ಪಿಗ್ಮಿ ಏಜೆಂಟ್‌ ಕೊಂದ ಕಳ್ಳ ನುರಿತ ಅಪರಾಧಿ!

ಸಿದ್ದಾಪುರ,ಡಿ.೩೧- ಅಂತೂ ಇಂತೂ ಸಿದ್ಧಾಪುರದ ಪಿಗ್ಮಿ ಏಜೆಂಟ್‌ ಗೀತಮ್ಮ ಕೊಲೆಯ ಆರೋಪಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ವೃತ್ತಿಪರ ಅಪರಾಧಿಯಾಗಿರುವ ಅಭಿಜಿತ್‌ ಗಣಪತಿ ಮಡಿವಾಳ ಗೀತಮ್ಮಳ ಕೊಲೆ ಮಾಡುವ ಮೊದಲು ಸಣ್ಣ-ಪುಟ್ಟ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡ ಯುವಕ.‌

ಕೆಲವು ಕಾಲ ಬೆಂಗಳೂರಿನಲ್ಲಿ ಆಟೋ ಚಲಾಯಿಸಿ ಬದುಕುತಿದ್ದ ಈತ ಮದ್ಯವ್ಯಸನಿ, ದಿನದ ಕರ್ಚು,ಚಟಗಳಿಗಾಗಿ ಸಾರ್ವಜನಿಕರಿಂದ ಹಣ ಪೀಕುತಿದ್ದ ಈತ ಸಜ್ಜನರ ಜೇಬಿಗೂ ಕೈ ಹಾಕಿ ಹಣ ಲಪಟಾಯಿಸಿ ಜನರನ್ನು ಹೆದರಿಸುತಿದ್ದ ಈ ಚರಿತ್ರೆಯ ಈತ ಆರೋಪಿಯೆಂದು ನಿರ್ಧರಿಸಲು ಪೊಲೀಸರಿಗೆ ಸಮಯ ಬೇಕಾಗಿರಲಿಲ್ಲ. ಆದರೆ ನುರಿತ ಅಪರಾಧಿಯಾಗಿರುವ ಈತ ಪೊಲೀಸರ ದಾರಿ ತಪ್ಪಿಸುವ ಕಾರ್ಯದಲ್ಲಿ ಯಶಸ್ವಿಯಾಗಿ ಎರಡು ದಿನ ಹಾಯಾಗಿ ತಿರುಗಿಕೊಂಡಿದ್ದ!.

ಡಿ.೨೩ ರ ರಾತ್ರಿ ಸಿದ್ಧಾಪುರ ನಗರದ ವೈನ್‌ ಶಾಪ್‌ ಒಂದರಲ್ಲಿ ಕಂಟಮಟ ಕುಡಿದವನು ತನ್ನ ಸಹಚರರ ಕಣ್ಣುತಪ್ಪಿಸಿ ನಗರದ ಸೊರಬಾ ರಸ್ತೆಯ ಗೀತಮ್ಮನ ಮನೆ ಸೇರುವ ಮೊದಲು ಈ ಅಭಿಜಿತ್‌ ನಗರದ ಕಾಳಿದಾಸ ಗಲ್ಲಿಯ ತನ್ನ ಮಾಮೂಲು ಅಡ್ಡೆಗೂ ಬಂದು ಹೋಗಿದ್ದ!

ಸೋಮುವಾರ ದಿನ ಮೊಬೈಲ್‌ ಬಳಸದ ಅಭಿಜಿತ್‌ ನಗರದಲ್ಲಿ ಮಾಮೂಲಿನಂತೆ ಓಡಾಡಿ ಯಾರಿಗೂ ಅನುಮಾನ ಬರದಂತೆ ಪ್ರಮುಖ ಸಿ.ಸಿ. ಕೆಮರಾಗಳ ಕಣ್ಣುತಪ್ಪಿಸಿ! ಒಳ ರಸ್ತೆಯಲ್ಲಿ ಗೀತಾಳ ಮನೆಯ ಹಿಂದಿನ ಮಾಡಿನ ಹೆಂಚು ತೆಗೆದು ಒಳನುಸುಳಿ ಹೊಂಚುಹಾಕಿ ಸ್ನಾನದ ಮನೆಯ ಬಳಿ ಅಡಗಿ ಕುಳಿತಿದ್ದ, ಈ ಕಳ್ಳನನ್ನು ನಿರೀಕ್ಷಿಸದ ಗೀತಾ ಮಾಮೂಲಿನಂತೆ ಹತ್ತು ಗಂಟೆಯ ಸಮಯಕ್ಕೆ ಮನೆಗೆ ಬಂದವಳು ಸ್ನಾನದ ಮನೆಗೆ ಬರಲು ಕದ ತೆಗಿದ್ದಾಳೆ. ಅಲ್ಲೇ ಹೊಂಚುಹಾಕಿಕಾದಿದ್ದ ಅಭಿಜಿತ್ ಗೀತಾಳ ಬಾಯಿ ಮುಚ್ಚಿಸಲು ಬಾಯಿ ಮತ್ತು ಗಂಟಲು ಹಿಡಿದು ಕೂಗಿಕೊಳ್ಳದಂತೆ ತಡೆದಿದ್ದಾನೆ. ಏಕಕಾಲದಲ್ಲಿ ಬಾಯಿ, ಗಂಟಲು ಅದುಮಿದ್ದಕ್ಕೆ ಉಸಿರು ನಿಂತು ಹೋಗಿದೆ. ಅದನ್ನೂ ಸರಿಯಾಗಿ ಲೆಕ್ಕಿಸದ ಅಭಿಜಿತ್‌ ವೃದ್ಧೆಯ ಪಿಗ್ಮಿ ಚೀಲದಲ್ಲಿದ್ದ ಹಣ ಪಡೆದು, ಕಿವಿಯಲ್ಲಿದ್ದ ಓಲೆಗಳನ್ನು ಕಳಚಿದ್ದಾನೆ, ಓಲೆ, ಕೈ ಬಳೆಗಳನ್ನು ಕಳಚಿ ಪರಾರಿಯಾಗುವಾಗ ಕಳ್ಳನ ಬಳಿ ಇದ್ದುದು ಒಂದು ಕಬ್ಬಣದ ರಾಡ್!

ಸ್ವಾಭಿಮಾನ, ಚಲದಿಂದ ಬದುಕುತಿದ್ದ ಸಭ್ಯ ವೃದ್ಧೆಯನ್ನು ಯಾಮಾರಿಸಿ ದಿನದ ಸಂಗ್ರಹದ ಪಿಗ್ಮಿಹಣದ ಜೊತೆಗೆ ಬಂಗಾರ ಕದಿಯಲು ಪ್ಲಾನ್‌ ಮಾಡಿದ್ದ ಅಭಿಜಿತ್‌ ಈ ವಿಚಾರವನ್ನು ತನ್ನ ಸಹಚರ ಪುಡುಂಗು ತಂಡಕ್ಕೂ ಹೇಳಿರಲಿಲ್ಲ.

ಪ್ರತಿದಿನ ಕುಡಿದು ಪೋಲಿಸುತ್ತುತ್ತಾ ಕರ್ಚಿನ ಕಾಸಿಗಾಗಿ ಕಳ್ಳತನ ಮಾಡುತಿದ್ದ ಅಭಿಜಿತ್‌ ತನ್ನ ಬೆಂಗಳೂರಿನ ಪುಂಡಾಟದ ನಂತರ ನಗರದ ಶಿಕ್ಷಕರ ಸಹಕಾರಿ ಬ್ಯಾಂಕ್‌ ನ ಕಳ್ಳತನ ಮಾಡಿದ್ದ, ಈ ಕಳ್ಳತನದಲ್ಲಿ ಒಂದೇ ಒಂದು ಫೂಟು ಅಳತೆಯ ಬಿಲ ಕೊರೆದು ಹೊರ ಬಂದಿದ್ದ ಅಭಿಜಿತ್‌ ನ ಕಳ್ಳತನದ ಚಾಲಾಕಿತನ ಈ ಪ್ರಕರಣದಲ್ಲಿ ಈತನ ಮೇಲೆ ಗುರಿ ಮಾಡಲು ಪ್ರಬಲ ಕಾರಣವಾಗಿತ್ತು.

ಕುಡಿತ, ಮೋಜು-ಮಜಾಕ್ಕಾಗಿ ಕಳ್ಳತನ, ರೌಡಿಜಂ ಮೊರೆಹೋಗಿದ್ದ ಅಭಿಜಿತ್‌ ಈಗ ಪೊಲೀಸರಿಗೆ ಸೆರೆಯಾಗಿದ್ದಾನೆ. ಈ ಪ್ರಕರಣದ ನಂತರ ಹೌಹಾರಿದಂತಾದ ಸಿದ್ಧಾಪುರದ ಪುಂಡರ ಬಳಗ ಈಗ ಮನೆ ಸೇರಿದೆ. ಯಾವ ತಪ್ಪು, ಪಾಪ ಮಾಡದ ಗೀತಮ್ಮ ಒಂದೇ ಉಸಿರಿಗೇ ಜೀವ ಬಿಟ್ಟಿದ್ದಾರೆ ಆದರೆ ಅವರ ಸಂಬಂಧಿಗಳ ವೇದನೆ ಮಾತ್ರ ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. (ಸಶೇಶ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *