

ಮಲೆನಾಡಿನ ರೈತರ ಜೀವನಾಧಾರವಾದ ಅಡಕೆಗೆ ಕೊಳೆರೋಗ, ಎಲೆಚುಕ್ಕಿ ರೋಗ ಬಂದು ಹಾನಿಯಾಗುತಿದ್ದರೂ ಸರ್ಕಾರ,ಅಧಿಕಾರಿಗಳು, ಶಾಸಕರು ಸ್ಫಂದಿಸುತ್ತಿಲ್ಲ ಎಂದು ಬಿ.ಜೆ.ಪಿ. ದೂರಿದೆ.

ಇಂದು ಈ ಬಗ್ಗೆ ಸಿದ್ಧಾಪುರ ತಹಸಿಲ್ಧಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಾಪುರ ಬಿ.ಜೆ.ಪಿ. ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ತಾಲೂಕಿನಲ್ಲಿ ಅಡಿಕೆ ಬೆಳೆಗಾರರ ಬವಣೆ ವಿಪರೀತವಾಗಿದೆ ಇದಕ್ಕೆ ಸರ್ಕಾರ ಮತ್ತು ಶಾಸಕರ ಸ್ಪಂದನ ಇಲ್ಲ ಎಂದು ಆಕ್ಷೇಪಿಸಿದ ಅವರು ಹಿಂದೆ ಬಿ.ಜೆ.ಪಿ. ಸರ್ಕಾರವಿದ್ದಾಗ ಉಚಿತ ಔಷಧ ನೀಡಿ ರೈತರಿಗೆ ನೆರವಾಗಿತ್ತು, ಈಗ ಶಾಸಕರು, ಸರ್ಕಾರ ರೈತರ ಪರವಾಗಿ ಸ್ಫಂದಿಸದೆ ಅನ್ಯಾಯ ಮಾಡುತ್ತಿದೆ ಎಂದರು.
ಇದೇ ವೇಳೆ ಮಾತನಾಡಿದ ಪ.ಪಂ. ಸದಸ್ಯ ಗುರುರಾಜ್ ಶಾನಭಾಗ ಅಡಕೆ ಎಲೆಚುಕ್ಕಿ ರೋಗಕ್ಕೆ ಸರ್ಕಾರದ ಸಲಹೆ ಇಲ್ಲ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ನೀಡುವ ವರದಿಯಿಂದ ರೈತರಿಗೆ ನ್ಯಾಯ ದೊರೆಯುವುದಿಲ್ಲ, ಅರ್ಧಕ್ಕಿಂತ ಹೆಚ್ಚಿನ ಹಾನಿ ಅನುಭವಿಸಿದ ಅಡಕೆ ಬೆಳೆಯ ಶೇಕಡಾ ೧.೬ ಹಾನಿ ಎನ್ನುವ ಇಲಾಖೆ ವರದಿ ರೈತರಿಗೆ ಕಂಟಕ ತರಲಿದೆ ಎಂದು ಆರೋಪಿಸಿದರು.


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






