ಕೊಲೆ ಪ್ರಕರಣ: ಪವಿತ್ರಾ ಗಂಡ ಏನಂತಾರೆ ಗೊತ್ತೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಬಗ್ಗೆ ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಿಷ್ಟು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಬಂಧನವಾಗಿದ್ದು, ಆರೋಪಿ ನಂಬರ್ 1 ಆಗಿದ್ದಾರೆ. ರೇಣುಕಾ ಸ್ವಾಮಿಯ ಕೊಲೆಗೆ ಮೂಲ ಕಾರಣವೇ ಪವಿತ್ರಾ ಗೌಡ ಎನ್ನಲಾಗಿದೆ.

ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಬಂಧನವಾಗಿದ್ದು, ಆರೋಪಿ ನಂಬರ್ 1 ಆಗಿದ್ದಾರೆ. ರೇಣುಕಾ ಸ್ವಾಮಿಯ ಕೊಲೆಗೆ ಮೂಲ ಕಾರಣವೇ ಪವಿತ್ರಾ ಗೌಡ ಎನ್ನಲಾಗಿದೆ.

ಜೈಲಿನಲ್ಲಿರುವ ಪವಿತ್ರಾ ಗೌಡ ಬಗ್ಗೆ ಆಕೆಯ ಮಾಜಿ ಪತಿ ಸಂಜಯ್ ಸಿಂಗ್ ಮಾತನಾಡಿದ್ದಾರೆ. ನಾನು ಹಾಗೂ ಪವಿತ್ರಾ ಗೌಡ ದೂರವಾಗಿ 12 ವರ್ಷಗಳಾಗಿವೆ. ನನಗೂ ಅವರಿಗೂ ಯಾವುದೇ ರೀತಿಯ ಸಂಪರ್ಕವಾಗಲಿ, ಸಂಬಂಧವಾಗಲಿ ಇಲ್ಲ ಎಂದಿದ್ದಾರೆ. ‘ನಾವಿಬ್ಬರೂ ಬೆಂಗಳೂರಿನಲ್ಲಿಯೇ ಮೊದಲು ಪರಿಚಯವಾಗಿದ್ದವು. ಮದುವೆಯಾದವು, ಆದರೆ ನಮ್ಮಿಬ್ಬರ ವೃತ್ತಿಗಳು ಬೇರೆ ಬೇರೆ ಆಗಿದ್ದವು. ನಾನು ಐಟಿ ಉದ್ಯಮದವನು, ಅವರ ಸಿನಿಮಾ ಕ್ಷೇತ್ರದವರು. ನಮ್ಮಿಬ್ಬರ ನಡುವೆ ಇದೇ ಕಾರಣಕ್ಕೆ ಹೊಂದಾಣಿಕೆ ಕೊರತೆ ಇತ್ತು. ಪರಸ್ಪರರಿಗೆ ಸಮಯ ಕೊಟ್ಟುಕೊಳ್ಳಲು ಸಾಧ್ಯವಾಗಿರಲಿಲ್ಲ ಹಾಗಾಗಿ ವಿಚ್ಛೇದನ ಪಡೆದುಕೊಂಡೆವು ಎಂದಿದ್ದಾರೆ ಸಂಜಯ್ ಸಿಂಗ್.

ಮಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಂಜಯ್ ಸಿಂಗ್, ‘ಮಗಳೊಂದಿಗೆ ಬಹಳ ಕಡಿಮೆ ಮಾತನಾಡಿದ್ದೇನೆ. ಈ 12 ವರ್ಷಗಳಲ್ಲಿ ನಾನು ಒಂದೆರಡು ಬಾರಿಯಷ್ಟೆ ನನ್ನ ಮಗಳ ಬಳಿ ಮಾತನಾಡಿದ್ದೇನೆ. ನನ್ನ ಹಾಗೂ ಪವಿತ್ರಾರ ವಿಚ್ಛೇದನಕ್ಕೆ ವೃತ್ತಿ ಬೇರೆಯಾಗಿರುವುದೇ ಮೂಲ ಕಾರಣ ಆಗಿತ್ತು. ಬೇರೆಯೇನಲ್ಲ ಎಂದಿದ್ದಾರೆ ಸಂಜಯ್ ಸಿಂಗ್.

ಪವಿತ್ರಾ ಗೌಡ

ನಾನು ಅವಳನ್ನ ಚಿನ್ನು ಅಂತ ಕರೆಯುತ್ತಿದ್ದೆ. ಅವಳು ಸಂಜಯ್ ಅನ್ನುತ್ತಿದ್ದಳು. ನಾವಿಬ್ಬರು ಜೊತೆಗೆ ಇರಲು ಸಾಧ್ಯವಿಲ್ಲ. ನಾನು ಮತ್ತು ದರ್ಶನ್ ಗಂಡ ಹೆಂಡತಿ ಆಗಲು ಇಷ್ಟಪಟ್ಟಿದ್ದೇವೆ ಎಂದು ಹೇಳಿದ್ದಳು. ಅದಕ್ಕೆ ನನ್ನಿಂದ ಏನು ಆಗಬೇಕು ಎಂದು ಕೇಳಿದೆ. ಅದಕ್ಕೆ ಡಿವೋರ್ಸ್‌ ಕೊಡು ಎಂದು ಹೇಳಿದ್ದಳು. ನಾನು ಸರಿ ಎಂದು ಡಿವೋರ್ಸ್‌ ಕೊಟ್ಟೆ. ಬಳಿಕ ಆಕೆ ದರ್ಶನ್‌ ಜೊತೆ ಜೀವನ ಮಾಡಲು ಶುರು ಮಾಡಿದಳು.

ಆ ಬಳಿಕ ಆಕೆ ಮದುವೆ ಆಗಿದ್ದಾಳೋ ಇಲ್ವೋ ಗೊತ್ತಿಲ್ಲ. ಯಾಕೆಂದರೆ ನನಗೆ ಅವರ ಮೇಲೆ ಯಾವುದೇ ಆಸಕ್ತಿ ಇಲ್ಲ. ಆದರೆ ಬಹಳ‌ ದಿನಗಳ ಬಳಿಕ ಒಮ್ಮೆ 2017, 2018ರಲ್ಲಿ ಮಗಳನ್ನು ನೋಡಲು ನಾನು ಬೆಂಗಳೂರಿನಲ್ಲಿ ಭೇಟಿಯಾದೆ. ಆದಾದ ನಂತರ ನಾನು ಇಲ್ಲಿಯವರೆಗೂ ಮಗಳನ್ನು ನೋಡಲೇ ಇಲ್ಲ. ಅವರ‌ ಮೂಡ್‌ ಅನ್ನು ಯಾಕೆ ಹಾಳಮಾಡಬೇಕು ಅಂತ ಸುಮ್ಮನಾದೆ.

ನನಗೆ ಪವಿತ್ರ ಗೌಡ ತುಂಬಾ ಚೆನ್ನಾಗಿ ಗೊತ್ತು. ಬೈ ಮಿಸ್ ಇದು ಆಗಿರಬಹುದು. ಅವಳು ಮೆದುಳಿನಿಂದ ಬಹಳ ಸ್ಟ್ರಾಂಗ್ ಇದ್ದಾಳೆ. ಹೃದಯದಿಂದ ಬಹಳ ಸಾಫ್ಟ್ ಇದ್ದಾಳೆ. ಏನೋ‌ ತಪ್ಪು‌ಆಗಿದೆ. ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಅವಳು. ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು ಎಂದು ಹೇಳಿದ್ದಾರೆ. (ಕಪ್ರ.ಕಾಮ್)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *