ಮೀನು ಕಚ್ಚಿ ಸಾವು!

ದೇವಬಾಗ್: ಬಲೆಗೆ ಬಿದ್ದಿದ್ದ ‘jellyfish’ ಕುಟುಕಿ ಮೀನುಗಾರ ಸಾವು!

ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು ಅನ್ನೋದಕ್ಕೆ ಈ ಜೆಲ್ಲಿ ಮೀನೇ ಉದಾಹರಣೆ. ಈ ಮೀನು ಎಲ್ಲವನ್ನೂ ಕಾಲಿನ ಮೂಲಕವೇ ಗ್ರಹಿಸುತ್ತದೆ. ಅದರ ಮೂಲಕವೇ ಶತ್ರುಗಳಿಗೆ ಕುಟುಕುತ್ತದೆ. ಈ ರೀತಿ ಕುಟುಕಿದರೆ ಕೆಲವೊಮ್ಮೆ ಸಾವು ಸಂಭವಿಸುತ್ತವೆ.

ಕಾರವಾರದ ದಡಕ್ಕೆ ಬಂದ ಜೆಲ್ಲಿ ಮೀನು

ಕಾರವಾರದ ದಡಕ್ಕೆ ಬಂದ ಜೆಲ್ಲಿ ಮೀನು

ದೇವಬಾಗ್ (ಉತ್ತರ ಕನ್ನಡ): ಮೀನು ಯಾರಿಗೂ ಏನೂ ಮಾಡೋಲ್ಲ ಅನ್ನೋದೇನೋ ನಿಜ. ಆದರೆ, ಅದರಲ್ಲೂ ವಿಷಕಾರಿ ಮೀನುಗಳು ಉಂಟು ಅನ್ನೋದಕ್ಕೆ ಈ ಜೆಲ್ಲಿ ಮೀನೇ ಉದಾಹರಣೆ. ಈ ಮೀನು ಎಲ್ಲವನ್ನೂ ಕಾಲಿನ ಮೂಲಕವೇ ಗ್ರಹಿಸುತ್ತದೆ. ಅದರ ಮೂಲಕವೇ ಶತ್ರುಗಳಿಗೆ ಕುಟುಕುತ್ತದೆ. ಈ ರೀತಿ ಕುಟುಕಿದರೆ ಕೆಲವೊಮ್ಮೆ ಸಾವು ಸಂಭವಿಸುತ್ತವೆ.

ಕಾರವಾರ ಸಮೀಪದ ದೇವಬಾಗ್‌ನಲ್ಲಿ ಮೀನಿನ ಬಲೆಯಲ್ಲಿ ಸಿಲುಕಿದ್ದ ಜೆಲ್ಲಿ ಫಿಷ್ ವೊಂದು ಮೀನುಗಾರನಿಗೆ ಕುಟುಕಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯನ್ನು ಕೃಷ್ಣ ಎಂದು ಗುರ್ತಿಸಲಾಗಿದೆ. ಬಲೆಗೆ ಬಿದ್ದಿದ್ದ ಜೆಲ್ಲಿ ಫಿಷ್ ನನ್ನು ಕೃಷ್ಣ ಅವರು ಬಲೆಯಿಂದ ತೆಗೆದು ಸಮುದ್ರಕ್ಕೆ ಎಸೆದಿದ್ದರು ಎಂದು ಸ್ನೇಹಿತರು ಹಾಗೂ ಸಂಬಂಧಿಕರು ಹೇಳಿದ್ದಾರೆ.

ಮೀನನ್ನು ಸಮುದ್ರಕ್ಕೆ ಎಸೆದ ಕೆಲ ನಿಮಿಷಗಳ ಬಳಿಕ ಚರ್ಮದ ಮೇಲೆ ಮತ್ತು ಕಣ್ಣುಗಳಲ್ಲು ತೀವ್ರತರ ತುರಿಕೆ ಆರಂಭವಾಗಿತ್ತು. ಕೂಡಲೇ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು. ಕೃಷ್ಣ ಅವರನ್ನು ವೆಂಟಿಲೇಟರ್ ಸಪೋರ್ಟ್ ನಲ್ಲಿ ಇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಈ ಘಟನೆ ಸಮುದ್ರ ಜೀವಶಾಸ್ತ್ರಜ್ಞರಲ್ಲಿ ಅಚ್ಚರಿಯನ್ನುಂಟು ಮಾಡಿದೆ. ಏನಾಯಿತು ಮತ್ತು ಯಾವ ಜೆಲ್ಲಿ ಮೀನುಗಳು ಅವರನ್ನು ಕುಟುಕಿದೆ ಎಂಬುದನ್ನು ವಿವರಿಸುವುದು ಕಷ್ಟ ಸಾಧ್ಯ. ಏಕೆಂದರೆ ಇಲ್ಲಿ ಕಂಡುಬರುವ ಸಾಕಷ್ಟು ಜೆಲ್ಲಿ ಮೀನುಗಳು ಅಪಾಯಗಳನ್ನು ತಂದೊಡ್ಡುವ ಮೀನುಗಳಲ್ಲ. ಈ ಮೀನುಗಳು ಕುಟುಕಿದರೆ ಕೇವಲ ಕಿರಿಕಿರಿಯಾಗಬಹುದು. ಕೇಪ್ ಟೌನ್, ಸಿಡ್ನಿ, ಮೆಲ್ಬೋರ್ನ್, ಪರ್ತ್, ಭಾರತ ಮತ್ತು ಜಪಾನ್ ಸುತ್ತಮುತ್ತಲಿನ ಉಷ್ಣವಲಯದ ನೀರಿನಲ್ಲಿ ಕಂಡುಬರುವ ಬಾಕ್ಸ್ ಜೆಲ್ಲಿ ಮೀನುಗಳು ಮಾರಣಾಂತಿಕವಾಗಿದೆ. ದೇವಬಾಗ್‌ನಲ್ಲಿ ನಡೆದ ಘಟನೆ ಬಹುಶಃ ಈ ಪ್ರದೇಶದಲ್ಲಿಯೇ ಮೊದಲ ಪ್ರಕರಣವಾಗಿದೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಾಗರ ಜೀವಶಾಸ್ತ್ರ ವಿಭಾಗದ ಪ್ರೊ.ಶಿವಕುಮಾರ ಹರಗಿ ಅವರು ಹೇಳಿದ್ದಾರೆ.

ಬಾಕ್ಸ್ ಜೆಲ್ಲಿ ಫಿಶ್ ನೋಡಲು ಸುಂದರವಾಗಿದೆ, ಆದರೆ ಅಷ್ಟೇ ಅಪಾಯಕಾರಿ. ಬಾಕ್ಸ್ ಜೆಲ್ಲಿ ಮೀನು ವಿಶ್ವದ ಅತ್ಯಂತ ವಿಷಕಾರಿ ಜೀವಿಗಳಲ್ಲಿ ಒಂದಾಗಿದೆ. ಇದರ ವಿಷವು ಏಕಕಾಲದಲ್ಲಿ 60 ಜನರನ್ನು ಕೊಲ್ಲುವ ಸಾಮರ್ಥ್ಯ ಹೊಂದಿದೆ ಎನ್ನುತ್ತವೆ ಅಧ್ಯಯನಗಳು. ಇದರ ವಿಷವು ಮನುಷ್ಯನ ದೇಹವನ್ನು ಪ್ರವೇಶಿಸಿದರೆ ಒಂದು ನಿಮಿಷದಲ್ಲಿ ಸಾಯುವಷ್ಟು ತೀವ್ರತೆ ಹೊಂದಿದೆ. (ಕಪ್ರ.ಕಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

ಪಿ.ಎಂ.ಶ್ರೀ ಎಲ್.ಕೆ.ಜಿ.ಗೆ ಚಾಲನೆ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ...

ಎಚ್ಚರ!: ಒಟಿಪಿ ಬೇಕೇ ಇಲ್ಲ, ಆದರೂ ನಿಮ್ಮ ಖಾತೆಗೆ ಬೀಳುತ್ತೆ ಕನ್ನ!

https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಸೂರಜ್ ರೇವಣ್ಣ ಹಾಸನ: ಅಸಹಜ ಲೈಂಗಿಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *