ಪಕ್ಷ ವಿರೋಧಿ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ BJP ಹೈಕಮಾಂಡ್ ಮುಂದು!

ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ.

ಬಸನಗೌಡಪಾಟೀಲ್ ಯತ್ನಾಳ್- ಬಿಜೆಪಿ ಹೈಕಮಾಂಡ್ ನಾಯಕರು

ಬಸನಗೌಡಪಾಟೀಲ್ ಯತ್ನಾಳ್- ಬಿಜೆಪಿ ಹೈಕಮಾಂಡ್ ನಾಯಕರು

Manjula VN

ಹುಬ್ಬಳ್ಳಿ: ಪಕ್ಷ ವಿರೋಧಿ ನಿಲುವು ಮತ್ತು ಟೀಕೆ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಬುಧವಾರ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಿಲುವಿನ ವಿರುದ್ಧ ಯತ್ನಾಳ್ ಮಾತನಾಡುವುದನ್ನು ಸಹಿಸುವುದಿಲ್ಲ. ತಾಳ್ಮೆಗೂ ಮಿತಿಯಿದೆ. ಅದನ್ನು ಯಾರಾದರೂ ಮೀರಿದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಹೇಳಿದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಖಂಡಿಸಿ ಬಿಜೆಪಿಯ ಬಂಡಾಯ ನಾಯಕರು ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜನೆ ರೂಪಿಸಿರುವುದರ ಕುರಿತು ಮಾತನಾಡಿ, ಬೆಂಗಳೂರಿನಿಂದ ಮೈಸೂರಿಗೆ ನಡೆದ ಪಾದಯಾತ್ರೆಯಲ್ಲಿ ಈ ವಿಷಯ ಈಗಾಗಲೇ ಗಮನ ಸೆಳೆದಿದೆ. ಹೀಗಾಗಿ ಮತ್ತೆ ಪಾದಯಾತ್ರೆ ನಡೆಸುವ ಯಾವುದೇ ಪ್ರಸ್ತಾಪ ಪಕ್ಷದ ಮುಂದಿಲ್ಲ. ಆದರೂ, ರಮೇಶ ಜಾರಕಿಹೊಳಿ, ಯತ್ನಾಳ್ ಹಾಗೂ ಇತರ ಮುಖಂಡರು ಪಾದಯಾತ್ರೆ ಕೈಗೊಂಡರೆ ನಮ್ಮ ಅಭ್ಯಂತರವಿಲ್ಲ. ಆದರೆ. ಹೈಕಮಾಂಡ್ ಒಪ್ಪಗೆ ಪಡೆದು ಮಾಡಲಿ ಎಂದು ತಿಳಿಸಿದರು.

ಬಸನಗೌಡಪಾಟೀಲ್ ಯತ್ನಾಳ್- ಬಿಜೆಪಿ ಹೈಕಮಾಂಡ್ ನಾಯಕರು

ಒಂದು ವೇಳೆ ಪಕ್ಷವು ಮತ್ತೊಂದು ಯಾತ್ರೆಗೆ ನಿರ್ಧರಿಸಿದರೆ, ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಪ್ರತಿಯೊಬ್ಬ ನಾಯಕರೂ ಅದರಲ್ಲಿ ಭಾಗವಹಿಸುತ್ತಾರೆಂದು ಹೇಳಿದರು.

ಸಿದ್ದರಾಮಯ್ಯ ಪ್ರಕರಣದಲ್ಲಿ ತೋರಿದ ಆತುರತೆಯನ್ನು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಕೈಗೊಳ್ಳದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಪ್ರಕರಣದ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಆದರೆ, ಪಕ್ಷದ ನಿಲುವು ಸ್ಪಷ್ಟವಾಗಿದೆ, ಸ್ಪಷ್ಟ ಮಾಹಿತಿಗಳಿದ್ದರೆ ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡುತ್ತಾರೆ ಎಂದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಕಾನೂನು ಸುವ್ಯವಸ್ಥೆಗೆ ಆತಂಕ ಸೃಷ್ಟಿಸಿದೆ. ಇದರ ವಿರುದ್ಧ ರಾಷ್ಟ್ರಪತಿಗಳಿಗೆ ಬಿಜೆಪಿ ಮನವಿ ಮಾಡಲಿದೆ ಎಂದು ಇದೇ ವೇಳೆ ಛಲವಾದಿ ನಾರಾಯಣಸ್ವಾಮಿಯವರು ತಿಳಿಸಿದರು (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *