

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.


ಕಂಗನಾ ರಣಾವತ್

ನವದೆಹಲಿ: ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?
ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು’ ಎಂದು ಕಿಡಿಕಾರಿದ್ದಾರೆ.

ಮುಂದುವರಿದು, ‘ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ’ ಎಂದಿದ್ದಾರೆ.
‘ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. (kp.c)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
