ರಾಹುಲ್‌ ಗಾಂಧಿ ಹೇಳಿದ್ದೇನು? ಗೋವಾ ವಿಚಾರ!

ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ

ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ.

ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ

ರಾಹುಲ್ ಗಾಂಧಿ

ನವದೆಹಲಿ: ಗೋವಾದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಗಲಭೆ ಎಬ್ಬಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ರಾಜ್ಯ ಮತ್ತು ಇಡೀ ಭಾರತದ ಜನರು ಈ ವಿಭಜನೆಯನ್ನು ನೋಡುವುದರಿಂದ ಆಡಳಿತ ಪಕ್ಷದ ಪ್ರಯತ್ನಗಳಿಗೆ ತಡೆಯೊಡ್ಡಲಾಗುವುದು ಎಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ನೈಸರ್ಗಿಕ ಸೌಂದರ್ಯ, ವೈವಿಧ್ಯತೆ, ಸಾಮರಸ್ಯದಿಂದ ಕೂಡಿದ ಜನರ ಪ್ರೀತಿ ಮತ್ತು ಆತಿಥ್ಯವೇ ಗೋವಾ ರಾಜ್ಯದ ಆಕರ್ಷಣೆಯಾಗಿದೆ. ದುರಾದೃಷ್ಟವಶಾತ್, ಬಿಜೆಪಿ ಆಡಳಿತದಲ್ಲಿ ಈ ಸಾಮರಸ್ಯಕ್ಕೆ ಧಕ್ಕೆಯಾಗಿದೆ.

ಬಿಜೆಪಿ ಉದ್ದೇಶಪೂರ್ವಕವಾಗಿ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದೆ, ಮಾಜಿ ಆರ್‌ಎಸ್‌ಎಸ್ ನಾಯಕರೊಬ್ಬರು ಕ್ರಿಶ್ಚಿಯನ್ನರನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಸಂಘಟನೆಗಳು ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ ನೀಡುತ್ತಿವೆ ಎಂದು ಅವರು ಬರೆದುಕೊಂಡಿದ್ದಾರೆ.

ಗೋವಾದಲ್ಲಿ ಬಿಜೆಪಿ ಕೋಮುಗಲಭೆ ಎಬ್ಬಿಸುತ್ತಿದೆ: ರಾಹುಲ್ ಗಾಂಧಿ

ಸಂಘ ಪರಿವಾರ ಇಂತಹುದೇ ಕೃತ್ಯಗಳನ್ನು ನಿರ್ಭೀತಿಯಿಂದ ಮತ್ತು ಉನ್ನತ ಮಟ್ಟದ ಬೆಂಬಲದೊಂದಿಗೆ ದೇಶಾದ್ಯಂತ ನಡೆಸುತ್ತಿದೆ. ಗೋವಾದಲ್ಲಿ ಬಿಜೆಪಿ ಯೋಜನೆ ಸ್ಪಷ್ಟವಾಗಿದೆ. ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಅಕ್ರಮವಾಗಿ ಗ್ರೀನ್ ಲ್ಯಾಂಡ್ ಗಳಾಗಿ ಮಾರ್ಪಡು ಮಾಡುವ ಮೂಲಕ ಮತ್ತು ಪರಿಸರ ನಿಯಮಗಳನ್ನು ಕಡೆಗಣಿಸುವ ಮೂಲಕ ಜನರನ್ನು ವಿಭಜಿಸಲಾಗುತ್ತಿದೆ. ಇದು ಗೋವಾದ ನೈಸರ್ಗಿಕ ಮತ್ತು ಸಾಮಾಜಿಕ ಪರಂಪರೆಯ ಮೇಲಿನ ದಾಳಿಯಾಗಿದೆ.ಬಿಜೆಪಿ ಪ್ರಯತ್ನಗಳಿಗೆ ತಡೆಯೊಡ್ಡಲಾಗುವುದು, ಇಂತಹ ವಿಭಜಕ ಕಾರ್ಯಸೂಚಿಯನ್ನು ಗಮನಿಸುತ್ತಿರುವ ಗೋವಾ ಜನರು ಮತ್ತು ಇಡೀ ಭಾರತ ಒಂದಾಗಿ ನಿಂತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *