ದೇಶಪಾಂಡೆಯವರಿಗೆ ವಯಸ್ಸಾಯ್ತು….! ಕಾಂಗ್ರೆಸ್‌ ಸೋಲಿಗೆ ಯಾರು ಕಾರಣ? ಭಾಗ-೦೪…

ಮುಖ್ಯಮಂತ್ರಿ, ರಾಜ್ಯಪಾಲ, ‌ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆಗುವ ಎಲ್ಲಾ ಅರ್ಹತೆ ಇರುವ ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ರಾಜ್ಯಪಾಲರೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ. ಬಹುತೇಕ ಎಲ್ಲಾ ಸರ್ಕಾರಗಳಲ್ಲಿ ಮಂತ್ರಿಯಾಗುತಿದ್ದ ದೇಶಪಾಂಡೆಯವರನ್ನು ಈ ಬಾರಿ ಸಚಿವರನ್ನಾಗಿಸದೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿಸಿ ಅಲಂಕಾರಿಕ ವ್ಯಕ್ತಿಯನ್ನಾಗಿಸಲಾಗಿದೆ.

ಇದೇ ಆರ್.‌ ವಿ. ದೇಶಪಾಂಡೆ ಮತ್ತೆ ಸಚಿವರಾದರೂ ಆಶ್ಚರ್ಯವಿಲ್ಲ ಎನ್ನುವ ಸುದ್ದಿ ಚರ್ಚೆಯಾಗುತ್ತಿದೆ.

ನೂತನ ಸಂಸದ ವಿಶ್ವೇಶ್ವರ ಹೆಗಡೆಯವರಂತೆ ಬೇನಾಮಿ ಆಸ್ತಿ ಮಾಡದ, ಮಾಜಿ ಸಂಸದ ಅನಂತಕುಮಾರ ಹೆಗಡೆಯವರಂತೆ ರಾಜಕೀಯವನ್ನು ಸ್ವಾರ್ಥಕ್ಕಷ್ಟೇ ಬಳಸಿಕೊಳ್ಳದ ದೇಶಪಾಂಡೆ ಎಲ್ಲಾ ಮಾಡಿಯೂ ಏನೂ ಮಾಡದಂತಿರುವ ಚಾಣಕ್ಯ.

ಉತ್ತರ ಕನ್ನಡ ಜಿಲ್ಲೆಯ ವಿಷಯಕ್ಕೆ ಬಂದರೆ…. ಮೂರು ದಶಕಗಳ ಕಾಲ ನಿರಂತರ ಅಧಿಕಾರ ಅನುಭವಿಸಿದ ಮೂವರಲ್ಲಿ ಒಬ್ಬರಾದ ದೇಶಪಾಂಡೆ ಯಾರನ್ನೆಲ್ಲಾ ಬೆಳೆಸಿದ್ದಾರೆ ಎಂದರೆ ಉತ್ತರ ಸೊನ್ನೆ.

ಮೂವತ್ತು ವರ್ಷಗಳಲ್ಲಿ ರಮಾನಂದ ನಾಯಕ, ಸಾಯಿ ಗಾಂವ್ಕರ್‌, ಜಿ.ಎಂ. ಶೆಟ್ಟಿ, ಜಗದೀಪ ತಂಗೇರಿ, ಕೆ.ಜಿ.ನಾಗರಾಜ್‌,ಪ್ರಮೋದ್‌ ಹೆಗಡೆ, ಹೊನ್ನಪ್ಪ ನಾಯಕ, ರಾಮಕೃಷ್ಣ ಮೂಲಿಮನೆ, ಆರ್.‌ ಎಸ್.ರಾಯ್ಕರ್‌, ವಿಲಾಸ ನಾಯ್ಕ, ಉದಯ ನಾಯ್ಕ ಸೇರಿದಂತೆ ಯಾರನ್ನೂ ಬೆಳೆಸಿಲ್ಲ.

ದೇಶಪಾಂಡೆಯವರಿಂದ ಬೆಳೆದವರೆಂದರೆ…. ಎಸ್.ಎಲ್‌, ಘೊಟ್ನೇಕರ್‌, ವಿ.ಡಿ.ಹೆಗಡೆ, ಶುಭಲತಾ ಅಸ್ನೋಟಿಕರ್‌ (ಅನಂತಕುಮಾರ ಹೆಗಡೆ, ವಿಶ್ವೇಶ್ವರ ಹೆಗಡೆ, ಶಿವಾನಂದ ಹೆಗಡೆ) ಅವರ್ಯಾರೂ ಇವರೊಂದಿಗೂ ಇಲ್ಲ,ಕಾಂಗ್ರೆಸ್‌ ನಲ್ಲೂ ಇಲ್ಲ. ದೇಶಪಾಂಡೆಯವರನ್ನು ಧಿಕ್ಕರಿಸಿ ಬೆಳೆದವರೆಂದರೆ.. ಅದು ಶಿರಸಿಯ ಭೀಮಣ್ಣ ನಾಯ್ಕ, ಯಲ್ಲಾಪುರದ ಶಿವರಾಮ್‌ ಹೆಬ್ಬಾರ್‌ ಇಬ್ಬರೇ. ಜಿಲ್ಲೆಯಲ್ಲಿ ದೇಶಪಾಂಡೆಯವರಿಂದ ಬೆಳಕಿಗೆ ಬಂದವರೊಬ್ಬರೇ ಅವರು ಭಟ್ಕಳದ ಜೆ.ಡಿ. ನಾಯ್ಕ (ಇವರ ಮಾವ -ಅತ್ತೆ ಕಟ್ಟಾ ಕಾಂಗ್ರೆಸ್ಸಿಗರೆಂಬುದು ಕಾರಣ)

ಇಂಥ ಚರಿತ್ರೆಯ ದೇಶಪಾಂಡೆ ತನಗೆ ಬೇಕಾದವರನ್ನು ಪಕ್ಷದ ಸಂಘಟನೆಯಲ್ಲೇ ಉಳಿಸಿದರು. ಕೆಲವರಿಗೆ ಜಿ.ಪಂ. ಸದಸ್ಯ, ಅಧ್ಯಕ್ಷ, ತಾ.ಪಂ. ಅಧ್ಯಕ್ಷರನ್ನಾಗಿಸಿದರು ಬಿಟ್ಟರೆ ದೇಶಪಾಂಡೆಯವರಿಂದಲೇ ನಾನೀಮಟ್ಟಕ್ಕೆ ಬೆಳೆದೆ ಎನ್ನುವ ಒಬ್ಬರನ್ನೂ ಬೆಳೆಸದ ದೇಶಪಾಂಡೆ ತನ್ನ ೫೦ ವರ್ಷಗಳ ರಾಜಕಾರಣದಲ್ಲಿ ಅರ್ಧಕ್ಕಿಂತ ಹೆಚ್ಚು ಅವಧಿ ಕಾಂಗ್ರೆಸ್‌ ನಲ್ಲೇ ಇದ್ದು ಜನಪ್ರತಿನಿಧಿಯಾಗುತ್ತ ಮಂತ್ರಿಯೂ ಆಗಿದ್ದವರು. ಇವರ ರಾಜಕೀಯ ಜೀವನದಲ್ಲಿ ಒಬ್ಬನೇ ಒಬ್ಬ ಬದ್ಧತೆಯ ಜಾತ್ಯಾತೀತ, ಕಾಂಗ್ರೆಸ್‌ ಮನುಷ್ಯ ಬೆಳೆದಿದ್ದೇ ಇಲ್ಲ ಇದರ ಪರಿಣಾಮ ಈಗ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲಿ ಧೂಳೀಪಟವಾಗುವಂತಾಗಿದೆ.

ಕಾಂಗ್ರೆಸ್‌ ನ ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಅಖಿಲಭಾರತ ವಿಪ್ರ ಸಮ್ಮೇಳನದಲ್ಲಿ ಭಾಗವಹಿಸಿ ಬ್ರಾಹ್ಮಣರು ಒಂದಾಗಬೇಕು ಎಂದು ಕರೆಕೊಡುತ್ತಾರೆ. ಅಧಿಕಾರಿಗಳು, ಅವಕಾಶಗಳು ಕೂಡಿ ಬಂದಾಗಲೆಲ್ಲಾ ಗುಟ್ಟಾಗಿ ಬ್ರಾಹ್ಮಣರಿಗೆ ಮೀಸಲಾತಿ ಕಲ್ಫಿಸುತ್ತಾರೆ ಎನ್ನುವ ಗುರುತರ ಆರೋಪ ಇವರ ಮೇಲಿದೆ. ಇದೇ ದೇಶಪಾಂಡೆ ೨೦೧೯ ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕನ್ನಡದ ಕ್ಷೇತ್ರವನ್ನು ಜೆ.ಡಿ.ಎಸ್.‌ ಗೆ ಬಿಟ್ಟುಕೊಟ್ಟು ಕಾಂಗ್ರೆಸ್‌ ಉಮೇದುವಾರಿಕೆ ಇಲ್ಲದಂತೆ ಮಾಡಿಬಿಟ್ಟಿದ್ದರು.

ಈ ಬಾರಿ ಡಾ. ಅಂಜಲಿ ನಿಂಬಾಳ್ಕರ್‌ ಗೆ ಅವಕಾಶ ನೀಡಿ ಜಿಲ್ಲೆಯ ಬಹುಸಂಖ್ಯಾತರ ವಿಶ್ವಾಸ ಕಳೆದುಕೊಂಡರು. ಇದರ ಪರಿಣಾಮ ವಿಶ್ವೇಶ್ವರ ಹೆಗಡೆಯವರ ಭರ್ಜರಿ ಗೆಲುವು. ಈ ಹಿಂದೆ ಶಿರಸಿ ಕ್ಷೇತ್ರದಲ್ಲಿ ಗುಟ್ಟಾಗಿ ಕಾಗೇರಿಯವರಿಗೆ ಸಹಕರಿಸುತಿದ್ದ ದೇಶಪಾಂಡೆ ಈ ಬಾರಿ ಕೂಡಾ ಗೇಮ್‌ ಮಾಡಿದರೆ ಎಂದು ಸಂಶಯಿಸುವವರಿದ್ದಾರೆ.!

ಈ ಹಿಂದೆಲ್ಲಾ ತಾನು ತನ್ನ ಕುಟುಂಬದ ಉಮೇದುವಾರಿಕೆ ಹೊರತು ಪಡಿಸಿ ಉಳಿದ ಸಮಯಗಳಲ್ಲಿ ಅನಂತಕುಮಾರ ಮತ್ತು ವಿಶ್ವೇಶ್ವರ ಹೆಗಡೆಯವರಿಗೆ ಸಹರಿಸುತಿದ್ದ ದೇಶಪಾಂಡೆ ಜಿಲ್ಲೆಯ ಹಿಡಿತ ಬ್ರಾಹ್ಮಣರ ಕೈ ತಪ್ಪಬಾರದೆಂದು ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ದೋಸ್ತಿ ನಿಭಾಯಿಸುತಿದ್ದರೆ? ಎನ್ನುವ ಅನುಮಾನಗಳಿವೆ!

ಏನೇ ಇರಲಿ ದೇಶಪಾಂಡೆ ತನ್ನ ರಾಜಕೀಯ ಜೀವನದಲ್ಲಿ ಕಠ್ಠರ್‌ ಕಾಂಗ್ರೆಸ್ಸಿಗ, ಜಾತ್ಯಾತೀತ ಆಗದೆ ಉತ್ತರ ಕನ್ನಡ ಜಿಲ್ಲೆಯನ್ನು ಕೋಮುವಾದಿಗಳ ಆಡೊಂಬಲ ಮಾಡಿದ್ದಾರೆ ಎನ್ನುವ ಆರೋಪಕ್ಕೆ ತುತ್ತಾಗಿದ್ದಾರೆ. ಕಾಂಗ್ರೆಸ್‌ ನಲ್ಲಿದ್ದು ಲಾಭದಾಯಕ ಸಚಿವ ಸ್ಥಾನ ಅಲಂಕರಿಸುತಿದ್ದ ಆರ್.‌ ವಿ. ದೇಶಪಾಂಡೆ ಕಾಂಗ್ರೆಸ್‌ ನ ಮತದಾರರಾದ ಜಿಲ್ಲೆಯ ಬಹುಸಂಖ್ಯಾತರನ್ನು ತುಳಿದು ಆಳ್ವಾ ಜೊತೆ ಸ್ಫರ್ಧೆಗಿಳಿದರು ಎಂಬುವುದನ್ನು ಬಿಟ್ಟರೆ ಉತ್ತರ ಕನ್ನಡದ ಅಭಿವೃದ್ಧಿ, ಎರಡನೇ ಹಂತದ ನಾಯಕರ ಸೃಷ್ಟಿ ವಿಚಾರದಲ್ಲಿ ದೇಶಪಾಂಡೆವರದ್ದು ಜೀರೋ ಸಾಧನೆ.

ಇದೇ ವಿಚಾರದಲ್ಲಿ ಅನಂತಕುಮಾರ ಹೆಗಡೆ, ವಿಶ್ವೇಶ್ವರ ಹೆಗಡೆಯವರಿಗೆ ಸ್ಫರ್ಧೆ ನೀಡಿದ ಇವರು ಅವರಂತೆಯೇ ಜಿಲ್ಲೆಯ ಮತ್ತೊಬ್ಬ ಎರಡನೇ ಹಂತದ ನಾಯಕನನ್ನು ಪೋಶಿಸಿಲ್ಲ ಇದೇ ಉತ್ತರ ಕನ್ನಡ ಜಿಲ್ಲೆಗೆ ಶಾಪವಾಗಿದ್ದು ಈ ಮೂವರು ಬ್ರಾಹ್ಮಣ ಮುಖಂಡರು ತಮ್ಮ ಯುಗದ ನಂತರ ಉತ್ತರ ಕನ್ನಡ ಜಿಲ್ಲೆಗೆ ಒಬ್ಬ ನಾಯಕನನ್ನೂ ಪರಿಚಯಿಸದಿರುವುದು ಜಿಲ್ಲೆಯ ರಾಜಕೀಯ ದುರಂತ. ಕಾಂಗ್ರೆಸ್‌ ಯಾಕೆ ಸೋಲುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರ ಕನ್ನಡದಿಂದ ನಿರಂತರವಾಗಿ ಮೂವರು ಬ್ರಾಹ್ಮಣ ಮುಖಂಡರೇ ಗೆಲ್ಲುತಿದ್ದರು ಎನ್ನುವುದೇ ಉತ್ತರ. ಈ ಮೂವರ ರಾಜಕೀಯ ಸ್ವಾರ್ಥಕ್ಕೆ ಕನಿಷ್ಟ ನೂರಾರು ಯುವ ನಾಯಕರು ಬಲಿಯಾಗಿ ಹುತಾತ್ಮರಾಗಿದ್ದಾರೆ ಎನ್ನುವುದು ವಾಸ್ತವ. ಹೆಚ್ಚಿನ ಸತ್ಯಗಳನ್ನು ಬಹುಜನರಿಗೆ ತಿಳಿಸದೆ ಜಿಲ್ಲೆಯನ್ನು ಉತ್ತರ ಕಾಣದ ಜಿಲ್ಲೆಯಾಗಿಸಿದ್ದೇ ಮೂರು ದಶಕಗಳ ಮೂವರು ನಾಯಕರ ಸಾಧನೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *