ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ

ಹೊಸ ತಲೆಮಾರಿನ ನಾಯಕರನ್ನು ರೂಪಿಸಲು ಮುಂದು: ಆಗಸ್ಟ್ 16 ರಿಂದ ಸೆಪ್ಟೆಂಬರ್ 16ರವರೆಗೆ ದೇಶಾದ್ಯಂತ ಯುವ ಕಾಂಗ್ರೆಸ್ ಚುನಾವಣೆ

ಯಾರು ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರು ಅಧ್ಯಕ್ಷರಾಗುತ್ತಾರೆ. ಎರಡನೇ ರನ್ನರ್ ಅಪ್ ಉಪಾಧ್ಯಕ್ಷರಾಗುತ್ತಾರೆ. ಏಳು ಜನ ಉಪಾಧ್ಯಕ್ಷರು ಇರುತ್ತಾರೆ. ನೇಮಕಾತಿ ಮೂಲಕ ಆಯ್ಕೆ ನಡೆದರೆ ಗುಂಪುಗಾರಿಕೆಗೆ ಅವಕಾಶವಿದೆ ಎಂದರು.

ಡಿ.ಕೆ ಶಿವಕುಮಾರ್

ಡಿ.ಕೆ ಶಿವಕುಮಾರ್

ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ಕಾರಣ ಈ ವಿಚಾರದ ಬಗ್ಗೆ ಮಾಧ್ಯಮಗೋಷ್ಠಿ ಮಾಡಿರಲಿಲ್ಲ. ಆಗಸ್ಟ್ 2ರವರೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ, ಆಗಸ್ಟ್ 3ರಿಂದ 8ರವರೆಗೆ ನಾಮಪತ್ರ ಪರಿಶೀಲನೆ ಮಾಡಲಾಗುವುದು. ಆಗಸ್ಟ್ 9ರಂದು ನಾಮಪತ್ರ ಅಂತಿಮ ಮಾಡಲಾಗುವುದು. ಅತಿ ಹೆಚ್ಚು ಮತ ಪಡೆಯುವವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಮತಗಳ ಆಧಾರದ ಮೇಲೆ ನಂತರದ ಸ್ಥಾನ ಪಡೆಯುವರಿಗೆ ಇತರೆ ಸ್ಥಾನ ನೀಡಲಾಗುವುದು. ಈ ವೇಳೆ ಪಕ್ಷವು ಅಗ್ರ ಮೂರು ಸ್ಥಾನ ಪಡೆದವರ ಸಂದರ್ಶನವನ್ನು ಮಾಡಲಿದೆ” ಎಂದು ಮಾಹಿತಿ ನೀಡಿದರು.

ಆಂತರಿಕ ಸಮೀಕ್ಷೆಗಳು ಗುಂಪುಗಾರಿಕೆಗೆ ಕಾರಣವಾಗುವುದಿಲ್ಲ ಎಂದು ಶಿವಕುಮಾರ್ ಹೇಳಿದರು, ಸ್ಪರ್ಧಿಸುವವರಿಗೆ ಮತಗಳ ಆಧಾರದ ಮೇಲೆ ಹುದ್ದೆಗಳು ಸಿಗುತ್ತವೆ. “ಯಾರು ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರು ಅಧ್ಯಕ್ಷರಾಗುತ್ತಾರೆ. ಎರಡನೇ ರನ್ನರ್ ಅಪ್ ಉಪಾಧ್ಯಕ್ಷರಾಗುತ್ತಾರೆ. ಏಳು ಜನ ಉಪಾಧ್ಯಕ್ಷರು ಇರುತ್ತಾರೆ. ನೇಮಕಾತಿ ಮೂಲಕ ಆಯ್ಕೆ ನಡೆದರೆ ಗುಂಪುಗಾರಿಕೆಗೆ ಅವಕಾಶವಿದೆ ಎಂದರು. ಈ ಬಾರಿ ಪ್ರತ್ಯೇಕವಾಗಿ ಮತ ಎಣಿಕೆ ಇರುವುದಿಲ್ಲ. ಸದಸ್ಯರು ಮತ ಚಲಾಯಿಸಿದ ತಕ್ಷಣ ಅದು ಅಭ್ಯರ್ಥಿಗೆ ಸಲ್ಲುತ್ತದೆ. ಈ ಬಾರಿಯ ಚುನಾವಣೆಯನ್ನು ಮತ್ತಷ್ಟು ಮಾರ್ಪಾಡು ಮಾಡಿದ್ದೇವೆ ಎಂದರು.

ಡಿ.ಕೆ ಶಿವಕುಮಾರ್

ಸದಸ್ಯತ್ವ ನೋಂದಣಿಯನ್ನು ಆಗಸ್ಟ್ 16ರಿಂದ ಸೆಪ್ಟೆಂಬರ್ 16ರ ವರೆಗೂ ಮಾಡಲಾಗುವುದು. ಯುವ ಕಾಂಗ್ರೆಸ್ ಸದಸ್ಯರಾಗಲು ಬಯಸುವವರು ಆನ್ ಲೈನ್ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು. ಆನ್ ಲೈನ್ ಸದಸ್ಯತ್ವ ಪಡೆದವರಿಗೆ ಸದಸ್ಯತ್ವ ಪಡೆದ ದಿನದಿಂದಲೇ ಬ್ಲಾಕ್, ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಮಾಡಲು ಮತದಾನ ಮಾಡುವ ಅಧಿಕಾರ ಸಿಗಲಿದೆ. ಓರ್ವ ಸದಸ್ಯ ಆರು ಮಂದಿ ಪದಾಧಿಕಾರಿಗಳಿಗೆ ಮತ ಹಾಕುವ ಅಧಿಕಾರವಿರುತ್ತದೆ. ರಾಜ್ಯಾಧ್ಯಕ್ಷ, ರಾಜ್ಯ ಮಟ್ಟದ ಪದಾಧಿಕಾರಿ, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಆಯ್ಕೆಗೆ ಮತ ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ಐವೈಸಿ ಆಪ್ ನಲ್ಲಿ ವೀಕ್ಷಿಸಬಹುದು” ಎಂದು ತಿಳಿಸಿದರು.

ಯುವ ಕಾಂಗ್ರೆಸ್ ಸದಸ್ಯತ್ವ ಪಡೆಯುವವರು 35 ವರ್ಷದೊಳಗಿನವರಾಗಿರಬೇಕು. ಸದಸ್ಯತ್ವ ನೋಂದಣಿ ಶುಲ್ಕ ರೂ 50 ರೂಪಾಯಿ ಕಟ್ಟಬೇಕು. ಅವರಿಗೆ ಗುರುತಿನ ಚೀಟಿ ನೀಡಲಾಗುವುದು. ಮತದಾನ ಮಾಡುವಾಗ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ. ಚುನಾವಣೆಯನ್ನು ಬಹಳ ಪಾರದರ್ಶಕವಾಗಿ ನಡೆಸಲಾಗುವುದು. ಸದಸ್ಯತ್ವ ನೋಂದಣಿ ಸಮಯದಲ್ಲಿ ಸದಸ್ಯತ್ವ ಪಡೆಯುವವರ ಮುಖಚರ್ಯೆಯನ್ನು ಸ್ಕ್ಯಾನ್ ಮಾಡಲಾಗುವುದು. ಇಡೀ ದೇಶದಲ್ಲಿ ಹೊಸ ನಾಯಕರ ಸೃಷ್ಟಿ ಮಾಡಲು ಪ್ರಕ್ರಿಯೆ ಆರಂಭವಾಗಿದ್ದು, ಯುವ ನಾಯಕರನ್ನು ಬೆಳೆಸಲು ರಾಹುಲ್ ಗಾಂಧಿ ಅವರು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

ಇಡೀ ದೇಶದಲ್ಲಿ ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರು ಇರಬೇಕು. ಅವರಿಗೆ ಜವಾಬ್ದಾರಿ ಇರಬೇಕು ಎಂದು ರಾಜೀವ್ ಗಾಂಧಿ ಅವರು ಒಂದು ಹೊಸ ಚಳುವಳಿ ಆರಂಭಿಸಿದರು. ನಾನು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷನಾಗಿದ್ದಾಗ ಅವರು “ನಾಯಕರನ್ನು ಹುಟ್ಟುಹಾಕುವವನೇ ನಿಜವಾದ ನಾಯಕ” ಎಂದು ಹೇಳಿದ್ದರು. ರಾಹುಲ್ ಗಾಂಧಿ ಅವರು ಈಗ ಯುವ ಕಾಂಗ್ರೆಸ್ ನಲ್ಲಿ ಯುವ ನಾಯಕರನ್ನು ಸೃಷ್ಟಿ ಮಾಡಲು ಈ ಹೆಜ್ಜೆ ಇಟ್ಟಿದ್ದಾರೆ” ಎಂದು ತಿಳಿಸಿದರು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *