ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ….. a viral statement

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ಕಂಗನಾ ರಣಾವತ್

ಕಂಗನಾ ರಣಾವತ್

ನವದೆಹಲಿ: ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?

ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು’ ಎಂದು ಕಿಡಿಕಾರಿದ್ದಾರೆ.

ಕಂಗನಾ ರಣಾವತ್

ಮುಂದುವರಿದು, ‘ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ’ ಎಂದಿದ್ದಾರೆ.

‘ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *