ಕರ್ನಾಟಕ ವಿಧಾನಸಭೆಯ ಮಹತ್ವದ ನಿರ್ಣಯಗಳು

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ, KRS ಬೃಂದಾವನ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ

ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್‌ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು.

ಸಚಿವ ಎಚ್.​ಕೆ ಪಾಟೀಲ್

ಸಚಿವ ಎಚ್.​ಕೆ ಪಾಟೀಲ್

ಬೆಂಗಳೂರು: 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ಮತ್ತು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್​ ಅವರು, ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್‌ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು. ಈ ಬಾರಿ 2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಆಕಾಂಕ್ಷಿಗಳಾಗಿರುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಬದಲಾಗಿ 38 ವರ್ಷದವರೆಗೆ, ಒಬಿಸಿ ವರ್ಗದವರಿಗೆ 38 ವರ್ಷ ಬದಲಿಗೆ 41 ವರ್ಷದವರೆಗೆ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ಬದಲಿಗೆ 43 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ನಿಯಮವು ಈ ಬಾರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಚಿವ ಎಚ್.​ಕೆ ಪಾಟೀಲ್

ಸಂಪುಟ ಸಭೆಯ ಇತರ ತೀರ್ಮಾನಗಳು

  • ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೊಯೇಲ್ ಅವರು ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಶಾಲಿನಿ ರಜನೀಶ್ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲು ತೀರ್ಮಾನ
  • ಮಂಡ್ಯ ಕೆಆರ್ ಎಸ್ ಬೃಂದಾವನ ಉದ್ಯಾನವನವನ್ನು ಪಿಪಿಪಿಯಡಿ 2,663 ಕೋಟಿ ಮೊತ್ತದಲ್ಲಿ ಮೇಲ್ದರ್ಜೆಗೆ ಏರಿಸಲು ಆಡಳಿತಾತ್ಮಕ ಅನುಮೋದನೆ. ಟೆಂಡರ್ ಮೂಲಕ ಪಿಪಿಪಿ ಮಸದರಿಯಲ್ಲಿ ಕಾಮಗಾರಿ ಅನುಷ್ಠಾನ ಮಾಡಲು ಅನುಮೋದನೆ.
  • KIADB ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿನ 2.64 ಎಕರೆ ಸಿ.ಎ.ನಿವೇಶನವನ್ನು ಮೆ. ಲೋಕ ಶಿಕ್ಷಣ ಟ್ರಸ್ಟ್ ರವರಿಗೆ ಹಂಚಿಕೆ ಮಾಡಲು ಅನುಮೋದನೆ. ಹಂಚಿಕೆ ಜೊತೆಗೆ ನಿವೇಶನದ ಮೊತ್ತಕ್ಕೆ ಶೇ. 75 ರಷ್ಟು ರಿಯಾಯಿತಿ ನೀಡಲು ಸಂಪುಟ ಸಭೆ ಒಪ್ಪಿಗೆ.
  • ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್ (AVGC) 2.0. – “ಉತ್ಕೃಷ್ಟತಾ ಕೇಂದ್ರವನ್ನು ” ರೂ. 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.ಲ ಕೋಟಿಗಳು ಮತ್ತು OPEX-ರೂ. 9 ಕೋಟಿಗಳು) ಅನುದಾನ ನೀಡಲು ಅನುಮೋದನೆ.
  • ಲೋಕೋಪಯೋಗಿ ಇಲಾಖೆಯಿಂದ ರಾಜ್ಯದ 15 ತಾಲ್ಲೂಕುಗಳಲ್ಲಿ ತಲಾ ಒಂದು ಹಾಸ್ಟೆಲ್‌ಗಳ ಕಟ್ಟಡಗಳನ್ನು ಒಟ್ಟು ರೂ. 105 ಕೋಟಿಗಳ ಅಂದಾಜು ಮೊತ್ತದಲ್ಲಿ (ಪ್ರತಿ ಹಾಸ್ಟೆಲ್ – ರೂ. 7 ಕೋಟಿಗಳು) ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ.
  • ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು 2024”ಕ್ಕೆ ಅನುಮೋದನೆ.
  • ಪಿಯು ಉಪನ್ಯಾಸಕರ ಹುದ್ದೆಗೆ ಶಾಲೆ ಉಪನ್ಯಾಸಕರಿಗೆ ಬಡ್ತಿ ಪಡೆಯಲು 55% ಅಂಕ ಪಡೆಯಬೇಕಾಗಿತ್ತು. ಅದನ್ನು ಪರಿಷ್ಕರಿಸಿ 50% ಕಡಿತಕ್ಕೆ ತೀರ್ಮಾನ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *