ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ ಗ್ಯಾರಂಟಿ ಯೋಜನೆಗಳ ಟೀಕೆ ಕೇಳಿಬಂದಿದೆ. ಇದಕ್ಕೆ ಇಂದು ಸಿದ್ಧಾಪುರದಲ್ಲಿ ಪ್ರತಿಕ್ರೀಯಿಸಿದ ಶಾಸಕ ಭೀಮಣ್ಣ ನಾಯ್ಕ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಸರ್ಕಾರ ನಡೆಸುತ್ತಿರುವ ಬಿ.ಜೆ.ಪಿ. ಇಲ್ಲಿ ಯಾವ ಮುಖ, ನೈತಿಕತೆ ಇಟ್ಟುಕೊಂಡು ಪ್ರತಿಭಟಿಸುತ್ತಿದೆ, ವಿರೋಧಿಸುತ್ತಿದೆ ಎಂದು ಕೇಳಿದ್ದಾರೆ.

ದನದ, ಶವದ ರಾಜಕಾರಣ ಮಾಡುವ ಬಿ.ಜೆ.ಪಿ.ರೈತಬೆಳೆಯುವ ಹಾಲಿನದರ ಏರಿಸಿದರೆ ಕಿರುಚಾಡುತ್ತಿದೆ, ರೈತ ವಿರೋಧಿ, ಜಾನುವಾರು ವಿರೋಧಿ ಬಿ.ಜೆ.ಪಿ. ಜನಸಾಮಾನ್ಯರ ಗ್ಯಾರಂಟಿ ಯೋಜನೆ ಟೀಕಿಸುವುದು ಅವರ ಆದ್ಯತೆ, ಉದ್ದೇಶವನ್ನು ಪ್ರತಿಬಿಂಬಿಸುತ್ತದೆ ಎಂದು ಟಾಂಗ್‌ ನೀಡಿದ್ದಾರೆ.

* ಸಿದ್ದಾಪುರ ಸೇರಿದಂತೆ ಉತ್ತರ ಕನ್ನಡ ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಬುಡಕಟ್ಟು ಸಮೂದಾಯ ಖರೆ ಒಕ್ಕಲಿಗರ ಸಮೂದಾಯ ಭವನದ ಶಂಕುಸ್ಥಾಪನೆ ಇಂದು ಸಿದ್ಧಾಪುರ ಕೋಲಶಿರ್ಸಿ ಹಲಗಡೆಕೊಪ್ಪದಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದ ಶಿಸ್ತು, ನೆರೆದ ಜನಸಮೂಹ ಒಕ್ಕಲಿಗರ ಒಗ್ಗಟ್ಟು ಪ್ರದರ್ಶನದ ಜೊತೆಗೆ ಅವರ ಸಾಮರ್ಥ್ಯ ಬಿಂಬಿಸಿತು.

* ಮಿನಿಟ್ಯಾಕ್ಟರ್‌, ಪೈಪ್‌, ಟಿಲ್ಲರ್‌ ಗಳನ್ನು ನೀಡುವ ಕೃಷಿ ಇಲಾಖೆಯ ಕಾರ್ಯಕ್ರಮ ಸರಳವಾಗಿ ನಡೆಯಿತು. ಶಾಸಕ ಭೀಮಣ್ಣ ನಾಯ್ಕ ರೈತರಿಗೆ ಸೌಲಭ್ಯ ವಿತರಿಸಿ ಅವುಗಳ ಸದ್ಭಳಕೆಗೆ ಸಲಹೆ ನೀಡಿದರು.

ಪತ್ರಕರ್ತ ಶಿವಶಂಕರ್‌ ಕೋಲಶಿರ್ಸಿ ಸ್ಮರಣಾರ್ಥ ಬೇಸಿಗೆ ಶಿಬಿರ ಇಂದು ಕೋಲಶಿರ್ಸಿ ಹಿ.ಪ್ರಾ.ಶಾಲೆಯಲ್ಲಿ ಪ್ರಾರಂಭವಾಯಿತು. ಆಧಾರ್‌ ಸಂಸ್ಥೆ ಸಂಘಟಿಸಿರುವ ಈ ಶಿಬಿರದ ಉದ್ಘಾಟನೆಯ ವೇಳೆ ಶಿವಶಂಕರ್ ಕಟ್ರನ್‌ ಸ್ಮರಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *