


ಸಿದ್ದಾಪುರ : ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಹಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಗಾಯಾಳವನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಸುರೇಶ ಹುಚ್ಚ ನಾಯ್ಕ ಸುಂಕತ್ತಿ ಮೃತ ದುರ್ದೇವಿಯಾಗಿದ್ದಾನೆ.

ಸಿದ್ದಾಪುರದ ಹಲಗೇರಿಯಲ್ಲಿ ಗ್ರಾಮ ಒನ್ ನಡೆಸುತ್ತಿದ್ದ ಸುರೇಶ ಸಿದ್ದಾಪುರದಿಂದ ಹಲಗೇರಿ ಕಡೆಗೆ ಹೋಗುತ್ತಿರುವಾಗ ಪಟ್ಟಣ ವ್ಯಾಪ್ತಿಯ ಜೋಗ ರಸ್ತೆಯ ಲಕ್ಷ್ಮಿನಗರ ಬಳಿ ಶುಕ್ರವಾರ ಬೆಳಿಗ್ಗೆ ಘಟನೆ ಸಂಭವಹಿಸಿದೆ.
ಮೃತ ಸುರೇಶ ಓರ್ವ ರಾಜ್ಯ ಮಟ್ಟದ ಕ್ರೀಡಾಪಟು ಮತ್ತು ಜಿಲ್ಲೆಗೆ ಮಾದರಿ ಗ್ರಾಮ್ ಒನ್ ನಿರ್ವಹಿಸಿರುವುದಕ್ಕೆ ಪ್ರಶಸ್ತಿಗಳು ಅರಸಿ ಬಂದಿದ್ದವು.
ಇವರ ಅಕಾಲಿಕ ನಿಧನಕ್ಕೆ ಸ್ನೇಹಿತರು ಅಪಾರ ಬಂಧು ಬಳಗ ಸಂತಾಪ ಸೂಚಿಸಿದ್ದಾರೆ .
ಮೃತರು ಹೆಂಡತಿ, ಪುತ್ರ ಪುತ್ರಿ ಅಪಾರ ಬಂಧು ಬಳಗವನ್ನ ಅಗಲಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
