rahul gandhi on indian constitution- ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು!

Rahul Gandhi: ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು; ದ್ರೋಣ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಮೋದಿ ಸರ್ಕಾರ ಯುವಕರ ಬೆರಳು ಕತ್ತರಿಸುತ್ತಿದೆ!

” ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಕೈಲಿ ಇಡುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Rahul Gandhi- PM Modi

ರಾಹುಲ್ ಗಾಂಧಿ- ಪ್ರಧಾನಿ ನರೆಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಎಂದಿನಂತೆ ಮಹಾಭಾರತ, ದೇವರುಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿದ್ದಾರೆ.

ಭಾರತ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಸಂಸತ್ ನಲ್ಲಿ ಸಂವಿಧಾನದ ಬಗ್ಗೆ ಚರ್ಚೆಗಳಾಗುತ್ತಿವೆ. ಈ ಕುರಿತು ಭಾಷಣ ಮಾಡಿರುವ ರಾಹುಲ್ ಗಾಂಧಿ ಬಿಜೆಪಿ ಮನುಸ್ಮೃತಿಯನ್ನು ಸಂವಿಧಾನಕ್ಕಿಂತ ಉನ್ನತ ಸ್ಥಾಯಿಯಲ್ಲಿ ಪರಿಗಣಿಸುತ್ತದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ ಎಂಬ ಅಂಶವನ್ನು ಟೀಕಿಸಲು ಮಹಾಭಾರತವನ್ನು ಉಲ್ಲೇಖಿಸಿದ್ದಾರೆ. ” ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಹಾಗೂ ಇನ್ನಿತರ ಕೈಗಾರಿಕೋದ್ಯಮಿಗಳ ಕೈಲಿ ಇಡುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಮಹಾಭಾರತದಲ್ಲಿ ಏಕಲವ್ಯ ಎಂಬ ತಪಸ್ವಿ ಯುವಕನಿದ್ದ. ಮುಂಜಾನೆ ಎದ್ದು, ಬಿಲ್ಲು ಬಾಣ ಹಿಡಿದು ಅಭ್ಯಾಸ ಮಾಡುತ್ತಿದ್ದ. ತಪಸ್ಸು ಎಂದರೆ ದೇಹವನ್ನು ಬಿಸಿಯಾಗಿಸುವುದು ಎಂದರ್ಥ ಎಂದು ರಾಹುಲ್ ಗಾಂಧಿ ಹೇಳಿದಾಗ, ಸದನದ ಸದಸ್ಯರು ನಗುವ ದೃಶ್ಯ ದಾಖಲಾಗಿದೆ.

video

“ದ್ರೋಣಾಚಾರ್ಯರು ಏಕಲವ್ಯನ ಬೆರಳುಗಳನ್ನು ಕತ್ತರಿಸಿದಂತೆಯೇ, ನೀವು (ಸರ್ಕಾರ) ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸಿದ್ದೀರಿ” ಎಂದು ವಿಪಕ್ಷ ನಾಯಕ ಆರೋಪಿಸಿದ್ದಾರೆ. ಇದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಆಡಳಿತ ಪಕ್ಷದ ಸದಸ್ಯರು ವಿಪಕ್ಷ ನಾಯಕರು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಬಿಜೆಪಿ ಸಂವಿಧಾನವನ್ನು ಉನ್ನತ ಎಂದು ಭಾವಿಸುವುದಿಲ್ಲ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಸಾವರ್ಕರ್ ಅವರು ಭಾರತದ ಸಂವಿಧಾನದಲ್ಲಿ ಭಾರತೀಯವಾದದ್ದು ಏನೂ ಇಲ್ಲ ಎಂದು ಟೀಕಿಸಿದ್ದರು. “ಮನುಸ್ಮೃತಿ ಹಿಂದೂ ರಾಷ್ಟ್ರಕ್ಕೆ ವೇದಗಳ ನಂತರ ಹೆಚ್ಚು ಪೂಜಿಸಬಹುದಾದ ಗ್ರಂಥವಾಗಿದೆ ಮತ್ತು ಪ್ರಾಚೀನ ಕಾಲದ ಸಂಸ್ಕೃತಿ, ಪದ್ಧತಿಗಳು, ಚಿಂತನೆ ಮತ್ತು ಆಚರಣೆಗೆ ಆಧಾರವಾಗಿದೆ. ಈ ಪುಸ್ತಕ ಶತಮಾನಗಳಿಂದ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಮತ್ತು ದೈವಿಕ ಉನ್ನತಿಯನ್ನು ಕ್ರೋಡೀಕರಿಸಿದೆ. ಇಂದು ಮನುಸ್ಮೃತಿಯೇ ಕಾನೂನಾಗಿದೆ.” ಇದು ಸಾವರ್ಕರ್ ಅವರ ಮಾತುಗಳು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸಾವರ್ಕರ್ ಅವರ ಉದ್ದೇಶಿತ ಉಲ್ಲೇಖಗಳನ್ನು ಪಕ್ಷದ ನಾಯಕರು ಒಪ್ಪುತ್ತಾರೆಯೇ ಎಂದು ರಾಹುಲ್ ಗಾಂಧಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ನೀವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಾಗ, ನೀವು ಸಾವರ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದೀರಿ, ನೀವು ಸಾವರ್ಕರ್ ಅವರನ್ನು ನಿಂದಿಸುತ್ತಿದ್ದೀರಿ, ನೀವು ಸಾವರ್ಕರ್ ಅವರನ್ನು ಮಾನಹಾನಿ ಮಾಡುತ್ತಿದ್ದೀರಿ ಎಂದು ಅವರು ಬಿಜೆಪಿಯನ್ನು ವ್ಯಂಗ್ಯವಾಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *