


ಸಿದ್ದಾಪುರ: ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆ ಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ದಚರಿಸಿದರು.
ಇಲ್ಲಿಯ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ ಫೈರ್ ಸೇಪ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ತಾಲೂಕಿನ ಚಂದ್ರಘಟಗಿಯಲ್ಲಿ ಕೊಟ್ಟಿಗೆಗೆ ಬೆಂಕಿ ತಗುಲಿ ಏಳು ಹಸುಗಳು ಧಾರುಣ ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ರೈತರು ಜಾನುವಾರುಗಳ ಒಣಹುಲ್ಲನ್ನು ಕೊಟ್ಟಿಗೆಯಿಂದ ದೂರದಲ್ಲಿ ಸಂಗ್ರಹಿಸಿಟ್ಟುಕೊಂಡರೆ ದನಕರುಗಳ ಜೀವ ಉಳಿಸಿಕೊಳ್ಳಬಹುದು.
ಬೆಂಕಿ ಬೀಳದಂತೆ ಸಾರ್ವಜನಿಕರು ತುಂಬಾ ಮುಂಜಾಗೃತೆ ವಹಿಸಬೇಕು. ಈ ವಿಚಾರದಲ್ಲಿ ಎಲ್ಲರ ಜವಾಬ್ದಾರಿ ತುಂಬಾ ಮುಖ್ಯವಾಗಿದೆ ಎಂದರು.

ಅಗ್ನಿಶಾಮಕ ದಳದ ಸುಬ್ರಮಣ್ಯ ಬೆಂಕಿ ಬಿದ್ದಾಗ ಬೆಂಕಿ ನಂದಿಸುವ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ಸಿಪಿಐ ಜೆ.ಬಿ.ಸೀತಾರಾಮ ಮತ್ತಿತರರು ಉಪಸ್ಥಿತರಿದ್ದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
