ಗ್ರಾಮ ಪಂಚಾಯತ್‌ ಗಳಿಗೆ ಖರ್ಗೆ ನಿರ್ಧೇಶನ ಏನು ಗೊತ್ತೆ?

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು.

ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಡೆಂಘಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.

ಕುಡಿಯುವ ನೀರು ಸರಬರಾಜು ಟ್ಯಾಂಕ್ ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಘಿ ಹರಡುವಿಕೆ ತಡೆ ಮತ್ತು ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ.

ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು; ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು, ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿಯುವಂತೆ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡುವುದರ ಜೊತೆಗೆ ಈಗಾಗಲೇ ಇರುವ ಚರಂಡಿಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮತ್ತು ಚರಂಡಿಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ

ಕೊಳವೆ ಬಾವಿಗಳು ಹಾಗೂ ನೀರು ಸರಬರಾಜು ಪೈಪುಗಳು ಒಳಚರಂಡಿಯಿಂದ ದೂರದಲ್ಲಿರುವಂತೆ ಕ್ರಮವಹಿಸುವುದು ಮತ್ತು ಪೈಪುಗಳಲ್ಲಿ ನೀರು ಸೋರಿಕೆಯಾಗದಂತೆ ನಿಗಾವಹಿಸಬೇಕು; ಗ್ರಾಮಗಳಲ್ಲಿರುವ ಸಮುದಾಯದ ಶೌಚಾಲಯಗಳಲ್ಲಿ ಹಾಗೂ ಮನೆಗಳ ಶೌಚಾಲಯಗಳ ಪಕ್ಕದಲ್ಲಿರುವ ನೀರಿನ ತೊಟ್ಟಿಗಳಿಗೆ ಮುಚ್ಚಳವನ್ನು ಅಳವಡಿಸಬೇಕು ಹಾಗೂ ತೊಟ್ಟಿಯನ್ನು ಸ್ವಚ್ಛಗೊಳಿಸಬೇಕು; ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು; ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಮತ್ತು ಮಳೆ ನೀರು ಸಂಗ್ರಹವಾಗದಂತೆ ಕ್ರಮ ವಹಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟೆಚ್ಚರ ನೀಡಿದ್ದಾರೆ.

ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು; ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘಿ ನಿಯಂತ್ರಣಕ್ಕೆ ಅರಿವು ಮೂಡಿಸಬೇಕು ಎಂದು ಸೂಚಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *