

ಸಮಾಜದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ಮತ್ತು ಸಮಾಜದ ಸಾಧಕರನ್ನು ಗೌರವಿಸುವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಕಾರ್ಯಕ್ರಮ ಡಿ.೧ ರ ರವಿವಾರ ಸಿದ್ಧಾಪುರ ರಾಘವೇಂದ್ರಮಠ ಸಭಾಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಾಜದ ವಿದ್ಯಾ ರ್ಥಿಗಳಾಗಿ ಶೇ.೯೦ ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರತಿಭಾವಂತರು ಸಂಘದ ಸದಸ್ಯರನ್ನು ಸಂಪರ್ಕಿಸಿ ಮಾಹಿತಿ ನೀಡುವುದು ಮತ್ತು ರವಿವಾರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋರಿದರು.

ರವಿವಾರ ಬೆಳಿಗ್ಗೆ ೧೧ ಗಂಟೆಗೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ಟಿ ನಾಯ್ಕ ಉದ್ಘಾಟಿಸಲಿದ್ದಾರೆ. ರವಿ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಅಧಿಕಾರಿಗಳು, ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






