ಉತ್ತರ ಕನ್ನಡ: ಭಾರೀ ಮಳೆಗೆ ಭೋರ್ಗರೆಯುತ್ತಿರುವ ಜಲಪಾತ; ಪ್ರವಾಸಿಗರಿಗೆ ನಿರ್ಬಂಧ

ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿಯು ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ.

ಕುಂಬ್ವಾಡೆ ಜಲಪಾತ

ಕುಂಬ್ವಾಡೆ ಜಲಪಾತ

ಉತ್ತರ ಕನ್ನಡ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಪಾತಗಳ ಜಿಲ್ಲೆಯಲ್ಲಿ ಫಾಲ್ಸ್​ಗಳು ಮೈತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪ್ರವಾಸಿಗರ ವೀಕ್ಷಣೆಗೆ ನಿಷೇಧ ಹೇರಿದ್ದಾರೆ.

ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡದ ಆಡಳಿತ ಮಂಡಳಿಯು ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ.

ಭಾರೀ ಮಳೆ ಮತ್ತು ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ, ಮಳೆ ವೇಳೆ ನದಿಯ ಪ್ರವಾಹವು ವೇಗವಾಗಿರುತ್ತದೆ. ಇದಕ್ಕೆ ಪೂರಕವೆಂಬಂತೆ ಸಾಥೋಡಿ ಜಲಪಾತ, ಮಾಗೋಡು ಜಲಪಾತ, ಸಿದ್ದಾಪುರದ ಶಾಲ್ಮಲಾ ನದಿಯಲ್ಲಿ ಹಲವಾರು ಅವಘಡಗಳು ಸಂಭವಿಸಿದ್ದು, ದಾಂಡೇಲಿಯಲ್ಲಿ ಇಡೀ ಕುಟುಂಬವೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಜನರ ಸುರಕ್ಷತೆ ಖಚಿತಪಡಿಸಲು ಸರ್ಕಾರ ಪ್ರವಾಸಿ ಮಿತ್ರ ಸಿಬ್ಬಂದಿಗಳ ನೇಮಿಸುವಂತೆ ಆದೇಶಿಸಿದೆ. ಈ ಪ್ರವಾಸಿ ಮಿತ್ರರು ಸಾಮಾನ್ಯ ದಿನಗಳಲ್ಲಿ ಪರಿಸ್ಥಿತಿ ನಿಭಾಯಿಸಬಹುದು. ಆದರೆ, ಮಳೆಗಾಲದಲ್ಲಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಾಯ ಬೇಕಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಯಂತ್ ಹೇಳಿದ್ದಾರೆ.

ಕುಂಬ್ವಾಡೆ ಜಲಪಾತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 10 ಪ್ರವಾಸಿ ಮಿತ್ರರಿದ್ದು, 10 ಮಂದಿ ನಿಯೋಜನೆಗೆ ಮನವಿ ಮಾಡಲಾಗಿದೆ. ಮಳೆಗಾಲದಲ್ಲಿ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ ಇಲಾಖೆಗೆ ಮನವಿ ಮಾಡಿದ್ದೇವೆ. ಮಳೆಗಾಲ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲು ಹೆಚ್ಚಿನ ಸಂಖ್ಯೆಯ ಸಿಬ್ಬಂದಿ ಅಗತ್ಯವಿರುತ್ತದೆ. ಹೀಗಾಗಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಾಯ ಕೋರಿದ್ದೇವೆಂದು ತಿಳಿಸಿದ್ದಾರೆ.

ಕೆನರಾ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಮಾತನಾಡಿ, ಕೆಲವು ಜಲಪಾತಗಳು ಜನರ ಜೀವಕ್ಕೆ ಅಪಾಯವನ್ನುಂಟುಮಾಡುತ್ತವೆ. ವಿಭೂತಿ ಜಲಪಾತ, ಮಾಗೋಡು ಜಲಪಾತ ಮತ್ತು ಸಾಥೋಡಿ ಜಲಪಾತಗಳು ತುಂಬಾ ಅಪಾಯಕಾರಿ ಜಲಪಾತಗಳಾಗಿದ್ದು, ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಲಾಖೆಯು ಪ್ರವಾಸಿಗರನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.

ಹೊನ್ನಾವರದ ಬಂಗಾರ ಕುಸುಮ, ಕಾರವಾರದ ಶಿರವಾಡದ ಜಂಬೆ ಜಲಪಾತ, ಕಾರವಾರದ ಅರ್ಗಾ ಬಳಿಯ ನಾಗರಮುಡಿ ಜಲಪಾತ, ಕಾರವಾರದ ತೋಡೂರಿನ ಗೋಲಾರಿ ಮುಂತಾದ ಜಲಪಾತಗಳಲ್ಲಿ ಅಪಾಯ ಹೆಚ್ಚಾಗಿದೆ. ಜಲಪಾತಗಳಿಗೆ ಮಾತ್ರವಲ್ಲ. ಜಿಲ್ಲೆಯಾದ್ಯಂತ ಸಮುದ್ರಗಳು ಮತ್ತು ನದಿಗಳಿಂದಲೂ ಜನರನ್ನು ದೂರವಿಡಲಾಗಿದೆ. ಸುರಕ್ಷಿತ ಪ್ರವಾಸೋದ್ಯಮವನ್ನು ಖಾತರಿಪಡಿಸುವ ಗುರಿಯನ್ನು ಜಿಲ್ಲಾಡಳಿತ ಮಂಡಳಿ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿಕ್ಷಕರ ದಿನಾಚರಣೆ… ರಂಜಿಸಿದ ಶಿಕ್ಷಕಿಯರು

ಸಿದ್ದಾಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕಿಯರ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಮೂಹ ಗಾನ, ಡೊಳ್ಳು ನೃತ್ಯಗಳು ಪ್ರೇಕ್ಷಕರನ್ನು...

ಘನತೆ, ಗೌರವದಿಂದ ಯಾವ ಎತ್ತರಕ್ಕೂ ಹೋಗಬಹುದು… ಭೀಮಣ್ಣ ನಾಯ್ಕ

.. ಶಿ ಕ್ಷಕರು ಘನತೆ, ಗೌರವದಿಂದಿದ್ದರೆ ಯಾವ ಎತ್ತರಕ್ಕೂ ಏರಬಹುದು ಎಂದು ಡಾ. ರಾಧಾಕೃಷ್ಣನ್‌ ತೋರಿಸಿದ್ದಾರೆ ಎಂದು ಬಣ್ಣಿಸಿರುವ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ...

ಶಿಕ್ಷಕರ ದಿನಾಚರಣೆ: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ ಮಾಡಿದ Education department

ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ...

25ನೇ ವರ್ಷಕ್ಕೆ ಕಾಲಿಟ್ಟ ಒಡ್ಡೋಲಗ ಹಿತ್ತಲಕೈ,ಮರುಕಳಿಸಿದ ಶ್ರಾವಣ ಸಂಜೆ ಸಂಸ್ಕೃತಿ ಉತ್ಸವ –

ಸಿದ್ದಾಪುರ. ತಾಲೂಕಿನ ಕ್ರಿಯಾಶೀಲ ನಾಟಕ ತಂಡವಾದ ಒಡ್ಡೋಲಗ ಹಿತ್ತಲಕೈ ಕಳೆದ 25 ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಸಂಘಟನೆಯು ಕಳೆದ ವಾರಾಂತ್ಯದಲ್ಲಿ ಕವಲಕೊಪ್ಪದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *