ಶಿರೂರು ಬೆಂಜ್‌ ಲಾರಿ ಪತ್ತೆ!?

Karnataka Landslides: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಸೇನೆಯಿಂದ ಭೂಗರ್ಭ ರಾಡಾರ್ ಬಳಕೆ

ಫೆರೆಕ್ಸ್ ಲೊಕೇಟರ್ 150 ಎಂಬ ಭೂಗರ್ಭ ರಾಡಾರ್ ಯಂತ್ರವನ್ನು ಬಳಕೆ ಮಾಡುತ್ತಿದೆ. ಈ ರಾಡಾರ್ ಯಂತ್ರವು ನೆಲದೊಳಗೆ ನುಗ್ಗುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ಅವಲಶೇಷಗಳಡಿ ಸಿಲುಕಿರುವವರ ಕುರಿತು ಮಾಹಿತಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Karnataka Landslides

ಶಿರೂರು ಭೂಕುಸಿತ ಪ್ರಕರಣ

ಉತ್ತರ ಕನ್ನಡ: ಕಳೆದ ವಾರ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ಪ್ರಕರಣದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆ ಕಾರ್ಯಾಚರಣೆಗೆ ಭೂಗರ್ಭ ರಾಡಾರ್ ಬಳಕೆ ಮಾಡುತ್ತಿದೆ.

ಈ ದುರ್ಘಟನೆಯಲ್ಲಿ ಈ ವರೆಗೂ ಮಹಿಳೆ ಸೇರಿದಂತೆ 8 ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಇಬ್ಬರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ.

ಹೀಗಾಗಿ ಸೇನೆ ಅತ್ಯಾಧುನಿಕ ಪರಿಕರಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದು, ಈ ಪೈಕಿ ಫೆರೆಕ್ಸ್ ಲೊಕೇಟರ್ 150 ಎಂಬ ಭೂಗರ್ಭ ರಾಡಾರ್ ಯಂತ್ರವನ್ನು ಬಳಕೆ ಮಾಡುತ್ತಿದೆ. ಈ ರಾಡಾರ್ ಯಂತ್ರವು ನೆಲದೊಳಗೆ ನುಗ್ಗುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ಅವಲಶೇಷಗಳಡಿ ಸಿಲುಕಿರುವವರ ಕುರಿತು ಮಾಹಿತಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Karnataka Landslides

ಕಾರ್ಯಾಚರಣೆಗೆ ಮಳೆ ಅಡ್ಡಿ

ಇನ್ನು ಈ ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆ ಸೈನಿಕರ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದು, ಸ್ಥಳೀಯ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ, ಅಗ್ನಿಶಾಮಕದಳ ಮತ್ತು ಇತರ ಏಜೆನ್ಸಿಗಳು ಸಹ ಹರಸಾಹಸ ಪಟ್ಟು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಪ್ರಮುಖವಾಗಿ ಭಾರತೀಯ ಸೇನೆಯು ಮರಾಠ ಲೈಟ್ ಇನ್‌ಫಾಂಟ್ರಿ ರೆಜಿಮೆಂಟಲ್ ಸೆಂಟರ್ (MLIRC) ಯಿಂದ ಎರಡು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ಈ ತಂಡಗಳು ಒಬ್ಬ ಅಧಿಕಾರಿ, ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು (JCO ಗಳು), ಮತ್ತು 55 ಇತರ ಶ್ರೇಣಿಗಳನ್ನು (OR) ಒಳಗೊಂಡಿದೆ.

ರಕ್ಷಣಾ ಕಾರ್ಯಗಳನ್ನು ಮತ್ತಷ್ಟು ಬಲಪಡಿಸಲು, ಮಿಲಿಟರಿ ಇಂಜಿನಿಯರಿಂಗ್ ಕಾಲೇಜಿನ (CME) ಹೆಚ್ಚುವರಿ ತಂಡವನ್ನು ನಿನ್ನೆ ನಿಯೋಜಿಸಲಾಗಿದೆ. ಒಂದು JCO ಮತ್ತು ಎರಡು OR ಗಳನ್ನು ಒಳಗೊಂಡಿರುವ ಈ ತಂಡವು ಫೆರೆಕ್ಸ್ ಲೊಕೇಟರ್ 150 ಅನ್ನು ಹೊಂದಿದೆ, ಇದು ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಕ್ಕಿಬಿದ್ದಿರುವ ವ್ಯಕ್ತಿಗಳನ್ನು ಪತ್ತೆಹಚ್ಚಲು ನಿರ್ಣಾಯಕ ಪಾತ್ರ ನಿರ್ವಹಿಸುತ್ತವೆ ಎನ್ನಲಾಗಿದೆ.

Karnataka Landslides

ಭೂಕುಸಿತ ಘಟನೆಯ ದಿನದ ಇಸ್ರೋದ ಉಪಗ್ರಹ ಚಿತ್ರಗಳ ಪ್ರಕಾರ, ಗುಡ್ಡದ ಮಣ್ಣು ಅಲ್ಲಿ ನಿಂತಿದ್ದ ಟ್ರಕ್ ಗಳನ್ನು ನೀರಿಗೆ ತಳ್ಳಿರುವ ಸಾಧ್ಯತೆಯಿದೆ. ಸೇನಾ ತಂಡವು ಫೆರೆಕ್ಸ್ ಲೊಕೇಟರ್ – ಜಿಪಿಆರ್ (ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್) ವಿಶೇಷ ಸಾಧನದೊಂದಿಗೆ ಕಾರ್ಯಾಚರಣೆ ನಡೆಸುತ್ತಿದೆ. ಅಲ್ಲದೆ ತಜ್ಞರು ಗಂಗಾವಳಿ ನದಿಯೊಳಗೆ ಲೋಹದ ಕುರುಹುಗಳನ್ನು ಪತ್ತೆಹಚ್ಚಿದ್ದು ಇದು ಟ್ರಕ್ ಗಳದ್ದಾಗಿರಬಹುದು ಎಂದು ಶಂಕಿಸಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *