


ಸವಿತಾ ಸಮಾಜ ಇಂದು ಒಂದೇ ವೃತ್ತಿಗೆ ಅಂಟಿಕೊಳ್ಳದೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು ಈ ಸಮಾಜ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತನ್ನ ಅಭಿವೃದ್ಧಿಗೆ ಪೂರಕ ಮಾಡಿಕೊಳ್ಳಬೇಕು ಎಂದು ತಹಸಿಲ್ಧಾರ ಎಂ.ಆರ್. ಕುಲಕರ್ಣಿ ಹೇಳಿದರು. ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸವಿತಾ ಮಹರ್ಷಿಗಳೇ ಈ ಸಮಾಜಕ್ಕೆ ಮಾರ್ಗದರ್ಶಿ ಎಂದರು.


ಸಿದ್ಧಾಪುರ ನಗರದ ರಾಘವೇಂದ್ರ ಮಠದಲ್ಲಿ ಸವಿತಾ ಸಮಾಜ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಆಚರಣೆ ಅಂಗವಾಗಿ ಸಮಾಜದ ಪ್ರತಿಭಾವಂತ ಮಕ್ಕಳನ್ನು ಅಭಿನಂದಿಸಿ ಉತ್ತೇಜಿಸಲಾಯಿತು.

ಸವಿತಾ ಸಮಾಜದ ಹಿನ್ನೆಲೆ ಬಗ್ಗೆ ಚಂದ್ರಶೇಖರ್ ಕೊಡಿಯಾ ಮಾತನಾಡಿದರು. ಸವಿತಾ ಸಮಾಜದ ಶಿಕ್ಷಣದ ಬಗ್ಗೆ ಗಣೇಶ ಕೊಡಿಯಾ ಮಾತನಾಡಿದರು. ಉಮೇಶ್ ತೇಲಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
