ಕೊಲೆ ಪ್ರಕರಣ: ಪವಿತ್ರಾ ಗಂಡ ಏನಂತಾರೆ ಗೊತ್ತೆ?

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪವಿತ್ರಾ ಗೌಡ ಬಗ್ಗೆ ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಿಷ್ಟು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಬಂಧನವಾಗಿದ್ದು, ಆರೋಪಿ ನಂಬರ್ 1 ಆಗಿದ್ದಾರೆ. ರೇಣುಕಾ ಸ್ವಾಮಿಯ ಕೊಲೆಗೆ ಮೂಲ ಕಾರಣವೇ ಪವಿತ್ರಾ ಗೌಡ ಎನ್ನಲಾಗಿದೆ.

ಪವಿತ್ರಾ ಗೌಡ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಬಂಧನವಾಗಿದ್ದು, ಆರೋಪಿ ನಂಬರ್ 1 ಆಗಿದ್ದಾರೆ. ರೇಣುಕಾ ಸ್ವಾಮಿಯ ಕೊಲೆಗೆ ಮೂಲ ಕಾರಣವೇ ಪವಿತ್ರಾ ಗೌಡ ಎನ್ನಲಾಗಿದೆ.

ಜೈಲಿನಲ್ಲಿರುವ ಪವಿತ್ರಾ ಗೌಡ ಬಗ್ಗೆ ಆಕೆಯ ಮಾಜಿ ಪತಿ ಸಂಜಯ್ ಸಿಂಗ್ ಮಾತನಾಡಿದ್ದಾರೆ. ನಾನು ಹಾಗೂ ಪವಿತ್ರಾ ಗೌಡ ದೂರವಾಗಿ 12 ವರ್ಷಗಳಾಗಿವೆ. ನನಗೂ ಅವರಿಗೂ ಯಾವುದೇ ರೀತಿಯ ಸಂಪರ್ಕವಾಗಲಿ, ಸಂಬಂಧವಾಗಲಿ ಇಲ್ಲ ಎಂದಿದ್ದಾರೆ. ‘ನಾವಿಬ್ಬರೂ ಬೆಂಗಳೂರಿನಲ್ಲಿಯೇ ಮೊದಲು ಪರಿಚಯವಾಗಿದ್ದವು. ಮದುವೆಯಾದವು, ಆದರೆ ನಮ್ಮಿಬ್ಬರ ವೃತ್ತಿಗಳು ಬೇರೆ ಬೇರೆ ಆಗಿದ್ದವು. ನಾನು ಐಟಿ ಉದ್ಯಮದವನು, ಅವರ ಸಿನಿಮಾ ಕ್ಷೇತ್ರದವರು. ನಮ್ಮಿಬ್ಬರ ನಡುವೆ ಇದೇ ಕಾರಣಕ್ಕೆ ಹೊಂದಾಣಿಕೆ ಕೊರತೆ ಇತ್ತು. ಪರಸ್ಪರರಿಗೆ ಸಮಯ ಕೊಟ್ಟುಕೊಳ್ಳಲು ಸಾಧ್ಯವಾಗಿರಲಿಲ್ಲ ಹಾಗಾಗಿ ವಿಚ್ಛೇದನ ಪಡೆದುಕೊಂಡೆವು ಎಂದಿದ್ದಾರೆ ಸಂಜಯ್ ಸಿಂಗ್.

ಮಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಂಜಯ್ ಸಿಂಗ್, ‘ಮಗಳೊಂದಿಗೆ ಬಹಳ ಕಡಿಮೆ ಮಾತನಾಡಿದ್ದೇನೆ. ಈ 12 ವರ್ಷಗಳಲ್ಲಿ ನಾನು ಒಂದೆರಡು ಬಾರಿಯಷ್ಟೆ ನನ್ನ ಮಗಳ ಬಳಿ ಮಾತನಾಡಿದ್ದೇನೆ. ನನ್ನ ಹಾಗೂ ಪವಿತ್ರಾರ ವಿಚ್ಛೇದನಕ್ಕೆ ವೃತ್ತಿ ಬೇರೆಯಾಗಿರುವುದೇ ಮೂಲ ಕಾರಣ ಆಗಿತ್ತು. ಬೇರೆಯೇನಲ್ಲ ಎಂದಿದ್ದಾರೆ ಸಂಜಯ್ ಸಿಂಗ್.

ಪವಿತ್ರಾ ಗೌಡ

ನಾನು ಅವಳನ್ನ ಚಿನ್ನು ಅಂತ ಕರೆಯುತ್ತಿದ್ದೆ. ಅವಳು ಸಂಜಯ್ ಅನ್ನುತ್ತಿದ್ದಳು. ನಾವಿಬ್ಬರು ಜೊತೆಗೆ ಇರಲು ಸಾಧ್ಯವಿಲ್ಲ. ನಾನು ಮತ್ತು ದರ್ಶನ್ ಗಂಡ ಹೆಂಡತಿ ಆಗಲು ಇಷ್ಟಪಟ್ಟಿದ್ದೇವೆ ಎಂದು ಹೇಳಿದ್ದಳು. ಅದಕ್ಕೆ ನನ್ನಿಂದ ಏನು ಆಗಬೇಕು ಎಂದು ಕೇಳಿದೆ. ಅದಕ್ಕೆ ಡಿವೋರ್ಸ್‌ ಕೊಡು ಎಂದು ಹೇಳಿದ್ದಳು. ನಾನು ಸರಿ ಎಂದು ಡಿವೋರ್ಸ್‌ ಕೊಟ್ಟೆ. ಬಳಿಕ ಆಕೆ ದರ್ಶನ್‌ ಜೊತೆ ಜೀವನ ಮಾಡಲು ಶುರು ಮಾಡಿದಳು.

ಆ ಬಳಿಕ ಆಕೆ ಮದುವೆ ಆಗಿದ್ದಾಳೋ ಇಲ್ವೋ ಗೊತ್ತಿಲ್ಲ. ಯಾಕೆಂದರೆ ನನಗೆ ಅವರ ಮೇಲೆ ಯಾವುದೇ ಆಸಕ್ತಿ ಇಲ್ಲ. ಆದರೆ ಬಹಳ‌ ದಿನಗಳ ಬಳಿಕ ಒಮ್ಮೆ 2017, 2018ರಲ್ಲಿ ಮಗಳನ್ನು ನೋಡಲು ನಾನು ಬೆಂಗಳೂರಿನಲ್ಲಿ ಭೇಟಿಯಾದೆ. ಆದಾದ ನಂತರ ನಾನು ಇಲ್ಲಿಯವರೆಗೂ ಮಗಳನ್ನು ನೋಡಲೇ ಇಲ್ಲ. ಅವರ‌ ಮೂಡ್‌ ಅನ್ನು ಯಾಕೆ ಹಾಳಮಾಡಬೇಕು ಅಂತ ಸುಮ್ಮನಾದೆ.

ನನಗೆ ಪವಿತ್ರ ಗೌಡ ತುಂಬಾ ಚೆನ್ನಾಗಿ ಗೊತ್ತು. ಬೈ ಮಿಸ್ ಇದು ಆಗಿರಬಹುದು. ಅವಳು ಮೆದುಳಿನಿಂದ ಬಹಳ ಸ್ಟ್ರಾಂಗ್ ಇದ್ದಾಳೆ. ಹೃದಯದಿಂದ ಬಹಳ ಸಾಫ್ಟ್ ಇದ್ದಾಳೆ. ಏನೋ‌ ತಪ್ಪು‌ಆಗಿದೆ. ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಅವಳು. ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು ಎಂದು ಹೇಳಿದ್ದಾರೆ. (ಕಪ್ರ.ಕಾಮ್)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *