ಎಂದು ಅಭಿಮಾನಿ ರೇಣುಕಾಸ್ವಾಮಿ ಕೆರಳಿದ್ದಾರೆ. ದರ್ಶನ್-ವಿಜಯಲಕ್ಷ್ಮೀ ಸಂಸಾರದಲ್ಲಿ ಹುಳಿ ಹಿಂಡಿದ್ದು ಪವಿತ್ರಾ ಗೌಡ ಎಂಬ ಸಿಟ್ಟು, ಬೇಸರ ರೇಣುಕಾ ಸ್ವಾಮಿ ಅವರಲ್ಲಿತ್ತು. ಇದೇ ಕಾರಣಕ್ಕೆ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್‌ಗಳನ್ನ ಕಳುಹಿಸಿದ್ದರು. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿದ ಪರಿಣಾಮ ರೇಣುಕಾ ಸ್ವಾಮಿ ಹತ್ಯೆಯಾಗಿದೆ ಎನ್ನಲಾಗಿದೆ. ಈ ವಿಚಾರವನ್ನು ಪವಿತ್ರಾ ಅವರು ದರ್ಶನ್ ಅವರ ಗಮನಕ್ಕೆ ತಂದಿದ್ದು, ಇದಕ್ಕೆ ರೇಣುಕಾ ಸ್ವಾಮಿ ವಿರುದ್ಧ ದರ್ಶನ್ ಕೆಂಡಾಮಂಡಲಗೊಂಡಿದ್ದರು.

ಪರಿಣಾಮ, ಚಿತ್ರದುರ್ಗಕ್ಕೆ ದೂರವಾಣಿ ಕರೆ ಹೋಗಿದೆ. ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರಗೆ ರೇಣುಕಾ ಸ್ವಾಮಿ ಬಗ್ಗೆ ಪತ್ತೆ ಹಚ್ಚುವಂತೆ ಸೂಚಿಸಲಾಗಿದೆ.

ರೇಣುಕಾಸ್ವಾಮಿ-ದರ್ಶನ್

ಬಳಿಕ ರೇಣುಕಾ ಸ್ವಾಮಿ ಅವರನ್ನ ವಾಚ್ ಮಾಡಿ, ಫೋನ್ ನಂಬರ್ ಕಲೆಕ್ಟ್ ಮಾಡಿ, ಹುಡುಗಿಯಂತೆ ಕರೆ ಮಾಡಿ ಮಾತನಾಡಿ ನಿರ್ದಿಷ್ಟ ಜಾಗಕ್ಕೆ ಬರಲು ಸೂಚಿಸಲಾಗಿದೆ. ಅಲ್ಲಿಂದ ರೇಣುಕಾ ಸ್ವಾಮಿ ಅವರನ್ನ ಕಿಡ್ನ್ಯಾಪ್ ಮಾಡಲಾಗಿದೆ. ಆನಂತರ ಆಗಬಾರದ್ದು ಆಗಿಹೋಗಿದೆ.

  • ಜೂನ್ 8 – ರೇಣುಕಾ ಸ್ವಾಮಿ ಅವರನ್ನ ಚಿತ್ರದುರ್ಗದಿಂದ ‘ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ’ ಅಧ್ಯಕ್ಷ ರಾಘವೇಂದ್ರ & ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ಕರೆತಂದರು.
  • ಜೂನ್ 8 – ದರ್ಶನ್ ಆಪ್ತ ವಿನಯ್‌ಗೆ ಸೇರಿದ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದೆ.
  • ಜೂನ್ 8 ರಾತ್ರಿ – ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿದೆ.
  • ಜೂನ್ 8 ರಾತ್ರಿ – ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾ ಸ್ವಾಮಿ ಹತ್ಯೆ
  • ಜೂನ್ 9 ಮುಂಜಾನೆ 4.30 – ಶೆಡ್‌ನಲ್ಲಿನ ಶವವನ್ನ ವಿನಯ್‌ ಮತ್ತು ಇತರರು ಸುಮನಹಳ್ಳಿ ರಾಜಕಾಲುವೆಗೆ ಎಸೆದರು.
  • ಜೂನ್ 9 ಬೆಳಗ್ಗೆ 8.30- ಅಪರಿಚಿತ ಶವ (ರೇಣುಕಾ ಸ್ವಾಮಿ) ಡೆಲಿವರಿ ಬಾಯ್ ಕಣ್ಣಿಗೆ ಬಿದ್ದಿದೆ.
  • ಜೂನ್ 9 ಬೆಳಗ್ಗೆ – ಅಪರಿಚಿತ ಶವ ಪತ್ತೆ ಕುರಿತು ಸ್ಥಳೀಯ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಫ್‌ಐಆರ್‌ ದಾಖಲಾಗಿದೆ.
  • ಜೂನ್ 9 ಬೆಳಗ್ಗೆ – ಸುಮನಹಳ್ಳಿ ರಾಜಕಾಲುವೆಗೆ ಕಾಮಾಕ್ಷಿಪಾಳ್ಯ ಪೊಲೀಸರ ಭೇಟಿ, ಪರಿಶೀಲನೆ
  • ಜೂನ್ 10 – ಕೊಲೆ ಮಾಡಿದ್ದು ತಾವೇ ಎಂದು ಹೇಳಿ ದರ್ಶನ್ ಅವರ ಮೂವರು ಸಹಚರರು ಸರಂಡರ್ ಆದರು. ತನಿಖೆ, ವಿಚಾರಣೆ ಚುರುಕುಗೊಳಿಸಿದ ಪೊಲೀಸರು.
  • ಜೂನ್ 10 – ತನಿಖೆ ವೇಳೆ ಪೊಲೀಸರಿಗೆ ಅಚ್ಚರಿ ಕಾದಿತ್ತು. ವಿಚಾರಣೆ ನಡೆದಾಗ ಕೊಲೆಯ ಅಸಲಿ ವಿಷಯ ಬೆಳಕಿಗೆ ಬಂದಿದೆ.
  • ಜೂನ್ 10 ರಾತ್ರಿ – ಹತ್ಯೆಯಲ್ಲಿ ದರ್ಶನ್ ಕೈವಾಡ ಇದೆ ಎಂದು ತಿಳಿದ ಬಳಿಕ ‘ಚಾಲೆಂಜಿಂಗ್ ಸ್ಟಾರ್‌’ನ ಅರೆಸ್ಟ್ ಮಾಡಲು ಮೈಸೂರಿಗೆ ತೆರಳಿದ ಬೆಂಗಳೂರು ಪೊಲೀಸರು.
  • ಜೂನ್ 10 – ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳ ಬಂಧನ.
  • ಜೂನ್ 11 ಬೆಳಗ್ಗೆ 6.30 – ಮೈಸೂರಿನ ರಾಡಿಸನ್‌ ಹೋಟೆಲ್‌ನಲ್ಲಿ ಜಿಮ್ ಮಾಡುತ್ತಿದ್ದ ದರ್ಶನ್.
  • ಜೂನ್ 11 ಬೆಳಗ್ಗೆ – ಮೈಸೂರಿನ ರಾಡಿಸನ್‌ ಹೋಟೆಲ್‌ನಲ್ಲಿ ದರ್ಶನ್‌ನ ವಶಕ್ಕೆ ಪಡೆದ ಪೊಲೀಸರು.
  • ಜೂನ್ 11 – ದರ್ಶನ್ ಅವರನ್ನ ಬೆಂಗಳೂರಿಗೆ ಕರೆತಂದ ಪೊಲೀಸರು.
  • ಜೂನ್ 11 ಮಧ್ಯಾಹ್ನ – ಪವಿತ್ರಾ ಗೌಡರನ್ನ ವಶಕ್ಕೆ ಪಡೆದ ಪೊಲೀಸರು.
  • ಜೂನ್ 11 ಮಧ್ಯಾಹ್ನ – ದರ್ಶನ್ ಬಂಧನ, ಪವಿತ್ರಾ ಗೌಡ ಬಂಧನ.
  • ಜೂನ್ 11 ಸಂಜೆ – 13 ಬಂಧಿತ ಆರೋಪಿಗಳನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು.
  • ಜೂನ್ 11 ಸಂಜೆ – ಬೌರಿಂಗ್‌ ಆಸ್ಪತ್ರೆಯಿಂದ ನ್ಯಾಯಾಲಯಕ್ಕೆ 13 ಬಂಧಿತ ಆರೋಪಿಗಳನ್ನ ಕರೆದೊಯ್ದ ಪೊಲೀಸರು. ನ್ಯಾಯಾಧೀಶರ ಮುಂದೆ 13 ಬಂಧಿತ ಆರೋಪಿಗಳು ಹಾಜರು.
  • ಜೂನ್ 11 ಸಂಜೆ – ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್
  • ಜೂನ್‌ 11 ಸಂಜೆ – 13 ಬಂಧಿತ ಆರೋಪಿಗಳನ್ನ 6 ದಿನ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೀನು ಕಚ್ಚಿ ಸಾವು!

ದೇವಬಾಗ್: ಬಲೆಗೆ ಬಿದ್ದಿದ್ದ ‘jellyfish’ ಕುಟುಕಿ ಮೀನುಗಾರ ಸಾವು! ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು...

ತೈಲ ಬೆಲೆ ಏರಿಕೆ ಪ್ರತಿಭಟನೆ ವೇಳೆ ಹೃದಯಾಘಾತ: BJP ಮಾಜಿ MLC ಎಂ.ಬಿ ಭಾನುಪ್ರಕಾಶ್ ನಿಧನ

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಭಾನುಪ್ರಕಾಶ್ ಶಿವಮೊಗ್ಗ: ಇಂಧನ ಮೇಲಿನ ವ್ಯಾಟ್ ಏರಿಕೆ ವಿರೋಧಿಸಿ...

ಪ.ಪಂ. ರಸ್ತೆ, ಚರಂಡಿ ನಿರ್ವಹಣೆಗೆ ಆದ್ಯತೆ ನೀಡಲು ಶಾಸಕರ ಸೂಚನೆ

ಸಿದ್ಧಾಪುರ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ,ಹಾಗೂ ಚರಂಡಿ ಮತ್ತು ನೀರಿನ ವ್ಯವಸ್ಥೆಗಳಿಗೆ ಆದ್ಯತೆಯ ಮೇಲೆ ಕೆಲಸ ಮಾಡಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು....

fake modi menia…….. ಮೋದಿ ಭಜನೆಯಿಂದ ಕಾಂಗ್ರೆಸ್‌ ಸೋಲು! ಕಾಂಗ್ರೆಸ್‌ ಸೋಲಿಗೆ ಕಾರಣ ಭಾಗ-೦೫ : ಕ್ರಾಂತಿ ಚಿರಾಯುವಾಗದೆ ಅನ್ಯ ದಾರಿಯೆ ಇಲ್ಲ.

ಸಾಹಿತ್ಯ, ಚಿಂತನೆ, ಹೋರಾಟಗಳೆಲ್ಲ ಯಾಕೆ ಬೇಕು ಎನ್ನುವ ಮನಸ್ಥಿತಿ ಹಲವರಲ್ಲಿದೆ. ಸಾಹಿತ್ಯ ಪ್ರಭುತ್ವವನ್ನು ಪ್ರಶ್ನಿಸಿ ಆಡಳಿತವನ್ನು ಜನಪರವಾಗಿಸುವತ್ತ ಕೆಲಸ ಮಾಡುತ್ತದೆ. ಚಿಂತನೆ ಹೊಸ ಹೊಳಹುಗಳ...

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ

ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್‌ ನಾಯಕ ಇಂದ್ರೇಶ್‌ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *