ಉತ್ತಮ ಸಹಕಾರಿ ಸಂಸ್ಥೆಗಳಿಗೆ ಹಸ್ತಕ್ಷೇಪ ಬೇಡ -ಶಾಸಕ ಭೀಮಣ್ಣ

ಸಿದ್ದಾಪುರ
ಸಹಕಾರಿ ಸಂಸ್ಥೆ ರೈತರಿಗೆ ಜೀವಾಳ ಇದ್ದಂತೆ. ರೈತರ ಸಂಕಷ್ಟಕ್ಕೆ ಸಹಕಾರಿ ಸಂಘಗಳು ಸ್ಪಂದಿಸುತ್ತಿರುವುದು ಆಶಾದಾಯಕವಾಗಿದೆ. ಪಾರದರ್ಶಕವಾದ ಸೇವೆಯನ್ನು ಸಲ್ಲಿಸುತ್ತಿರುವ ಸಹಕಾರಿ ಸಂಘಗಳ ಮೇಲೆ ಸಹಕಾರಿ ಇಲಾಖೆ ಅಧಿಕಾರಿಗಳು ತಮ್ಮ ಹಸ್ತಕ್ಷೇಪ ನಡೆಸುತ್ತಿರುವುದು ಕಂಡು ಬರುತ್ತಿದ್ದು ಇದು ನಿಲ್ಲಬೇಕಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.


ತಾಲೂಕಿನ ಹಾರ್ಸಿಕಟ್ಟಾದಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದಲ್ಲಿ ನಿರ್ಮಾಣಗೊಂಡ ಅಮೃತ ಗ್ರಾಹಕರ ಮಳಿಗೆ, ಎಪಿಎಂಸಿ ಗೋದಾಮು ಉದ್ಘಾಟಿಸಿ ಅವರು ಶನಿವಾರ ಮಾತನಾಡಿದರು.ರೈತರಿಗೆ ಆರ್ಥಿಕ ಶಕ್ತಿ ತುಂಬುತ್ತಿರುವ ಸಹಕಾರಿ ಸಂಸ್ಥೆಗಳು ಉತ್ತಮವಾಗಿ ಬೆಳೆಯಬೇಕು. ಜಿಲ್ಲೆಯಲ್ಲಿ ಅನೇಕರು ಸಹಕಾರಿ ಸಂಘಗಳು ಬೆಳೆಯಲು ಕಾರಣೀಕರ್ತರಾಗಿದ್ದಾರೆ. ಹಿರಿಯರು ಕಟ್ಟಿ ಬೆಳೆಸಿದ ಸಂಸ್ಥೆಯನ್ನು ಉಳಿಸಿಕೊಂಡು ಹೋಗುವುದು ಮುಖ್ಯ. ಸಹಕಾರಿ ಸಂಘಗಳು ನಮ್ಮದು ಎನ್ನುವ ಭಾವನೆ ಎಲ್ಲರಲ್ಲಿಯೂ ಬಂದರೆ ಮಾತ್ರ ಸಂಸ್ಥೆ ಅಭಿವೃದ್ಧಿಯಾಗುತ್ತದೆ. ಶಾಸಕರ ಅನುದಾನದಡಿಯಲ್ಲಿ ಸಂಘದ ಅಭಿವೃದ್ಧಿಗೆ ೫ಲಕ್ಷ ರೂಗಳನ್ನು ನೀಡುತ್ತೇನೆ ಎಂದು ಹೇಳಿದರು.


ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೂತನ ಕಟ್ಟಡದ ಸಂಕೀರ್ಣ ಉದ್ಘಾಟಿಸಿ ಮಾತನಾಡಿ ಹಾರ್ಸಿಕಟ್ಟಾ ಸಾಂಸ್ಕೃತಿಕವಾಗಿ ಗುರುತಿಸಿಕೊಂಡ ಸ್ಥಳ. ಇಲ್ಲಿ ಇತ್ತೀಚಿನ ವರ್ಷದಲ್ಲಿ ಸಹಕಾರಿ ಕ್ಷೇತ್ರವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯವಾಗಿದೆ.ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯಕ್ಕೆ ಮಾದರಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಹಕಾರಿ ಕ್ಷೇತ್ರವನ್ನು ಬಲಿಷ್ಟಗೊಳಿಸಲು ಮುಂದಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಪ್ಟವೇರ್ ಅನ್ನು ಹೇಗೆ ಅಭಿವೃದ್ಧಿಪಡಿಸಬೇಕು ಎನ್ನುವುದನ್ನು ಕೇಂದ್ರ ತಂಡ ಜಿಲ್ಲೆಯ ಬೈರುಂಬೆಗೆ ಬಂದು ಅಧ್ಯಯನ ನಡೆಸಿ ಈಗ ದೇಶದೆಲ್ಲೆಡೆ ಇಂಪ್ಲಿಮೆAಟೇಶನ್ ಮಾಡುತ್ತಿದೆ. ಇದಕ್ಕೆ ಸಹಕಾರಿ ಕ್ಷೇತ್ರದ ಅನೇಕ ಹಿರಿಯ ಕೊಡುಗೆ ಇದೆ ಎಂದು ಹೇಳಿ ಇನ್ನು ಏಳು ದಿನದೊಳಗೆ ರೈತರ ಬೆಳೆ ವಿಮೆ ಅವರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದರು.


ಕೃಷಿ ಸೇವಾ ಮತ್ತು ಸಂಘದ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ ಅಡಕೆ ಬೆಳೆಗಾರರ ಸ್ಥಿತಿ ಚಿಂತಾಜನಕವಾಗಿದೆ.ಅಡಕೆ ಕ್ಷೇತ್ರ ಬೆಳೆಯುತ್ತಿರುವುದನ್ನು ನೋಡಿದರೆ ಬೆಳೆಗಾರರ ಸ್ಥಿತಿ ಮುಂದಿನ ದಿನದಲ್ಲಿ ಚಿಂತಾಜನಕವಾಗಿದೆ. ಭಯದ ವಾತಾವರಣದಲ್ಲಿ ಕಾಲಕಳೆಯುವಂತಾಗಿದೆ. ಸಹಕಾರಿ ಸಂಘಗಳು ಶಿಸ್ತನ್ನು ಅಳವಡಿಸಿಕೊಳ್ಳುವುದರ ಜತೆಗೆ ಸಂಘದ ಸದಸ್ಯರಿಗೆ ಆರ್ಥಿಕ ಶಿಸ್ತನ್ನು ಕಲಿಸಬೇಕಾಗಿದೆ. ಸದಸ್ಯರು ಸಂಘದ ಶಕ್ತಿಯನ್ನು ನೋಡಿ ಸಾಲ ಕೇಳಬೇಡಿ. ನಿಮ್ಮ ಬೆಳೆಯನ್ನು, ಜೀವನದ ನಿರ್ವಹಣೆಯನ್ನು ನೋಡಿಕೊಳ್ಳಬೇಕು. ಸಾಲದ ಸಂಕೋಲೆಯಿಂದ ಹೊರ ಬರಬೇಕಾಗಿದೆ. ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳದಿದ್ದರೆ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಡಿಸಿಸಿ ಬ್ಯಾಂಕ್‌ಗೆ ಎಷ್ಟೇ ಹಣಬರುವುದಿದ್ದರೂ ಪ್ರಾಥಮಿಕ ಸಂಘಗಳಿಗೆ ನಾವು ಆರ್ಥಿಕ ಸಹಕಾರ ನೀಡುತ್ತಿರುವುದನ್ನು ತಡೆಯಲಿಲ್ಲ. ಸಂಘದ ಸದಸ್ಯರು ಸಂಘದೊಂದಿಗೆ ವ್ಯವಹಾರ ಮಾಡುವಂತೆ ತಿಳಿಸಿದರು.


ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅವರು ನೂತನ ಕಟ್ಟಡದ ಮೊದಲ ಮಹಡಿ ಉದ್ಘಾಟಿಸಿದರು.
ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತಿç ಬಿಳಗಿ, ಶಿರಸಿ ಕದಂಬ ಮಾರ್ಕೆಟಿಂಗ್ ಅಧ್ಯಕ್ಷ ಶಂಭುಲಿಂಗ ಹೆಗಡೆ ನಿಡಗೋಡ, ಹಾರ್ಸಿಕಟ್ಟ ಗ್ರಾಪಂ ಅಧ್ಯಕ್ಷೆ ಹನುಮಕ್ಕ ರಂಗಪ್ಪ ಭೋವಿ, ಉಪಾಧ್ಯಕ್ಷ ಸಿದ್ದಾರ್ಥ ಡಿ.ಗೌಡರ್ ಇತರರಿದ್ದರು.
ಅಧ್ಯಕ್ಷತೆವಹಿಸಿದ್ದ ಸಂಘದ ಅಧ್ಯಕ್ಷ ಅನಂತ ಹೆಗಡೆ ಗೊಂಟನಾಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ವಂದನಾ ಹೆಗಡೆ, ಪವಿತ್ರಾ ಹೆಗಡೆ, ಪವಿತ್ರಾ ಗೌಡ ಪ್ರಾರ್ಥನೆ ಹಾಡಿದರು.
ನರೇಂದ್ರ ಹೆಗಡೆ ಹೊಂಡಗಾಸಿಗೆ, ದಿನೇಶ ಹೆಗಡೆ ಚಳ್ಳೆಹದ್ದ, ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ನಿರ್ವಹಿಸಿದರು.
ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಸಹಕರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *