ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: 15 ಸಾಹಿತಿಗಳು ವಿವಿಧ ಪ್ರಶಸ್ತಿಗಳಿಗೆ ಆಯ್ಕೆ

ಹಿರಿಯ ಸಾಹಿತಿ ರಂಜಾನ್ ದರ್ಗಾ ಸೇರಿ 5 ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, 17 ಜನರಿಗೆ 2021ನೆ ಪುಸ್ತಕ ಬಹುಮಾನ, 8 ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ.

Agrahara Krishnamurthy, Ramzan Dharga and Indira Hegde

ಅಗ್ರಹಾರ ಕೃಷ್ಣಮೂರ್ತಿ, ರಂಜಾನ್‌ ದರ್ಗಾ, ಇಂದಿರಾ ಹೆಗ್ಗಡೆ (ಸಂಗ್ರಹ ಚಿತ್ರ)

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ ‘ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬುಧವಾರ ನಗರದ ಸಾಹಿತ್ಯ ಅಕಾಡಮಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡಮಿ ಅಧ್ಯಕ್ಷ ಪ್ರೊ.ಎಲ್.ಎನ್.ಮುಕುಂದರಾಜ್ ಅವರು, ಹಿರಿಯ ಸಾಹಿತಿ ರಂಜಾನ್ ದರ್ಗಾ ಸೇರಿ 5 ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, 17 ಜನರಿಗೆ 2021ನೆ ಪುಸ್ತಕ ಬಹುಮಾನ, 8 ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ, 2022ನೆ ಸಾಲಿನ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಗೆ ಸಾಹಿತಿಗಳಾದ ಆರ್.ಕೆ.ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗಡೆ, ರಂಜಾನ್ ದರ್ಗಾ, ತುಂಬಾಡಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ,50 ಸಾವಿರ ನಗದು ಬಹುಮಾನ ಒಳಗೊಂಡಿದೆ. ಈ ಬಾರಿ ಪ್ರಶಸ್ತಿಗಳಿಗೆ ವಿಭಾಗವಾರು ಸಾಹಿತಿಗಳನ್ನು ಗುರುತಿಸಿ, ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.

Agrahara Krishnamurthy, Ramzan Dharga and Indira Hegde

‘2022ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಬಂಜಗೆರೆ ಜಯಪ್ರಕಾಶ್, ರೂಮಿ ಹರೀಶ್, ಎಂ.ಜಿ. ಮಂಜುನಾಥ, ದಾಸನೂರು ಕೂಸಣ್ಣ, ರಾಜಶೇಖರ ಹತಗುಂದಿ, ಎಚ್.ಎನ್.ಆರತಿ, ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ ಹಾಗೂ ಚಲಂ ಹಾಡ್ಲಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಐವರು, ಸೃಜನೇತರ ಸಾಹಿತ್ಯ ಕ್ಷೇತ್ರದಿಂದ ನಾಲ್ವರು ಹಾಗೂ ಸಾಹಿತ್ಯ ಪರಿಚಾರಿಕೆಗೆ ಸಂಬಂಧಿಸಿದಂತೆ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ.25 ಸಾವಿರ ಒಳಗೊಂಡಿದೆ ಎಂದು ಮಾಹಿತಿ ನೀಡಿದರು.

2021ರ ಪುಸ್ತಕ ಬಹುಮಾನಕ್ಕೆ ವಿಮರ್ಶಕರ ಅಭಿಪ್ರಾಯ ಆಧರಿಸಿ 17 ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ರೂ.25 ಸಾವಿರ ನಗದು ಬಹುಮಾನ ಒಳಗೊಂಡಿದೆ. 2021ರ ವಿವಿಧ ದತ್ತಿ ಬಹುಮಾನಗಳಿಗೆ ಎಂಟು ಕೃತಿಗಳು ಆಯ್ಕೆಯಾಗಿವೆ. ಡಿಸೆಂಬರ್‌ನಲ್ಲಿ ಕಲ್ಯಾಣ ಕರ್ನಾಟಕ ಅಥವಾ ಉತ್ತರ ಕರ್ನಾಟಕ ಪ್ರದೇಶದಲ್ಲಿ ಸಮಾರಂಭ ನಡೆಯುವ ಸಾಧ್ಯತೆಗಳಿದ್ದು, ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *