ದೇಶ ಕಾಯುವ ಯೋಧ, ಅನ್ನ ನೀಡುವ ರೈತ, ವಿಜ್ಞಾನಿಗಳು,ವೈದ್ಯರು,ಕ್ರೀಡಾಪಟುಗಳು ಮಾದರಿ

ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ


ಸಿದ್ದಾಪುರ
ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯತ್ತ ಗಮನಹರಿಸಿ ಸಮಾಜಕ್ಕೆ ಹೊರೆಯಾಗದೇ ಉತ್ತಮ ಭವಿಷ್ಯವನ್ನು ರೂಡಿಸಿಕೊಳ್ಳಬೇಕು ಎಂದು ಸ್ಥಳೀಯ ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಶಾಂತರಾಮ ಹೇಳಿದರು.
ಅವರು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ ಇಂದು ಡಿಪ್ಲೋಮಾ ಸೇರಿದಂತೆ ಸಮರ್ಪಕ ಶಿಕ್ಷಣ ಪಡೆದವರಿಗೆ ಅತ್ಯುತ್ತಮ ಅವಕಾಶಗಳಿವೆ. ಉದ್ಯೋಗವೂ ವಿಫುಲವಾಗಿವೆ. ವಿದ್ಯಾರ್ಜನೆಯ ಅವಧಿಯಲ್ಲಿ ಸರಿಯಾಗಿ ಶಿಕ್ಷಣ ಪಡೆದಾಗ ಅವೆಲ್ಲ ದೊರೆಯುತ್ತದೆ. ಹೊರಗಿನ ಪ್ರಪಂಚದಲ್ಲಿ ಸಾಕಷ್ಟು ಮೋಸಗಳು ನಡೆಯುತ್ತಿದ್ದು ಉದ್ಯೋಗ ಕೊಡುವ ಭರವಸೆ ನೀಡಿ ವಂಚಿಸುವ ಕಾರ್ಯಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ಅಂಥ ವಂಚನೆಗೆ ಒಳಗಾಗಬೇಡಿ ಎಂದರು.


ಸಮಾರಂಭ ಉದ್ಘಾಟಿಸಿದ ಪತ್ರಕರ್ತ,ಸಾಹಿತಿ ಗಂಗಾಧರ ಕೊಳಗಿ ಮಾತನಾಡಿ ಬೌದ್ಧಿಕ ಸಾಮಥ್ಯ, ಶಾರೀರಿಕ ಆರೋಗ್ಯ, ಸಾಮಾಜಿಕ ಮತ್ತು ಮಾನವೀಯ ಕಾಳಜಿ ಪ್ರತಿ ವ್ಯಕ್ತಿಗೂ ಮುಖ್ಯವಾಗಿದ್ದು ವಿದ್ಯಾರ್ಥಿ ಜೀವನದಲ್ಲಿ ಈ ಎಲ್ಲ ಘಟಕಗಳು ಅವುಗಳ ಅರಿವನ್ನು ಒದಗಿಸುತ್ತವೆ. ತಪ್ಪು ಮಾಡದ ಮನುಷ್ಯ ಈ ಜಗತ್ತಿನಲ್ಲಿ ಯಾರೂ ಇಲ್ಲ. ಆದರೆ ಅವನ್ನು ತಿದ್ದಿಕೊಂಡು ಸೂಕ್ತ ಮಾರ್ಗದರ್ಶನ, ಗುರಿಗಳೊಂದಿಗೆ ಮುನ್ನಡೆಯುವದು ಮುಖ್ಯ. ಯಾವ ನೋವು,ಸಂಕಟ ತೋರ್ಪಡಿಸದೇ ಸಲಹುವ ತಂದೆ,ತಾಯಿ, ಶಿಕ್ಷಣ ನೀಡುವ ಗುರುವೃಂದವನ್ನು ಯಾವತ್ತೂ ಅಸಡ್ಡೆಯಿಂದ ನೋಡದೇ ಗೌರವ ನೀಡಬೇಕು. ದೇಶ ಕಾಯುವ ಯೋಧ, ಅನ್ನ ನೀಡುವ ರೈತ, ವಿಜ್ಞಾನಿಗಳು,ವೈದ್ಯರು,ಕ್ರೀಡಾಪಟುಗಳಂಥವರು ನಮಗೆ ಮಾದರಿಯಾಗಬೇಕು ಎಂದರು.


ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಿ.ಆರ್.ಪಿ.ಎಪ್.ಯೋಧ, ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಜಯ್ವಂತ್ ವಿ.ಎಸ್.ಹೊಸೂರು ಮಾತನಾಡಿ ವಿದ್ಯಾರ್ಥಿ ಸಂಘ, ಎನ್.ಎಸ್.ಎಸ್.,ರೆಡ್ ಕ್ರಾಸ್ ಘಟಕಗಳ ಮಹತ್ವ ಏನು ಎನ್ನುವದು ವಿದ್ಯಾರ್ಥಿಯಾಗಿ ನನ್ನ ಅನುಭವಕ್ಕೆ ಬಂದಿದೆ. ನಾನು. ಕೂಡ ತಂದೆತಾಯಿಗಳ,ಗುರುಗಳ ಮಾತನ್ನು ಸರಿಯಾಗಿ ಕೇಳಿದ್ದರೆ ಇನ್ನೂ ಉತ್ತಮ ಅವಕಾಶ ದೊರೆಯುತ್ತಿತ್ತು ಎಂದು ಈಗ ಅರಿವಾಗಿದೆ.ನೀವು ಕೂಡ ಹಿರಿಯರನ್ನ ಗೌರವಿಸಿ. ಈ ಕಾಲೇಜು ಮೊದಲಿಗಿದ್ದಕ್ಕಿಂತ ಅತ್ಯುತ್ತಮವಾಗಿದೆ. ಈ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ನಡೆಯುವಂತಾಗಬೇಕು,ಆ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು ಹೆಚ್ಚಿನ ಪ್ರಯತ್ನ ನಡೆಸಬೇಕು ಎಂದರು.


ಈ ಸಂದರ್ಭದಲ್ಲಿ ರಸಪ್ರಶ್ನೆ,ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಕುಲಸಚಿವರಾದ ಶೋಭಾ ಕೆ.ಎನ್., ಉಪನ್ಯಾಸಕರಾದ ಲತಾ ಬಿ.,ಮನೋಜಕುಮಾರ್,ಶಿವರಾಜಕುಮಾರ,ಮೂರ್ತಿ ಜಿ.ಈ.,ಕಾರ್ತಿಕ್ ಜೆ.,ಶ್ರಿನಿಧಿ ಸಾಗರ, ವಿದ್ಯಾರ್ಥಿ ಸಂಘದ ಪದಾದಿಕಾರಿಗಳು ಉಪಸ್ಥಿತರಿದ್ದರು.
ಕು.ದಿವ್ಯಾ ಸಂಗಡಿಗರು ಪ್ರಾರ್ಥಿಸಿದರು. ಕು.ರಕ್ಷಿತಾ ಸ್ವಾಗತಿಸಿದರು.ಕು.ಪ್ರಭಾವತಿ ವಂದಿಸಿದರು. ಕು.ರಾಧಿಕಾ ನಿರೂಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *