




ಸಿದ್ದಾಪುರ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ
ಆಕಸ್ಮಿಕ ಬೆಂಕಿ ತಗುಲಿ ಹುಲ್ಲು ಸಂಪೂರ್ಣ ಭಸ್ಮ ವಾದ ಘಟನೆ ತಾಲೂಕಿನ ಕುಂಬ್ರಿಗದ್ದೆ ಬಸ್ ತಂಗುದಾಣದ ಬಳಿ ಶನಿವಾರ ನಡೆದಿದೆ.

ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯ ಕುಂಬ್ರಿಗದ್ದೆ ಬಸ್ ಸ್ಟ್ಯಾಂಡ್ ಬಳಿ ಹುಲ್ಲಿನ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಹೋಗಿದೆ. ಸಿದ್ದಾಪುರ ಕಡೆಯಿಂದ ದೊಡ್ಮನೆ ಕಡೆಗೆ ಸಾಗುತ್ತಿದ್ದ ತಾಲ್ಲೂಕಿನ ಬೀರಲಮಕ್ಕಿ ಸಮೀಪದ ಉಡಳ್ಳಿಯ ಮಂಜುನಾಥ ಎಂಬುವವರಿಗೆ ಸೇರಿದ ಹುಲ್ಲಿನ ಲಾರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹತ್ತಿಕೊಂಡಿದೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದರಿಂದಾಗಿ ಸುಮಾರು ಮುಕ್ಕಾಲು ಗಂಟೆ ಕಾಲ ಸಿದ್ದಾಪುರ ಕುಮಟಾ ಮುಖ್ಯರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.
ಘಟನೆ ನಡೆದ ಸ್ವಲ್ಪ ಸಮಯದಲ್ಲೇ ಸ್ಥಳೀಯ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದರೂ ಸಾಕಷ್ಟು ನೀರಿನ ದಾಸ್ತಾಸು ಇಲ್ಲದೆ ಪರದಾಡುವಂತಾಯಿತು. ನಂತರ ಸಾರ್ವಜನಿಕರ ಸಹಾಯದಿಂದ ಸಮೀಪದಲ್ಲಿ ಇರುವ ಮನೆಯ ನೀರನ್ನು ಬಳಸಿ ಬೆಂಕಿ ನಂದಿಸಲಾಗಿದೆ. ಅವೈ ಜ್ಞಾನಿಕವಾಗಿ ವಿದ್ಯುತ್ ಲೈನ್ ಎಳೆದಿದ್ದೇ ಇದಕ್ಕೆ ಕಾರಣ ಎಂದು ಆರೋಪ ವ್ಯಕ್ತವಾಗಿದೆ.


https://samajamukhi.net/2025/01/25/%


_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
