ಅವರಪ್ಪನಾಣೆ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ!

ದೇಶದ ಜನತೆ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಗ್ಯಾರಂಟಿಗಳನ್ನಲ್ಲ: ಆರ್.ಅಶೋಕ್’ಗೆ ಸಿದ್ದು ತಿರುಗೇಟು

ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಬೆಂಗಳೂರು: ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ವಿರೋಧ ಪಕ್ಷದ ನಾಯಕರಾದ ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ. ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ?

ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ನಮ್ಮ ಸರ್ಕಾರದ ಗ್ಯಾರಂಟಿಗಳನ್ನಲ್ಲ. ಅಶೋಕ್ ಅವರೇ, ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ. ಕಳೆದ ಲೋಕಸಭಾ ಚುನಾವಣೆಗಿಂತ ಶೇಕಡಾ 13 ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ನಮ್ಮ ಪಕ್ಷದ ನಡುವಿನ ಮತಪ್ರಮಾಣದ ಅಂತರ ಕೇವಲ 0.63. ಈಗ ಹೇಳಿ ಗೆದ್ದವರು ಯಾರು? ಸೋತವರು ಯಾರು? ಎಂದು ವ್ಯಂಗ್ಯ ಮಾಡಿದ್ದಾರೆ.

ನಮ್ಮ ಗೆಲುವಿನಿಂದ ನಾವು ತೃಪ್ತರಲ್ಲದೆ ಇದ್ದರೂ ರಾಜ್ಯದ ಜನ ಗೆಲ್ಲಿಸಿದ್ದು ನಮ್ಮನ್ನು, ಸೋಲಿಸಿದ್ದು ನಿಮ್ಮನ್ನು ಎನ್ನುವುದನ್ನು ಮರೆಯದಿರಿ. ಜೆಡಿಎಸ್ ಪಕ್ಷದ ಪಾದಕ್ಕೆ ಬಿದ್ದರೂ, 26 ಸ್ಥಾನಗಳಿಂದ 17 ಸ್ಥಾನಕ್ಕೆ ನಿಮ್ಮ ಪಕ್ಷ ಕುಸಿಯುವುದನ್ನು ತಪ್ಪಿಸಲು ಆಗಲಿಲ್ಲ. ಒಂದು ಸ್ಥಾನದಿಂದ ಒಂಬತ್ತು ಸ್ಥಾನಕ್ಕೆ ನಾವು ಏರುವುದನ್ನೂ ನಿಮಗೆ ತಪ್ಪಿಸಲಾಗಲಿಲ್ಲ. ಮೊದಲು ನಿಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಿ ಆ ಮೇಲೆ ನಮ್ಮ ಪಕ್ಷದ ಚುನಾವಣಾ ಫಲಿತಾಂಶದ ವಿಶ್ಲೇಷಣೆ ನಡೆಸಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ. ಕೇಂದ್ರದ ಬಿಜೆಪಿ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೇಂದ್ರದ ಸರ್ಕಾರಿ ಯಂತ್ರದ ದುರುಪಯೋಗ, ಮೋದಿ ನಾಮ ಬಲ, ಅಪಾರವಾದ ಸಂಪನ್ಮೂಲಗಳ ಹೊರತಾಗಿಯೂ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ. ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ.

ದಲಿತರ ಬಗೆಗಿನ ನಿಮ್ಮ ಕಾಳಜಿ ಎಷ್ಟೊಂದು ಹುಸಿಯಾಗಿದೆ ಎನ್ನುವುದಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ ಸಚಿವ ಸಂಪುಟವೇ ಸಾಕ್ಷಿ. ಈ ಸಂಪುಟದಲ್ಲಿ ರಾಜ್ಯದಿಂದ ಒಬ್ಬನೇ ಒಬ್ಬ ದಲಿತ ಇಲ್ಲವೆ ಹಿಂದುಳಿದ ಸಮುದಾಯದ ನಾಯಕನಿಗೆ ಅವಕಾಶ ನೀಡಿಲ್ಲ. ದೇಶದಲ್ಲಿಯೇ ಮೊದಲ ಬಾರಿ ಎಸ್ ಸಿಪಿ/ಟಿಎಸ್ ಪಿ ಕಾಯ್ದೆಯನ್ನು ಜಾರಿಗೊಳಿಸಿ, ಅವರ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಸಂಪನ್ಮೂಲದ ಶೇಕಡಾ 25ರಷ್ಟನ್ನು ಮೀಸಲು ಇಟ್ಟವರು ನಾವು. ನಿಮಗೆ ದಮ್ಮು-ತಾಖತ್ ಇದ್ದರೆ ಈ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಲು ಪ್ರಧಾನಿ ಮೋದಿ ಅವರಿಗೆ ತಿಳಿಸಿ. ಆ ನಂತರ ನಮ್ಮ ಬಗ್ಗೆ ಮಾತನಾಡಿ.

ಡಿ.ಕೆ.ಸುರೇಶ್ ಅವರು ಸೋತಿದ್ದಾರೆ ಎನ್ನುವುದು ನಿಜ. ಆದರೆ ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕೋಡಿ, ದಾವಣಗೆರೆ, ಕಲ್ಬುರ್ಗಿ, ಮತ್ತು ರಾಯಚೂರುಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನೂ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲಿಸಿದ್ದಾರೆ. ಹುಬ್ಬಳ್ಳಿಯ ಅಮಾಯಕ ಹೆಣ್ಣೊಬ್ಬಳ ಹತ್ಯೆಯನ್ನು ನಿಮ್ಮ ಪಕ್ಷ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡ ಕಾರಣಕ್ಕಾಗಿ ನಮಗೆ ಆ ಭಾಗದಲ್ಲಿ ಹಿನ್ನಡೆಯಾಯಿತು. ಇಲ್ಲದೆ ಇದ್ದರೆ ನಿಮ್ಮ ಪಕ್ಷ ಒಂದಂಕಿಗೆ ಇಳಿಯುತ್ತಿತ್ತು. ನಿಮ್ಮ ದೆಹಲಿ ನಾಯಕರ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *