ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ ವಿವಿಧ ವಾರ್ಡ್‌ ಗಳಲ್ಲಿ ೨ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ವಾಜಪೇಯಿ ಬಡಾವಣೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು.

ನಾವು ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಪಕ್ಷ ನೋಡುವುದಿಲ್ಲ ಪಕ್ಷ, ರಾಜಕೀಯಗಳೇನಿದ್ದರೂ ಚುನಾವಣೆಯಲ್ಲಿ ಅಭಿವೃದ್ಧಿಯ ವಿಷಯ ಬಂದಾಗ ಅವೆಲ್ಲಾ ಗೌಣ ಎಂದರು.

ಯಾರನ್ನೂ ಗುರಿಯಾಗಿಸದೆ ವಿರೋಧಿಗಳು, ಬಿ.ಜೆ.ಪಿ.ಯ ಕೆಲವು ಮುಖಂಡರ ಟೀಕೆಗಳಿಗೆ ಉತ್ತರಿಸಿದಂತೆ ಮಾತನಾಡಿದ ಅವರು ಸಿದ್ಧಾಪುರದಲ್ಲಿ ಮೂಲಭೂತ ಸೌಕರ್ಯಗಳಾದ ನೀರು, ರಸ್ತೆ, ಶಿಕ್ಷಣ ಗಳಿಗೆ ಆದ್ಯತೆ ನೀಡಿದ್ದೇನಿ. ಸಿದ್ಧಾಪುರಕ್ಕೆ ಕುಡಿಯುವ ನೀರಿನ ಯೋಜನೆ, ರಸ್ತೆಗಳ ಅಭಿವೃದ್ಧಿಗೆ ಅನುದಾನ, ಶಾಲೆಗಳ ಮೂಲಸೌಕರ್ಯಕ್ಕೆ ಆದ್ಯತೆ ನೀಡಿದ್ದೇನೆ. ಈಗ ಮೂರು ಕೋಟಿಗಳ ವಿಶೇಶ ಅನುದಾನದ ಒಟ್ಟೂ ೧೧ ಕಾಮಗಾರಿಗಳಲ್ಲಿ ೭ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದೇನಿ. ಇ ಖಾತಾದ ಎ, ಬಿ, ಖಾತಾಗಳ ಪ್ರಯೋಜನ ಪಡೆಯಲು ತಿಳುವಳಿಕೆ ನೀಡಿದ್ದೇವೆ ಈಗಲೂ ಕಾಲಮಿತಿ ವಿಸ್ತರಣೆಗೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ಮಾಡುವ ಪ್ರಾಮಾಣಿಕ ಕೆಲಸ ನಮ್ಮ ಸರ್ಕಾರದಿಂದ ಆಗುತ್ತಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ವಸತಿ ಯೋಜನೆ, ಇ ಖಾತಾ ಕಾಲಮಿತಿ ವಿಸ್ತರಣೆಗೆ ಸಹಕರಿಸಲು ಪ.ಪಂ. ಹಿರಿಯ ಸದಸ್ಯ ಕೆ.ಜಿ. ನಾಯ್ಕ ಮನವಿ ಮಾಡಿದರು. ಇ ಖಾತಾ ಫಲಾನುಭವಿಗಳ ಹಕ್ಕು ಪತ್ರ ವಿತರಿಸಲಾಯಿತು.

ಸಿದ್ಧಾಪುರ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ…..

. ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಸೋಮವಾರ ಸಿದ್ದಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಪಟ್ಟಣ ಪಂಚಾಯತ ವಾರ್ಡ್ ನಂ 1ರ ರವೀಂದ್ರನಗರ ಜೆಎಂಎಫ್ ಸಿ ಕೋರ್ಟ್ ಹಿಂಭಾಗದ ರಸ್ತೆ ಡಾಂಬರೀಕರಣದ ಕಾಮಗಾರಿ, ವಾರ್ಡ್ ನಂ 5ರ ಇಂದಿರಾನಗರದಲ್ಲಿ ಜಗದೀಶ ಗೌಡ ಅವರ ಮನೆ ಎದುರಿನ ರಸ್ತೆಗೆ ಇಂಟರ್ ಲಾಕ್ ಅಳವಡಿಸುವುದು ಹಾಗೂ ಎಂ.ಎಸ್.ಭಟ್ ಅವರ ಮನೆ ಎದುರಿನ ರಸ್ತೆ ಡಾಂಬರೀಕರಣ ಕಾಮಗಾರಿ, ವಾರ್ಡ್ ನಂ 3 ರಲ್ಲಿ ಬಾಲಿಕೊಪ್ಪ ಹೆಗ್ಗಾರಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿ, ವಾರ್ಡ್ ನಂ 4 ರಲ್ಲಿ ಸಿದ್ದಾಪುರ-ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಕೊಪ್ಪ ಊರಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಿಲನ್ಯಾಸ‌ ನೆರವೇರಿಸಿದರು.

ವಾರ್ಡ್ ನಂ 4 ರಲ್ಲಿ ಹಾಳದಕಟ್ಟಾ ಮುಖ್ಯ ರಸ್ತೆಯಿಂದ ಕೊಂಡ್ಲಿ ಹಾನಂಬಿ ರಸ್ತೆಯ ಡಾಂಬರೀಕರಣ ಕಾಮಗಾರಿ, ವಾರ್ಡ್ ನಂ 7 ಮತ್ತು 11 ರಲ್ಲಿ ಹಾಳದಕಟ್ಟಾ ಸಿದ್ದಾಪುರ-ಸೊರಬಾ ಮುಖ್ಯ ರಸ್ತೆಯ ಕಾನಡೆಯವರ ಮನೆ ಎದುರಿನಿಂದ ಕೊಂಡ್ಲಿ ಬಾನ್ಕೆರೆಗೆ ಹೋಗುವ ರಸ್ತೆ ಡಾಂಬರೀಕರಣ ಕಾಮಗಾರಿ ಹಾಗೂ ವಾರ್ಡ್ ನಂ 15 ರ ಹಾಳದಕಟ್ಟಾ ವಾಜಪೇಯಿ ನಗರದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನಡೆಸಿ ಸೂಕ್ತ ಕಾಲದೊಳಗೆ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವದರ ಜತೆಗೆ ಮಳೆಗಾಲದ ಸಿದ್ದತಾ ಕಾರ್ಯಗಳನ್ನು ಸಮರ್ಪಕವಾಗಿ ನಡೆಸುವಂತೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಹಾಗೂ ಇಂಜನೀಯರಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರ ಗೌಡರ್, ಮುಖ್ಯಾಧಿಕಾರಿ ಜೆ.ಆರ್.ನಾಯ್ಕ ಹಾಗೂ ಸದಸ್ಯರು ಹಾಜರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Pak ಸೇನಾಧಿಕಾರಿಗಳು ಸೇರಿ 40 ಸೈನಿಕರು, 100ಕ್ಕೂ ಹೆಚ್ಚು ಉಗ್ರರ ಹತ್ಯೆ: Operation Sindoor ಬಗ್ಗೆ ಭಾರತದ DGMO ಕ್ಷಣ ಕ್ಷಣದ ಮಾಹಿತಿ!

ಹತ್ಯೆಯಾದ ಭಯೋತ್ಪಾದಕರಲ್ಲಿ ಯೂಸುಫ್ ಅಜರ್, ಅಬ್ದುಲ್ ಮಲಿಕ್ ರೌಫ್ ಮತ್ತು ಮುದಾಸೀರ್ ಅಹ್ಮದ್ ನಂತಹ ಕುಖ್ಯಾತ ಭಯೋತ್ಪಾದಕರು ಸೇರಿದ್ದಾರೆ ಎಂದು ಡಿಜಿಎಂಒ ತಿಳಿಸಿದ್ದಾರೆ. ನವದೆಹಲಿ:...

ಸದ್ಯಕ್ಕೆ ಕದನ ವಿರಾಮ: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ಬದಲಾಗಲ್ಲ; ಪಾಕ್ ಗೆ ಜೈಶಂಕರ್ ಎಚ್ಚರಿಕೆ

ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು...

mr.ಪರ್ಫೆಕ್ಟ್‌ ಸರಳತೆಯ ಸಾಹುಕಾರ ಸಚಿವ ಸತೀಶ್‌ ಜಾರಕಿಹೊಳಿ

ಸರಿ ಸುಮಾರು ೧೭-೧೮ ವರ್ಷಗಳ ಹಿಂದಿನ ಕಥೆಯದು. ಆಗ ಜನತಾದಳದ ಜಿಲ್ಲಾ ಅಧ್ಯಕ್ಷರಾಗಿದ್ದ ಕಮಲಾಕರ್‌ ಗೋಕರ್ಣ ಕಿರಣ ಮಾಸೂರಕರ್‌ ಸೇರಿದ ನಾಲ್ಕೈದು ಜನರ ತಂಡ...

ಲಕ್ಷ್ಮಿ ಇರದ ಮನೆಗೆ ಉಪ ರಾಷ್ಟ್ರಪತಿಗಳು ಬಂದು ಹೋದರು! #vice president visit#

ಯಾಕೋ ಆ ಮನೆ ಕಡೆ ಹೋಗುವ ಮನಸ್ಸೇ ಆಗಿರಲಿಲ್ಲ…. ಮೊದಲಾದರೆ ಹಿರಿಯಣ್ಣ ಕೃಷ್ಣಣ್ಣ ನನ್ನಂಥ ಚಿಕ್ಕವರನ್ನೂ ಅಣ್ಣಾ ಎಂದೇ ಕರೆಯುತಿದ್ದರು. ಅವರಮ್ಮ ಲಕ್ಷ್ಮಿ ಸಾಕ್ಷಾತ್‌...

Latest Posts

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ ವಿವಿಧ ವಾರ್ಡ್‌ ಗಳಲ್ಲಿ ೨ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ವಾಜಪೇಯಿ ಬಡಾವಣೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು. ನಾವು ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ....

Recommended For You

About the Author: Kanneshwar Naik

Leave a Reply

Your email address will not be published. Required fields are marked *