

ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ.



ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ
ಉತ್ತರ ಕನ್ನಡದ ಹೊನ್ನಾವರದ ಸಾಲ್ಕೋಡುವಿನ ಕೊಂಡಕುಳಿ ಗ್ರಾಮದಲ್ಲಿ ಅತ್ಯಂತ ಭೀಕರವಾಗಿ ಗೋಹತ್ಯೆ ಮಾಡಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ಹೊನ್ನಾವರದ ಕಾಸರಕೋಡಿನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿ ಫೈಝಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದನು.

ಗುಂಡಿಕ್ಕಿ ಆರೋಪಿ ಫೈಝಲ್ ಬಂಧನ

ಉತ್ತರ ಕನ್ನಡ: ಗರ್ಭಿಣಿ ಹಸುವಿನ ಕಾಲು, ತಲೆ ಕಡಿದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಹೊರಗೆಸೆದು ಮಾಂಸ ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಉತ್ತರ ಕನ್ನಡದ ಹೊನ್ನಾವರದ ಸಾಲ್ಕೋಡುವಿನ ಕೊಂಡಕುಳಿ ಗ್ರಾಮದಲ್ಲಿ ಅತ್ಯಂತ ಭೀಕರವಾಗಿ ಗೋಹತ್ಯೆ ಮಾಡಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ಹೊನ್ನಾವರದ ಕಾಸರಕೋಡಿನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿ ಫೈಝಲ್ ತಪ್ಪಿಸಿಕೊಳ್ಳಲು ಯತ್ನಿಸಿದ್ದನು.

ಸದ್ಯ ಆರೋಪಿಯನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ನಿನ್ನೆಯಷ್ಟೇ ಪೊಲೀಸರು ಹೊನ್ನಾವರ ವಲ್ಕಿಯ 41 ವರ್ಷದ ತೌಫೀಕ್ನನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಪೊಲೀಸರು ಆರೋಪಿಗಳಾದ ಹೊನ್ನಾವರದ ಅಲ್ತಾಫ್ ಕಟಪುರುಸು, ಮಥಿನ್ ಕಟಪುರುಸು ಮತ್ತು ಮೊಹಮ್ಮದ್ ಹುಸೇನ್ ಖುರ್ವೆ ಎಂಬುವರನ್ನು ಬಂಧಿಸಿದ್ದರು.
ಹೊನ್ನಾವರ ತಾಲೂಕಿನ ಸಾಲಕೋಡಿನ ಕೊಂಡಾಕುಳಿಯಲ್ಲಿ ಬೆಟ್ಟಕ್ಕೆ ಮೇಯಲು ಜನವರಿ 18ರಂದು ಹೋಗಿದ್ದ ಗರ್ಭಿಣಿ ಹಸುವಿನ ಕಾಲು, ರುಂಡ ಕಡಿದು, ಗರ್ಭದಲ್ಲಿ ಬೆಳೆಯುತ್ತಿದ್ದ ಕರುವಿನ ಭ್ರೂಣ ಹೊರತೆಗೆದು ಹತ್ಯೆ ಮಾಡಲಾಗಿತ್ತು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
