ಸರ್ವೋತ್ತಮ ಸೇವಾ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ..-ದೇವರಾಜ್‌ ಹಿತ್ತಲಕೊಪ್ಪ

ನನ್ನ ಸಹೋದ್ಯೋಗಿಗಳ ಸಹಕಾರ ಗ್ರಾಮ ಪಂಚಾಯತ್‌ ಸಿಬ್ಬಂದಿಗಳ ಪ್ರಾಮಾಣಿಕ ಕೆಲಸಗಳಿಂದ ನನಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಬಂದಿದೆ. ಇದನ್ನು ನನ್ನ ಇಲಾಖೆಯ ಸಿಬ್ಬಂದಿಗಳಿಗೇ ಅರ್ಪಿಸುತ್ತೇನೆ ಎಂದಿರುವ ಸಿದ್ದಾಪುರ ತಾಲೂಕಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ದೇವರಾಜ್‌ ಹಿತ್ತಲಕೊಪ್ಪ ಈ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ ಎಂದು ವಿನಮ್ರವಾಗಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದಿರುವ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಪ್ರತಿನಿಧಿ ಜೊತೆ ಮಾತನಾಡಿದ ಅವರು ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡಿಸುವುದು ಮುಖ್ಯ ನಾವು ಇಲಾಖೆಯ ಮಾಸಿಕ ಗುರಿಗಳನ್ನು ಮುಟ್ಟಿದ್ದೇವೆ. ವಾರ್ಷಿಕ ಗುರಿಗಳಲ್ಲೂ ನಾವು ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ನರೇಗಾ, ತೆರಿಗೆ ವಸೂಲಾತಿ ವಸತಿ ಯೋಜನೆ ಹೀಗೆ ಇಲಾಖೆಯ ಕೆಲಸ, ತಾಲೂಕಿನ ಪ್ರಗತಿ ಎಲ್ಲದರಲ್ಲೂ ನಮ್ಮ ಸಾಧನೆ ಮೊದಲ ಸ್ಥಾನದಲ್ಲಿರಲು ನಮ್ಮ ಸಿಬ್ಬಂದಿಗಳೇ ಕಾರಣ ಪ್ರಶಸ್ತಿ ಸಾಂಕೇತಿಕವಾಗಿ ನನಗೆ ದಕ್ಕಿದ್ದರೂ ಅದು ನಮ್ಮ ಸಿಬ್ಬಂದಿಗಳಿಗೇ ಸಲ್ಲಬೇಕು ಎಂದರು.

ಜಿಲ್ಲೆಯ ಕೆಲವೆಡೆ ಕೆಲಸ ಮಾಡಿರುವ ಅನುಭವ ನನಗಿದೆ, ಆದರೆ ಶಿರಸಿ-ಸಿದ್ದಾಪುರದ ಜನತೆ ಇಲಾಖೆಯ ಕಾರ್ಯಕ್ರಮಗಳ ಪ್ರಯೋಜನ ಪಡೆಯುತ್ತಾರೆ. ಉತ್ತಮ ವ್ಯವಸ್ಥೆ,ಸ್ಫಂದಿಸುವ ಜನತೆ, ನೌಕರರ ಸಹಕಾರ ಇವುಗಳಿಂದ ನನ್ನ ತಾಲೂಕಿಗೆ ಈ ಗೌರವ ಸಿಕ್ಕಿದೆ. ಇದೇ ತಾಲೂಕಿನ ಪ್ರಜೆಯಾಗಿ ನನಗೆ ಜವಾಬ್ಧಾರಿ ಹೆಚ್ಚು ಹುಟ್ಟೂರಲ್ಲೇ ಇರುವುದರಿಂದ ಕೆಲಸ, ಪ್ರಗತಿ ಸಾಧನೆಗೆ ಈ ವಾತಾವರಣ ಪೂರಕವಾಗಿದೆ ಎಂದು ವಿವರಿಸಿದ ಅವರು ಗ್ರಾ.ಪಂ. ಕಾರ್ಯದರ್ಶಿಯಿಂದ ಕಾರ್ಯನಿರ್ವಹಣಾಧಿಕಾರಿವರೆಗೆ ಉತ್ತಮ ಸೇವೆ ಮಾಡುವ ಸಂಕಲ್ಪದಿಂದ ಬಡವರು, ಅಸಹಾಯಕರು, ಅವಶ್ಯವಿದ್ದವರಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಕೆಲಸಮಾಡಿರುವ ನನ್ನ ಅಳಿಲು ಸೇವೆಯನ್ನು ಗುರುತಿಸಿದ ಹಿರಿಯ ಅಧಿಕಾರಿಗಳು, ಇಲಾಖೆಗೆ ನಾನೂ ಆಬಾರಿಯಾಗಿದ್ದೇನೆ ಎಂದರು.

ಸಿದ್ಧಾಪುರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಸಿಕ ಪ್ರಗತಿ ಪ್ರತಿಶತ೮೮,ವಾರ್ಷಿಕ ಪ್ರಗತಿ ಗುರಿಯ ಪ್ರತಿಶತ ೯೯ ಇವು ನಮ್ಮ ಕೆಲಸದ ದಾಖಲೆಗಳು ಈಗಿನ ಪ್ರಶಸ್ತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಆಸಕ್ತಿಯಿಂದ ಕೆಲಸ ಮಾಡುವ ಉತ್ಸಾಹ ತುಂಬಿದೆ ಎಂದ ದೇವರಾಜ್‌ ಈ ಕೆಲಸ, ಪ್ರಗತಿಗಳ ಹಿಂದಿರುವ ಸಿಬ್ಬಂದಿಗಳ ಕೊಡುಗೆ ಮರೆಯುವಂತಿಲ್ಲ ಎಂದು ಹೇಳುವುದನ್ನು ಮರೆಯಲಿಲ್ಲ. ಈ ವರೆಗೆ ನನಗೆ ಶಿರಸಿ-ಸಿದ್ಧಾಪುರಗಳಲ್ಲಿ ಉತ್ತಮ ಕೆಲಸ ಮಾಡಲು ಮಾರ್ಗದರ್ಶನ ಮಾಡಿದ ಜನಪ್ರತಿನಿಧಿಗಳೂ ಈ ಪ್ರಶಸ್ತಿಯ ಪಾಲುದಾರರು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *