ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ….. a viral statement

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ಕಂಗನಾ ರಣಾವತ್

ಕಂಗನಾ ರಣಾವತ್

ನವದೆಹಲಿ: ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?

ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು’ ಎಂದು ಕಿಡಿಕಾರಿದ್ದಾರೆ.

ಕಂಗನಾ ರಣಾವತ್

ಮುಂದುವರಿದು, ‘ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ’ ಎಂದಿದ್ದಾರೆ.

‘ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *