ಎಸ್​ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ; ನಾಳೆ ಸರ್ಕಾರಿ ರಜೆ; ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.

ಎಸ್ ಎಂ ಕೃಷ್ಣ

ಎಸ್ ಎಂ ಕೃಷ್ಣ

ಬೆಂಗಳೂರು: ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಅವರು ಇಂದು ವಿಧಿವಶರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತಿದ್ದು, ಅಂತಿಮ ವಿಧಿವಿಧಾನಗಳನ್ನು ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುತ್ತಿದೆ.

ನಾಳೆ ಬೆಳಗ್ಗೆಯೇ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೋಮನಹಳ್ಳಿಗೆ ಸ್ಥಳಾಂತರಿಸಲಾಗುತ್ತಿದ್ದು. ಬಳಿಕ ಶಾಲೆಯಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು, ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಎಸ್ ಎಂ ಕೃಷ್ಣ

ಎಸ್.ಎಂ.ಕೃಷ್ಣ ರಾಜಕೀಯ ಜೀವನ

ಎಸ್​ ಎಂ ಕೃಷ್ಣ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.

ಮೊದಲ ಬಾರಿಗೆ 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶ ಮಾಡಿದರು. 1968ರಲ್ಲಿ ಲೋಕಸಭೆಗೆ ಚುನಾಯಿತರಾದರು. 1971ರಲ್ಲಿ ಮರು ಚುನಾಯಿತರಾಗಿ ಮತ್ತೆ 1972ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು.

ಇದೇ ಸಮಯದಲ್ಲಿ ಎಸ್ ಎಂ ಕೃಷ್ಣ ಅವರು ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. 1983ರಲ್ಲಿ ಉದ್ಯಮ ಖಾತೆ ಮತ್ತು 1984ರಲ್ಲಿ ವಿತ್ತ ಖಾತೆಯ ಸಚಿವರಾದರು. 1989ರಿಂದ 1992ರವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ಅಲ್ಲದೆ 1992 ರಿಂದ 1994 ರವರೆಗೆ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸೇವೆ ಸಲ್ಲಿಸಿದರು.

1995ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಸ್ಎಂಕೃಷ್ಣ ಸೋಲು ಅನುಭವಿಸಬೇಕಾಯಿತು. ಆ ವೇಳೆ ರಾಜಕೀಯದಲ್ಲಿ ಕೃಷ್ಣ ಅವರ ಸೋಲು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಬಳಿಕ 1989 ರಿಂದ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1996ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಎಸ್ ಎಂ ಕೃಷ್ಣ ಅವರು, 1999ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಅಲ್ಲದೆ 1999 ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು.

1999 ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಎಸ್ಎಂ ಕೃಷ್ಣ ಮುನ್ನೆಡೆಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 132 ಸೀಟುಗಳನ್ನು ಗೆದ್ದು ಅಧಿಕಾರದ ಗದ್ದುಗೆ ಹಿಡಿಯಿತು.1999 ರಿಂದ 2004 ರವರೆಗೆ ಎಸ್.ಎಂ.ಕೃಷ್ಣ ಅವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.

ಎಸ್ ಎಂ ಕೃಷ್ಣ ಅವರು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. 2009- 2012ರ ವರೆಗೆ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದ ಕೃಷ್ಣ ಅವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2017ರ ಮಾರ್ಚ್​ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದಿದ್ದರು.

ಎಸ್.ಎಂ.ಕೃಷ್ಣ ಅವರು ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.

ಒಟ್ಟಾರೆಯಾಗಿ ಎಸ್ ಎಂ ಕೃಷ್ಣ ಅವರು ಪ್ರಮುಖ 10 ಚುನಾವಣೆಗಳನ್ನು ಎದುರಿಸಿದ್ದಾರೆ. 6 ವಿಧಾನಸಭಾ ಚುನಾವಣೆಗಳನ್ನು ಎದುರಿಸಿದ್ದು, ಇವುಗಳಲ್ಲಿ 4 ರಲ್ಲಿ ಗೆಲುವು, 2 ಚುನಾವಣೆಯಲ್ಲಿ ಸೋಲನ್ನು ಅಭವಿಸಿದ್ದಾರೆ.

4 ಲೋಕಸಭಾ ಚುನಾವಣೆಗಳನ್ನು ಎದುರಿಸಿದ್ದು, ಈ ಪೈಕಿ 3 ಚುನಾವಣೆಯಲ್ಲಿ ಗೆಲುವು ಪಡೆದು, 1 ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಮದ್ದೂರು ಕ್ಷೇತ್ರದಿಂದ 3 ಬಾರಿ ಹಾಗೂ ಚಾಮರಾಜಪೇಟೆಯಿಂದ 1 ಬಾರಿ ಶಾಸಕರಾಗಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *