ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ ದರಿದ್ರ ಸ್ಥಿತಿ ಈಗ ನಿರ್ಮಾಣವಾಗಿದೆ.

ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ

ಬಾಗಲಕೋಟೆ: ಕನ್ನಡ ಓದಲು, ಬರೆಯಲು ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರಕಾರಕ್ಕೆ ಕಪ್ಪು ಚುಕ್ಕೆ ಎಂದು ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ವ್ಯಂಗ್ಯವಾಡಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ ದರಿದ್ರ ಸ್ಥಿತಿ ಈಗ ನಿರ್ಮಾಣವಾಗಿದೆ. ಶಿಕ್ಷಣ ಸಚಿವರು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತಿದ್ದಾರೆ. ಅವರಿಗೆ ಕನ್ನಡ ಬರುವುದಿಲ್ಲ. ಅವರ ಕೂದಲು ನೋಡಿದರೆ ಭ್ರಮನಿರಸನವಾಗುತ್ತದೆ. ತಂದೆಗೆ ಕನ್ನಡ ಚೆನ್ನಾಗಿ ಗೊತ್ತಿತ್ತು. ಆದರೆ ಮಧು ಅವರಿಗೆ ಸಚಿವರು ಹೇಗಿರಬೇಕು ಎಂಬ ಕಾಮನ್ ಸೆನ್ಸ್ ಇಲ್ಲ. ಈ ಸಚಿವರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ನಮ್ಮ ರಾಜಕಾರಣಿಗಳು ಕನ್ನಡ ಉಳಿಸುವ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತು ವಿದೇಶದಲ್ಲಿ ವಾಸಿಸುತ್ತಾರೆ. ಕನ್ನಡ ಕಲಿತರೆ ಅನ್ನಕ್ಕೆ ತೊಂದರೆಯಿಲ್ಲ ಎಂಬುದಕ್ಕೆ ನನ್ನ ಮಕ್ಕಳು ಉದಾಹರಣೆ. ನನ್ನ ಮೂರು ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿತು ಒಳ್ಳೆಯ ಹುದ್ದೆಯಲ್ಲಿದ್ದಾರೆ. ಒಬ್ಬ ಮಗ ತಂದೆ, ತಾಯಿ ನೋಡಿಕೊಳ್ಳಲು ಊರಿನಲ್ಲೇ ವ್ಯಾಪಾರ ನಡೆಸುತ್ತಿದ್ದಾನೆ. ತಂದೆ, ತಾಯಿ ಗೌರವಿಸುವ ಗುಣವನ್ನೂ ಕನ್ನಡ ಕಲಿಸುತ್ತದೆ. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಇಂಗ್ಲಿಷ್ ಕಲಿಯಲು ಶಿಕ್ಷರನ್ನಿಟ್ಟುಕೊಂಡರೂ ಕಲಿಯಲು ಸಾಧ್ಯವಾಗಲಿಲ್ಲ ಎಂದರು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *