vp visit @ siddapur ಉಪ ರಾಷ್ಟ್ರಪತಿಗಳ ಭೇಟಿಗೆ ಸಿದ್ಧ (ವಾದ) ಪುರ

ಇತ್ತೀಚಿನ ವರ್ಷಗಳಲ್ಲಿ ಸಿದ್ಧಾಪುರದ ನೆಲಕ್ಕೆ ಮೊಟ್ಟಮೊದಲ ಬಾರಿಯೆಂಬಂತೆ ಭಾರತದ ಉಪರಾಷ್ಟ್ರಪತಿಗಳ ಆಗಮನವಾಗುತ್ತಿದೆ. ಉಪರಾಷ್ಟ್ರಪತಿಗಳ ಕಛೇರಿಯ ವಿಶೇಶ ಅಧಿಕಾರಿ ರಾಜೇಶ್‌ ನಾಯ್ಕರ ತಾಯಿ ಲಕ್ಷ್ಮಿ ನಾರಾಯಣ ನಾಯ್ಕ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ತಮ್ಮ ಅಧೀನ ಅಧಿಕಾರಿ ರಾಜೇಶ್‌ ನಾಯ್ಕ ಭೇಟಿಯಾಗಿ ಅವರ ಕುಟುಂಬವರ್ಗಕ್ಕೆ ಸಾಂತ್ವನ ಹೇಳಲು ಬರುತ್ತಿರುವ ಗೌರವಾನ್ವಿತ ಭಾರತದ ಉಪರಾಷ್ಟ್ರಪತಿಗಳು ಸಿದ್ಧಾಪುರದಲ್ಲಿ ಅರ್ಧಗಂಟೆಗಳ ಸಮಯ ಕಳೆಯಲಿದ್ದಾರೆ.

ಸಿದ್ದಾಪುರದ ಹಿರಿಯ ವಕೀಲ ಎನ್.ಡಿ. ನಾಯ್ಕರ ಇಂದಿರಾನಗರದ ಮನೆಗೆ ಭೇಟಿ ನೀಡಲಿರುವ ಜಗದೀಪ ಧನಕರ ಸ್ವಾಗತಕ್ಕೆ ಜಿಲ್ಲಾಡಳಿತ ಎಲ್ಲಾ ತಯಾರಿ ನಡೆಸಿದೆ. ಕೋಲಶಿರ್ಸಿ ಗ್ರಾ.ಪಂ. ನ ತಾಲೂಕಾ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್‌ ಮೂಲಕ ಬಂದಿಳಿಯಲಿರುವ ಉಪರಾಷ್ಟ್ರಪತಿಗಳು ತಾಲೂಕಾ ಕ್ರೀಡಾಂಗಣದಿಂದ ಸಿದ್ಧಾಪುರ ರಸ್ತೆಯ ಮೂಲಕ ಇಂದಿರಾನಗರಕ್ಕೆ ಬಂದು ಅಲ್ಲಿ ವೃಕ್ಷಾರೋಪಣದ ಜೊತೆಗೆ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಉಪರಾಷ್ಟ್ರಪತಿಗಳ ಅಪರೂಪದ ಭೇಟಿಗೆ ಪೂರ್ವಸಿದ್ಧತೆ ನಡೆಸಿರುವ ತಾಲೂಕಾ ಆಡಳಿತಕ್ಕೆ ರಾಜೇಶ್‌ ನಾಯ್ಕರ ಕುಟುಂಬ ಸಂಪೂರ್ಣ ಸಹಕಾರ ನೀಡಿದೆ. ನೀತಿಸಂಹಿತೆ, ಪ್ರೋಟೋಕಾಲ್‌, ಜೆಡ್‌ ಭದ್ರತೆಗಳ ಹಿನ್ನೆಲೆಯಲ್ಲಿ ಸೋಮುವಾರ ಬೆಳಿಗ್ಗೆ೧೧ ರಿಂದ ೧ ಗಂಟೆಯ ವರೆಗೆ ಶಿರಸಿ ರಸ್ತೆ, ಸಿದ್ಧಾಪುರದ ಕೆಲವು ಭಾಗಗಳಲ್ಲಿ ಕೆಲವು ನಿರ್ಬಂಧಗಳು ಜಾರಿಯಲ್ಲಿರಲಿವೆ. ಬೆಳಿಗ್ಗೆ ಶಿರಸಿಯಿಂದ ವಾಯುಮಾರ್ಗದಲ್ಲಿ ಸಿದ್ಧಾಪುರಕ್ಕೆ ಬರಲಿರುವ ಉಪರಾಷ್ಟ್ರಪತಿಗಳು ಮಧ್ಯಾನ್ಹದ ವರೆಗೆ ಸಿದ್ಧಾಪುರದಲ್ಲಿದ್ದು ನಂತರ ಮರಳಲಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *