ಹೃದಯ ತಪಾಸಣಾ ಶಿಬಿರ ರವಿವಾರ…..

…….. ಸಿದ್ದಾಪುರ: ಇಲ್ಲಿನ ಆಧಾರ್ ಸಂಸ್ಥೆ ಆಶ್ರಯದಲ್ಲಿ, ಮಂಗಳೂರು ಆಸ್ಪತ್ರೆ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ದಿ. ಡಿ.ಎನ್. ಶೇಟ್ ಸ್ಮರಣಾರ್ಥ ಪಟ್ಟಣದ ಎಂ ಹೆಚ್ ಪಿ ಎಸ್ ಬಾಲಿಕೊಪ್ಪದಲ್ಲಿ ಫೆ.16 ಭಾನುವಾರ ನಡೆಯಲಿರುವ ಬೃಹತ್ ಉಚಿತ ಹೃದಯ ತಪಾಸಣಾ ಶಿಬಿರದ ಕರಪತ್ರ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆಯಿತು.

ಈ ವೇಳೆ ಕರಪತ್ರ ಬಿಡುಗಡೆಗೊಳಿಸಿದ ತಾಲೂಕ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಮಾತನಾಡಿ, ಮನುಷ್ಯನ ಆಹಾರ ಪದ್ಧತಿ, ಜೀವನ ಶೈಲಿ ಸೇರಿದಂತೆ ಇನ್ನಿತರ ಕಾರಣಗಳಿಂದ ಇಂದು ಯುವಕರಲ್ಲಿಯೂ ಹೆಚ್ಚು ಹೃದಯಘಾತ ಸಂಭವಿಸುತ್ತಿರುವುದು ಆಘಾತಕಾರಿ ವಿಷಯವಾಗಿದೆ. ಹೃದಯ ತಪಾಸಣಾ ಶಿಬಿರವು ಉಚಿತವಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಶಿಬಿರಕ್ಕೆ ಬಂದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ತಾಲೂಕ ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್ ನಾಯ್ಕ ಮಾತನಾಡಿ, ಹೃದಯ ತಪಾಸಣಾ ಶಿಬಿರವನ್ನು ಇವೊಂದು ಸಂದರ್ಭದಲ್ಲಿ ನಡೆಸುತ್ತಿರುವುದು ನಿಜಕ್ಕೂ ಸಂತೋಷದ ವಿಷಯ. ಈ ಹಿಂದೆ 50 ವರ್ಷ ಮೀರಿದವರಿಗೆ ಹೃದಯಘಾತ ಸಂಭವ ಹೆಚ್ಚಿತ್ತು ಇಂದು ಆ ವಯಸ್ಸಿನ ಮಿತಿ 30ಕ್ಕೆ ಬಂದು ನಿಂತಿದೆ. ಈ ಕಾರಣಕ್ಕಾಗಿ 30 ವರ್ಷ ಮೇಲ್ಪಟ್ಟ ಎಲ್ಲರೂ ಹೃದಯ ತಪಾಸಣೆ ಮಾಡಿದರೆ ಉತ್ತಮ. ಶಿಬಿರದಲ್ಲಿ ಇಸಿಜಿ ಸೌಲಭ್ಯ ಸಾಮಾನ್ಯ ವೈದ್ಯಕೀಯ ತಪಾಸಣೆ, ಮಧುಮೇಹ ರಕ್ತ ಪರೀಕ್ಷೆ ಇರಲಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಧಾರ್ ಸಂಸ್ಥೆಯ ಅಧ್ಯಕ್ಷ ನಾಗರಾಜ್ ನಾಯ್ಕ ಮಾಳ್ಕೋಡ್ ಪ್ರಸ್ತಾವಿಕವಾಗಿ ಮಾತನಾಡಿದರು.

ಮಂಗಳೂರು ಒಮೇಗಾ ಆಸ್ಪತ್ರೆ ಎಚ್ ಆರ್ ನಾಗರಾಜ್ ಟಿ. ಹಾಗೂ ಮಂಗಳೂರು ಹಾರ್ಟ್ ಕ್ಯಾನ್ ಫೌಂಡೇಶನ್ ಪಿ ಆರ್ ಓ ಬಾಲಕೃಷ್ಣ ಮುಟ್ಟಂ ಮಾತನಾಡಿ, ಸಾಕಷ್ಟು ಕಡೆಗಳಲ್ಲಿ ಹೃದಯ ತಪಾಸಣಾ ಕ್ಯಾಂಪ್’ಗಳನ್ನು ಮಾಡುತ್ತಾ ಬಂದಿದ್ದು ಹಲವಾರು ಜನರು ಇದರ ಉಪಯೋಗವನ್ನು ಪಡೆದುಕೊಂಡಿದ್ದಾರೆ. ಮಂಗಳೂರು ಒಮೇಗಾ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿದ ಅತ್ಯಾಧುನಿಕ ಸೌಲಭ್ಯಗಳು ಲಭ್ಯವಿದ್ದು, ಚಿಕಿತ್ಸೆಗಾಗಿ ವಿಮಾ ಸೌಲಭ್ಯ ಸೇರಿದಂತೆ ಎಪಿಎಲ್ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ಸೌಲಭ್ಯಗಳು ಸಿಗಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಡಿ.ಎನ್. ಶೇಟ್ ಕುಟುಂಬಸ್ಥರಾದ ಗಣೇಶ್ ಶೇಟ್, ವಾದಿರಾಜ್ ಶೇಟ್, ಶಿಬಿರದ ಸಂಯೋಜಕ ಧರ್ಮ ಅಂಬಿಗ, ಸಾಮಾಜಿಕ ಕಾರ್ಯಕರ್ತ ಸುರೇಶ್ ಕೆ. ಮೇಸ್ತ, ಉಪಸ್ಥಿತರಿದ್ದರು.

ಪ್ರಶಾಂತ್ ಶೇಟ್ ಸ್ವಾಗತಿಸಿದರು. ಆಧಾರ್ ಸಂಸ್ಥೆ ಸಂಯೋಜಕ ಸುರೇಶ್ ಮಡಿವಾಳ ಕಡಕೇರಿ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *