ದೇಶೀ ವೈಶಿಷ್ಟ್ಯಗಳಿಂದ ಗಮನ ಸೆಳೆದ ಜಾನಪದ ಪರಿಷತ್‌ ಕಾರ್ಯಕ್ರಮ

ಕರ್ನಾಟಕ ಜಾನಪದ ಪರಿಷತ್‌ ಸ್ವಾಯತ್ತ ಸಂಸ್ಥೆಯಾಗಿದ್ದು ಜಾನಪದ ಸಂವರ್ಧನೆ ಕೆಲಸ ಮಾಡುತ್ತಾ ರಾಜ್ಯದಾದ್ಯಂತ ಕೆಲಸ ಮಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಎಲ್ಲಾ ತಾಲೂಕುಗಳಲ್ಲಿ ಜಾನಪದ ಪರಿಷತ್‌ ಘಟಕಗಳು ರಚನೆಯಾಗುತಿದ್ದು ಎಲ್ಲರ ಸಹಕಾರದಿಂದ ಜಾನಪದ ಉಳಿವು ಬೆಳವಣಿಗೆಗಾಗಿ ಶ್ರಮಿಸಲು ಸಂಘಟಿತವಾಗಿ ಸಿದ್ಧವಾಗುತಿದ್ದೇವೆ ಎಂದು ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ವೆಂಕಟೇಶ ನಾಯ್ಕ ಹೇಳಿದರು. ಸಿದ್ಧಾಪುರ ಲಯನ್ಸ್‌ ಬಾಲಭವನದಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್‌ ಸಿದ್ಧಾಪುರ ತಾಲೂಕಾ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಾನಪದ ಅದರಷ್ಟಕ್ಕೆ ಅದೇ ಬೆಳೆಯುತ್ತಿದೆ. ನಾವು ಆಧುನಿಕ ಅನುಕೂಲಗಳ ಮೂಲಕ ಜಾನಪದ ಉಳಿಸುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಾನಪದ ಕಲಾವಿದೆ ಲೀಲಾವತಿ ಕೊಂಡ್ಲಿ ಜಾನಪದ ಹಾಡುಗಳ ಮೂಲಕ ರಂಜಿಸಿದರು.

ಮುಖ್ಯ ಅತಿಥಿಯಾಗಿದ್ದ ಸಾಹಿತಿ ಸುಬ್ರಾಯ ಮತ್ತೀಹಳ್ಳಿ ಮಾತನಾಡಿ ನಾನಾ ಪ್ರದೇಶಗಳ ಜಾನಪದ ವೈಶಿಷ್ಟಯಗಳು ಬಹು ಭಿನ್ನವಾಗಿವೆ. ಅವುಗಳ ದಾಖಲೀಕರಣ ಅಗತ್ಯ ಎಂದರು.

ಇನ್ನೊರ್ವ ಅತಿಥಿ ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಮಾತನಾಡಿ ಜಾನಪದದ ಮಹತ್ವ,ಪ್ರಾಮುಖ್ಯತೆಗಳನ್ನು ದೃಷ್ಟಾಂತಗಳೊಂದಿಗೆ ವಿವರಿಸಿದರು.ಅತಿಥಿಗಳಾಗಿದ್ದ ಎ.ಜಿ.ನಾಯ್ಕ ಕುಂಬಾರಕುಳಿ, ರಮೇಶ್‌ ಹಾರ್ಸಿಮನೆ ಮಾತನಾಡಿದರು. ಜಾನಪದ ಪರಿಷತ್‌ ತಾಲೂಕಾ ಅಧ್ಯಕ್ಷ ಎಂ.ಕೆ.ನಾಯ್ಕ ಹೊಸಳ್ಳಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಗೋಪಾಲ ಕಾನಳ್ಳಿ ತಂಡ ಹಾಡು-ನೃತ್ಯಗಳ ಮೂಲಕ ಮನರಂಜಿಸಿದರೆ ಪ್ರಜ್ಞಾ ಹೆಗಡೆ & ಲೀಲಾವತಿ ಕೊಂಡ್ಲಿ ಜಾನಪದ ಗಾಯನ ಗಮನ ಸೆಳೆಯಿತು. ಕ.ಸಾ.ಪ. ತಾಲೂಕಾ ಅಧ್ಯಕ್ಷ ಚಂದ್ರಶೇಖರ್‌ ಕುಂಬ್ರಿಗದ್ದೆ ನಿರೂಪಿಸಿದರು. ಜಾನಪದ ಕಲಾ ಪ್ರಕಾರಗಳನ್ನು ಬಳಸಿ ಮಾಡಿದ ವೇದಿಕೆ ಕಾರ್ಯಕ್ರಮದ ಮೆರಗು ಹೆಚ್ಚಿಸುವಂತಿತ್ತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

ಸೈನಿಕ ಸುರೇಶ್‌ ನಾಯ್ಕ ಸಾವು

ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್.‌ ನಲ್ಲಿ ಸಹಾಯಕ ಸಬ್‌ ಇನ್ಫೆಕ್ಟರ್‌ ಆಗಿ ಸೇವೆಯಲ್ಲಿದ್ದ ಸುರೇಶ್‌ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *