

ಅಡಕೆ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆಗೆ ಶಿವಮೊಗ್ಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರದ ಎರಡು ಕಂತುಗಳ ಅನುದಾನ ೨೨೪ ಕೋಟಿ ವಿನಿಯೋಗ ಮಾಡುವುದರ ಮೂಲಕ ರಾಜ್ಯದ ಅಡಕೆ ಬೆಳೆಗಾರರ ನೆರವಿಗೆ ಸರ್ಕಾರ ಬಂದಿದೆ ಎಂದು ರಾಜ್ಯ ತೋಟಗಾರಿಕೆ ಮತ್ತು ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕರ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿವರಣೆ ನೀಡಿದರು.

ಸದನದಲ್ಲಿ ಈ ಬಗ್ಗೆ ಪ್ರಸ್ಥಾಪಿಸಿದ ಭೀಮಣ್ಣ ನಾಯ್ಕ ಮಲೆನಾಡು, ಕರಾವಳಿಯಲ್ಲಿ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ರೈತರಿಗೆ ಆತಂಕ ಹೆಚ್ಚಿಸಿವೆ. ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ ೧೬.೫ ಸಾವಿರ ಹೆಕ್ಟೇರ್ ಅಡಕೆ ಬೆಳೆ ವ್ಯಾಪ್ತಿಯಲ್ಲಿ ಮಳೆ-ಕೊಳೆ ಗಳಿಂದ ಪ್ರತಿಶತ ೫೦ ಕ್ಕಿಂತ ಹೆಚ್ಚು ಹಾನಿಯಾಗಿದೆ. ಮಲೆನಾಡು- ಕರಾವಳಿಯ ಅಡಕೆ, ತೋಟಗಾರಿಕಾ ಬೆಳೆಗಳಿಗೆ ಅನ್ವಯಿಸುವ ತೋಟಗಾರಿಕಾ ಸಂಶೋಧನಾ ಸಂಸ್ಥೆ ಬಾಗಲಕೋಟ ದಲ್ಲಿದೆ. ಅದನ್ನು ಶಿರಸಿಗೆ ಸ್ತಳಾಂತರಿಸುವುದು ಸೂಕ್ತ. ಸರ್ಕಾರ ಸಂಕಷ್ಟದಲ್ಲಿರುವ ಅಡಕೆ ಬೆಳೆಗಾರರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಚುಟುಕಾಗಿ ಉತ್ತರಿಸಿದ ಸಚಿವ ಮಲ್ಲಿಕಾರ್ಜುನ ಅಡಕೆ ಎಲೆಚುಕ್ಕಿ ಮತ್ತು ಹಳದಿ ರೋಗಗಳಿಗೆ ಕೇಂದ್ರದ ಅನುದಾನ ಬಳಸಿ ಸಂಶೋಧನೆ ನಡೆಸುತ್ತೇವೆ ಎಂದಷ್ಟೇ ಹೇಳಿ ನುಣುಚಿಕೊಂಡರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
