ಜಿಲ್ಲಾಡಳಿತದ ಕಾಟಾಚಾರದ ಕೆಲಸ! ಸರ್ಕಾರದಕಾನೂನು ಬಾಹೀರ ನಡವಳಿಕೆ?

ಉಪವಿಭಾಗಾಧಿಕಾರಿಗಳ ನೇತೃತ್ವ ಮತ್ತು ಅಧ್ಯಕ್ಷತೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅರ್ಜಿಗಳ ಪುನರ್‌ ಪರಿಶೀಲನೆ ಕೆಲಸವನ್ನು ಜಿಲ್ಲಾಡಳಿತ ಕಾಟಾಚಾರದ ಕೆಲಸವೆಂಬಂತೆ ನಿರ್ವಹಿಸುತ್ತಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

೨೦೦೫-೬ರ ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಕಾಯಿದೆ ಜಾರಿಗೆ ಗ್ರಾಮ ಮಟ್ಟ ಮತ್ತು ಉಪವಿಭಾಗಮಟ್ಟಗಳಲ್ಲಿ ಅತಿಕ್ರಮಣದಾರರ ಅರ್ಜಿ ಸ್ವೀಕರಿಸಿ ಅವೈಜ್ಞಾನಿಕವಾಗಿ ತಿಸ್ಕರಿಸಲಾಗಿತ್ತು. ಈ ಬಗ್ಗೆ ಅರ್ಜಿ ಪುನರ್‌ ಪರಿಶೀಲನೆಯ ಪ್ರಕ್ರೀಯೆ ಉತ್ತರ ಕನ್ನಡ ಜಿಲ್ಲೆಯ ಉಪವಿಭಾಗಗಳ ಹಂತಗಳಲ್ಲಿ ನಡೆಯುತ್ತಿದೆ. ಈ ಪ್ರಕ್ರೀಯೆ ಅವೈಜ್ಞಾನಿಕ ಮತ್ತು ಕಾನೂನು ಬಾಹೀರ ಎನ್ನುವ ಚರ್ಚೆಗಳು ನಡೆಯುತಿದ್ದು ಅರ್ಜಿದಾರರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ.

ಉಪವಿಭಾಗೀಯ ಮಟ್ಟದಲ್ಲಿ ಸಹಾಯಕ ಆಯುಕ್ತರು,ಗ್ರಾಮ ಮಟ್ಟದಲ್ಲಿ ಪಿ.ಡಿ.ಒ ಗಳು ಈ ಪ್ರಕ್ರಿಯೆ ನಡೆಸುತ್ತಿರುವ ಬಗ್ಗೆ ಮಾಹಿತಿಗಳಿವೆ. ಆದರೆ ಗ್ರಾಮ ಸಮೀತಿ ಮತ್ತು ಉಪವಿಭಾಗೀಯ ಸಮೀತಿ ಮಟ್ಟಗಳಲ್ಲಿ ಈಗ ಸಮೀತಿಗಳು ಅಸ್ಥಿತ್ವದಲ್ಲಿಲ್ಲ ಚುನಾಯಿತ| ನಾಮನಿರ್ಧೇಶಿತ ಸದಸ್ಯರ ಅನುಪಸ್ಥಿತಿಯಲ್ಲಿ ಆಯಾ ಹಂತಗಳ ಅರ್ಜಿ ಪುನರ್‌ ಪರಿಶೀಲನೆ ಎಷ್ಡು ಸರಿ ಎಂದು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮೀತಿ ಆಕ್ಷೇಪಿಸಿದೆ.

ಈ ಬಗ್ಗೆ ಕಾನೂನು ಕ್ರಮಕ್ಕೆ ಮುಂದಾಗಿರುವ ಅರಣ್ಯ ಭೂಮಿ ಸಾಗುವಳಿ ಹಕ್ಕು ಹೋರಾಟ ವೇದಿಕೆ ಅಧ್ಯಕ್ಷ ಎ. ರವೀಂದ್ರ ಮುಖ್ಯಮಂತ್ರಿಗಳ ವರೆಗೆ ಸಮಗ್ರ ಮಾಹಿತಿ ನೀಡಿದ ಬಳಿಕ ಈಗ ಮತ್ತೆ ಈ ಪ್ರಕ್ರೀಯೆಗೆ ಚಾಲನೆ ದೊರೆತಿದೆ. ವಾಸ್ತವದಲ್ಲಿ ಹಿಂದೆ ಅವೈಜ್ಷಾನಿಕವಾಗಿ ಅರಣ್ಯ ಭೂಮಿ ಅತಿಕ್ರಮಣದಾರರ ಅರ್ಜಿ ಪಡೆದು ತಿರಸ್ಕರಿಸಲಾಗಿತ್ತು. ಈಗ ಅದೇ ಮಾದರಿಯಲ್ಲಿ ತರಾತುರಿಯಲ್ಲಿ ಪರಿಶೀಲನೆ ನಡೆಯುತ್ತಿದೆ. ಗ್ರಾಮ ಸಮೀತಿ, ಉಪವಿಭಾಗೀಯ ಸಮೀತಿಗಳು ಈಗ ಅಸ್ಥಿತ್ವದಲ್ಲೇ ಇಲ್ಲ ಇಂಥ ಸಮೀತಿಗಳ ಸದಸ್ಯರೂ ಕೂಡಾ ಪುರ್ಣಪ್ರಮಾಣದಲ್ಲಿಲ್ಲ ಈ ಸ್ಥಿತಿಯಲ್ಲಿ ಮತ್ತೆ ಕಾಟಾಚಾರಕ್ಕೆ ಅರ್ಜಿ ಪರಿಶೀಲನೆ, ಇತ್ಯಾದಿ ಮಾಡಿದರೆ ಅತಿಕ್ರಮಿತ ಮುಗ್ಧ ಬಡವರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಕಾನೂನು ಹೋರಾಟಕೂಡಾ ಮಾಡುತಿದ್ದೇವೆ. ಈ ಪ್ರಕ್ರೀಯೆಗೆ ೫೦ ಸಾವಿರ ಜನರ ಆಕ್ಷೇಪವನ್ನೂ ದಾಖಲಿಸಿರುವುದಾಗಿ ತಿಳಿಸಿದರು.

ಮೂರು ತಲೆಮಾರು ಅಥವಾ ೭೦ ವರ್ಷ ೧೯೩೦ ರ ಒಳಗೆ ಈ ನಿಯಮಗಳೆಲ್ಲಾ ಅಧಿನಿಯಮದಲ್ಲೇ ಇಲ್ಲ ಇಂಥ ಕಾಟಾಚಾರದ ಕೆಲಸದಿಂದ ಜನರಿಗೆ ಅನುಕೂಲವಾಗುವುದಕ್ಕಿಂತ ತೊಂದರೆ ಆಗುವುದೇ ಹೆಚ್ಚು ಈ ಬಗ್ಗೆ ಶಾಸಕರು, ಸಚಿವರು ಮಾತನಾಡದಿರುವುದು, ಸರ್ಕಾರದ ಗಮನಕ್ಕೆ ತಂದು ಸರಿಪಡಿಸದಿರುವುದು ಸರಿಯಲ್ಲ ಎಂದು ವಿವರಿಸಿದರು.

ಮೂವತ್ತು ವರ್ಷಗಳಿಂದ ಆಡಳಿತ ಮಾಡಿ ಅಧಿಕಾರ, ಅನುಕೂಲ ಅನುಭವಿಸಿದವರು ಈ ಬಗ್ಗೆ ಮಾತನಾಡುವುದೇ ಇಲ್ಲ. ಅವರ ಹಿತಾಸಕ್ತಿ ಅವರ ಮಾತು, ನಡವಳಿಕೆಗಳಿಂದ ಪ್ರತಿಬಿಂಬವಾಗುತ್ತಿದೆ. ಜವಾಬ್ಧಾರಿ ಸ್ಥಾನದಲ್ಲಿರುವವರು ಸರಿಯಾಗಿ ವರ್ತಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಬೇಸರಿಸಿದರು.

ಸಿದ್ದಾಪುರ ಕಾನಳ್ಳಿಯಲ್ಲಿ ಅಂಗನವಾಡಿ ಸಹಾಯಕಿ ನೇಮಕಕ್ಕೆ ಸಂಬಂಧಿಸಿದವರಿಗೆ ಮನವಿ ನೀಡಲಾಯಿತು.

ಇಂದು ಸಿದ್ಧಾಪುರದಲ್ಲಿ ಶಿರಸಿ ಉಪವಿಭಾಗಾಧಿಕಾರಿ ಕಾವ್ಯಾರಾಣಿ ನೇತೃತ್ವದಲ್ಲಿ ಅರಣ್ಯ ಹಕ್ಕು ಅಧಿನಿಯಮದ ತಿರಸ್ಕೃತ ಅರ್ಜಿಗಳ ಪುನರ್‌ ಪರಿಶೀಲನೆ ನಡೆಯಿತು. ೨೦೦ ಜನರಿಗೆ ಒಂದು ಗಂಟೆಯ ಅವಧಿಯಲ್ಲಿ ಅಹವಾಲು ಆಲಿಸಿದ ಸಮೀತಿ ನಡೆಸಿರುವ ಪರಿಶೀಲನೆ ಅವೈಜ್ಞಾನಿಕ, ಕಾನೂನು ಬಾಹೀರ ಎನ್ನಲಾಗಿದೆ. ನೋಟೀಸ್‌ ನೀಡಿ ಅರ್ಜಿದಾರರು ಬರುವುದರೊಳಗೆ ಪರಿಶೀಲನೆ ಬರಕಾಸ್ತು ಮಾಡಿರುವ ಬಗ್ಗೆ ಹಲವರು ಸಮಾಜಮುಖಿ ಡಾಟ್‌ ನೆಟ್‌ ಪ್ರತಿನಿಧಿಗೆ ದೂರಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *