ಸಿದ್ಧರಾಮಯ್ಯ ಸ್ಥಾನ ಅಭಾದಿತ….. ರಾಜಕೀಯ ಬೆಳೆ ಹುಲುಸು!

‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್’: ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ?

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

karnika Dasara predictions

ಗೊರವಯ್ಯನ ಕಾರ್ಣಿಕ

ಹಾವೇರಿ: ದೇಶಾದ್ಯಂತ ವೈಭವದ ವಿಜಯದಶಮಿ ಆಚರಣೆ ಸಾಗಿರುವಂತೆಯೇ ಅತ್ತ ಹಾವೇರಿ ಜಿಲ್ಲೆಯ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯದಲ್ಲಿ ಗೊರವಯ್ಯನ ಕಾರ್ಣಿಕೋತ್ಸವ ನಡೆದಿದ್ದು, ರೈತರು, ಮಳೆ ಬೆಳೆ, ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, ‘ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

ಪ್ರತಿ ವರ್ಷ ನವರಾತ್ರಿ ವೇಳೆ ಭವಿಷ್ಯವಾಣಿ ನುಡಿಯುವ ಗೊರವಯ್ಯ 9 ದಿನ ಉಪವಾಸ ವಿದ್ದು ಸಾವಿರಾರು ಭಕ್ತರ ಸಮ್ಮುಖದಲ್ಲಿ 18 ಅಡಿ ಬಿಲ್ಲನ್ನೇರಿ ಕಾರ್ಣಿಕ ನುಡಿದಿದ್ದಾರೆ.

karnika Dasara predictions

ಅರ್ಥ ಏನು?

ಇನ್ನು ಕಾರ್ಣಿಕ ನುಡಿ ಕುರಿತು ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್ ಭಟ್ ಗುರೂಜಿ ಅವರು ಹೇಳಿಕೆ ನೀಡಿದ್ದು.. ‘ಆಕಾಶದತ್ತ ಚಿಗುರಿತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್… ಆಕಾಶದತ್ತ ಚಿಗುರಿತಲೇ ಅಂದರೆ ಒಳ್ಳೆ ಮಳೆ ಆಗುತ್ತೆ, ಬೇರೆಲ್ಲಾ ಮುತ್ತಾಯಿತಲೇ ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ, ಅದನ್ನ ತೆಗೆದುಕೊಳ್ಳೋ ಫಲಾನುಭವಿಗಳಿಗೂ ಒಳ್ಳೆದಾಗುತ್ತೆ ಎಂಬ ಅರ್ಥ ಎಂದು ತಿಳಿಸಿದ್ದಾರೆ.

ಇನ್ನೂ ರಾಜಕೀಯವಾಗಿ ಹೇಳುವುದಾದರೇ ಆಕಾಶದತ್ತ ಚಿಗುರೀತಲೇ, ಅಂದರೆ ಈಗಿರುವ ನಾಯಕತ್ವ ಆಕಾಶದತ್ತ ಚಿಗುರಿಬಿಟ್ಟಿದೆ. ಬೇರೆಲ್ಲಾ ಮುತ್ತಾಯಿತಲೇ ಅಂದರೆ ಅವರಿಗೆಲ್ಲಾ ಬೆನ್ನೆಲುಬಾಗಿ ನಿಂತಿರೋದು ನೀವೆಲ್ಲಾ ನೋಡಿರಬಹುದು. ಕಾನೂನು ವ್ಯವಸ್ಥೆಯಲ್ಲಿ ಏನು ಬದಲಾವಣೆ ಆದರೂ ಕೂಡಾ ಈಗಿರುವ ನಾಯಕತ್ವ ಹೇಳಿದಂಗೆ ಅವರು ಒಪ್ಪಿಕೊಳ್ತಾರೆ. ಅಂತ ಬೇರುಗಳೆಲ್ಲಾ ಮುತ್ತಾಯಿತಲೇ ಅಂದರೆ ಆಕಾಶತ್ತ ಚಿಗುರಿರೋ ಗಿಡ ಹೇಳಿದಂಗೆ ಬೇರುಗಳು ಒಪ್ಪಿಕೊಳ್ತಾವೆ ಅಂತ ಅರ್ಥದಲ್ಲಿ ಶ್ರೀ ಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನ ಗೊರವಯ್ಯ ಕಾರ್ಣಿಕವನ್ನು ಶ್ರೀಗಳು ವ್ಯಾಖ್ಯಾನಿಸಿದರು.

ದೇಗುಲದ ಇತಿಹಾಸ

ಕರ್ನಾಟಕದ ಪ್ರಮುಖ ದೇವಸ್ಥಾನಗಳಲ್ಲಿ ಐತಿಹಾಸಿಕ ದೇವರಗುಡ್ಡದ ಮಾಲತೇಶಸ್ವಾಮಿ ದೇವಾಲಯವೂ ಒಂದು. ಇದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿದೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *