ಸಿದ್ಧರಾಮಯ್ಯ ಸ್ಥಾನ ಅಭಾದಿತ….. ರಾಜಕೀಯ ಬೆಳೆ ಹುಲುಸು!

‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ?

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

karnika Dasara predictions

ಗೊರವಯ್ಯನ ಕಾರ್ಣಿಕ

ಹಾವೇರಿ: ದೇಶಾದ್ಯಂತ ವೈಭವದ ವಿಜಯದಶಮಿ ಆಚರಣೆ ಸಾಗಿರುವಂತೆಯೇ ಅತ್ತ ಹಾವೇರಿ ಜಿಲ್ಲೆಯ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಗೊರವಯ್ಯನ ಕಾರ್ಣಿಕೋತ್ಸವ ನಡೆದಿದ್ದು, ರೈತರು, ಮಳೆ ಬೆಳೆ, ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

ಪ್ರತಿ ವರ್ಷ ನವರಾತ್ರಿ ವೇಳೆ ಭವಿಷ್ಯವಾಣಿ ನುಡಿಯುವ ಗೊರವಯ್ಯ 9 ದಿನ ಉಪವಾಸ ವಿದ್ದು ಸಾವಿರಾರು ಭಕ್ತರ ಸಮ್ಮುಖದಲ್ಲಿ 18 ಅಡಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.

karnika Dasara predictions

ಅರ್ಥ ಏನು?

ಇನ್ನು ಕಾರ್ಣಿಕ ನುಡಿ ಕುರಿತು ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ ಅವರು ಹೇಳಿಕೆ ನೀಡಿದ್ದು.. ‘ಆಕಾಶದತ್ತ ಚಿಗುರಿತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್… ಆಕಾಶದತ್ತ ಚಿಗುರಿತಲೇ ಅಂದರೆ ಒಳ್ಳೆ ಮಳೆ ಆಗುತ್ತೆ, ಬೇರೆಲ್ಲಾ ಮುತ್ತಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ, ಅದನ್ನ ತೆಗೆದುಕೊಳ್ಳೋ ಫಲಾನುಭವಿಗಳಿಗೂ ಒಳ್ಳೆದಾಗುತ್ತೆ ಎಂಬ ಅರ್ಥ ಎಂದು ತಿಳಿಸಿದ್ದಾರೆ.

ಇನ್ನೂ ರಾಜಕೀಯವಾಗಿ ಹೇಳುವುದಾದರೇ ಆಕಾಶದತ್ತ ಚಿಗುರೀತಲೇ, ಅಂದರೆ ಈಗಿರುವ ನಾಯಕತ್ವ ಆಕಾಶದತ್ತ ಚಿಗುರಿಬಿಟ್ಟಿದೆ. ಬೇರೆಲ್ಲಾ ಮುತ್ತಾಯಿತಲೇ ಅಂದರೆ ಅವರಿಗೆಲ್ಲಾ ಬೆನ್ನೆಲುಬಾಗಿ ನಿಂತಿರೋದು ನೀವೆಲ್ಲಾ ನೋಡಿರಬಹುದು. ಕಾನೂನು ವ್ಯವಸ್ಥೆಯಲ್ಲಿ ಏನು ಬದಲಾವಣೆ ಆದರೂ ಕೂಡಾ ಈಗಿರುವ ನಾಯಕತ್ವ ಹೇಳಿದಂಗೆ ಅವರು ಒಪ್ಪಿಕೊಳ್ತಾರೆ. ಅಂತ ಬೇರುಗಳೆಲ್ಲಾ ಮುತ್ತಾಯಿತಲೇ ಅಂದರೆ ಆಕಾಶತ್ತ ಚಿಗುರಿರೋ ಗಿಡ ಹೇಳಿದಂಗೆ ಬೇರುಗಳು ಒಪ್ಪಿಕೊಳ್ತಾವೆ ಅಂತ ಅರ್ಥದಲ್ಲಿ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನ ಗೊರವಯ್ಯ ಕಾರ್ಣಿಕವನ್ನು ಶ್ರೀಗಳು ವ್ಯಾಖ್ಯಾನಿಸಿದರು.

ದೇಗುಲದ ಇತಿಹಾಸ

ಕರ್ನಾಟಕದ ಪ್ರಮುಖ ದೇವಸ್ಥಾನಗಳಲ್ಲಿ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯವೂ ಒಂದು. ಇದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿದೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Pak ಸೇನಾಧಿಕಾರಿಗಳು ಸೇರಿ 40 ಸೈನಿಕರು, 100ಕ್ಕೂ ಹೆಚ್ಚು ಉಗ್ರರ ಹತ್ಯೆ: Operation Sindoor ಬಗ್ಗೆ ಭಾರತದ DGMO ಕ್ಷಣ ಕ್ಷಣದ ಮಾಹಿತಿ!

ಹತ್ಯೆಯಾದ ಭಯೋತ್ಪಾದಕರಲ್ಲಿ ಯೂಸುಫ್ ಅಜರ್, ಅಬ್ದುಲ್ ಮಲಿಕ್ ರೌಫ್ ಮತ್ತು ಮುದಾಸೀರ್ ಅಹ್ಮದ್ ನಂತಹ ಕುಖ್ಯಾತ ಭಯೋತ್ಪಾದಕರು ಸೇರಿದ್ದಾರೆ ಎಂದು ಡಿಜಿಎಂಒ ತಿಳಿಸಿದ್ದಾರೆ. ನವದೆಹಲಿ:...

Latest Posts

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ ಅಂಥದ್ದೇ ಸಂಭವನೀಯ ದುರಂತದಿಂದ ಸಿದ್ಧಾಪುರ ಬಚಾವಾಗಿದೆ. ಸಿದ್ಧಾಪುರದಿಂದ ಸಾಗರ ಗ್ರಾಮೀಣ ಭಾಗದ ಮೂಲಕ ಹೊನ್ನಾಳಿಗೆ ತೆರಳುವ ಖಾಸಗಿ ಬಸ್‌ ಎಂದಿನಂತೆ ಇಂದು ಕೂಡಾ ಮಧ್ಯಾನ್ಹ ೨.೩೦ ರ ಸುಮಾರಿಗೆ...

Recommended For You

About the Author: Kanneshwar Naik

Leave a Reply

Your email address will not be published. Required fields are marked *