ಸರ್ವೋತ್ತಮ ಸೇವಾ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ..-ದೇವರಾಜ್‌ ಹಿತ್ತಲಕೊಪ್ಪ

ನನ್ನ ಸಹೋದ್ಯೋಗಿಗಳ ಸಹಕಾರ ಗ್ರಾಮ ಪಂಚಾಯತ್‌ ಸಿಬ್ಬಂದಿಗಳ ಪ್ರಾಮಾಣಿಕ ಕೆಲಸಗಳಿಂದ ನನಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಬಂದಿದೆ. ಇದನ್ನು ನನ್ನ ಇಲಾಖೆಯ ಸಿಬ್ಬಂದಿಗಳಿಗೇ ಅರ್ಪಿಸುತ್ತೇನೆ ಎಂದಿರುವ ಸಿದ್ದಾಪುರ ತಾಲೂಕಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ದೇವರಾಜ್‌ ಹಿತ್ತಲಕೊಪ್ಪ ಈ ಪ್ರಶಸ್ತಿ ನನ್ನ ಜವಾಬ್ಧಾರಿ ಹೆಚ್ಚಿಸಿದೆ ಎಂದು ವಿನಮ್ರವಾಗಿ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದಿರುವ ಬಗ್ಗೆ ಸಮಾಜಮುಖಿ ಡಾಟ್‌ ನೆಟ್‌ ಪ್ರತಿನಿಧಿ ಜೊತೆ ಮಾತನಾಡಿದ ಅವರು ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡಿಸುವುದು ಮುಖ್ಯ ನಾವು ಇಲಾಖೆಯ ಮಾಸಿಕ ಗುರಿಗಳನ್ನು ಮುಟ್ಟಿದ್ದೇವೆ. ವಾರ್ಷಿಕ ಗುರಿಗಳಲ್ಲೂ ನಾವು ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ನರೇಗಾ, ತೆರಿಗೆ ವಸೂಲಾತಿ ವಸತಿ ಯೋಜನೆ ಹೀಗೆ ಇಲಾಖೆಯ ಕೆಲಸ, ತಾಲೂಕಿನ ಪ್ರಗತಿ ಎಲ್ಲದರಲ್ಲೂ ನಮ್ಮ ಸಾಧನೆ ಮೊದಲ ಸ್ಥಾನದಲ್ಲಿರಲು ನಮ್ಮ ಸಿಬ್ಬಂದಿಗಳೇ ಕಾರಣ ಪ್ರಶಸ್ತಿ ಸಾಂಕೇತಿಕವಾಗಿ ನನಗೆ ದಕ್ಕಿದ್ದರೂ ಅದು ನಮ್ಮ ಸಿಬ್ಬಂದಿಗಳಿಗೇ ಸಲ್ಲಬೇಕು ಎಂದರು.

ಜಿಲ್ಲೆಯ ಕೆಲವೆಡೆ ಕೆಲಸ ಮಾಡಿರುವ ಅನುಭವ ನನಗಿದೆ, ಆದರೆ ಶಿರಸಿ-ಸಿದ್ದಾಪುರದ ಜನತೆ ಇಲಾಖೆಯ ಕಾರ್ಯಕ್ರಮಗಳ ಪ್ರಯೋಜನ ಪಡೆಯುತ್ತಾರೆ. ಉತ್ತಮ ವ್ಯವಸ್ಥೆ,ಸ್ಫಂದಿಸುವ ಜನತೆ, ನೌಕರರ ಸಹಕಾರ ಇವುಗಳಿಂದ ನನ್ನ ತಾಲೂಕಿಗೆ ಈ ಗೌರವ ಸಿಕ್ಕಿದೆ. ಇದೇ ತಾಲೂಕಿನ ಪ್ರಜೆಯಾಗಿ ನನಗೆ ಜವಾಬ್ಧಾರಿ ಹೆಚ್ಚು ಹುಟ್ಟೂರಲ್ಲೇ ಇರುವುದರಿಂದ ಕೆಲಸ, ಪ್ರಗತಿ ಸಾಧನೆಗೆ ಈ ವಾತಾವರಣ ಪೂರಕವಾಗಿದೆ ಎಂದು ವಿವರಿಸಿದ ಅವರು ಗ್ರಾ.ಪಂ. ಕಾರ್ಯದರ್ಶಿಯಿಂದ ಕಾರ್ಯನಿರ್ವಹಣಾಧಿಕಾರಿವರೆಗೆ ಉತ್ತಮ ಸೇವೆ ಮಾಡುವ ಸಂಕಲ್ಪದಿಂದ ಬಡವರು, ಅಸಹಾಯಕರು, ಅವಶ್ಯವಿದ್ದವರಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಕೆಲಸಮಾಡಿರುವ ನನ್ನ ಅಳಿಲು ಸೇವೆಯನ್ನು ಗುರುತಿಸಿದ ಹಿರಿಯ ಅಧಿಕಾರಿಗಳು, ಇಲಾಖೆಗೆ ನಾನೂ ಆಬಾರಿಯಾಗಿದ್ದೇನೆ ಎಂದರು.

ಸಿದ್ಧಾಪುರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಸಿಕ ಪ್ರಗತಿ ಪ್ರತಿಶತ೮೮,ವಾರ್ಷಿಕ ಪ್ರಗತಿ ಗುರಿಯ ಪ್ರತಿಶತ ೯೯ ಇವು ನಮ್ಮ ಕೆಲಸದ ದಾಖಲೆಗಳು ಈಗಿನ ಪ್ರಶಸ್ತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಆಸಕ್ತಿಯಿಂದ ಕೆಲಸ ಮಾಡುವ ಉತ್ಸಾಹ ತುಂಬಿದೆ ಎಂದ ದೇವರಾಜ್‌ ಈ ಕೆಲಸ, ಪ್ರಗತಿಗಳ ಹಿಂದಿರುವ ಸಿಬ್ಬಂದಿಗಳ ಕೊಡುಗೆ ಮರೆಯುವಂತಿಲ್ಲ ಎಂದು ಹೇಳುವುದನ್ನು ಮರೆಯಲಿಲ್ಲ. ಈ ವರೆಗೆ ನನಗೆ ಶಿರಸಿ-ಸಿದ್ಧಾಪುರಗಳಲ್ಲಿ ಉತ್ತಮ ಕೆಲಸ ಮಾಡಲು ಮಾರ್ಗದರ್ಶನ ಮಾಡಿದ ಜನಪ್ರತಿನಿಧಿಗಳೂ ಈ ಪ್ರಶಸ್ತಿಯ ಪಾಲುದಾರರು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *