


ಸರ್, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿಕೆಲಸಗಳು ಈಗಲಾದರೂ ಆಗಲಿ… – ಗ್ರಾಮಸ್ಥರು, ಮುಗದೂರು

ಶಾಲಾ ಮಕ್ಕಳು, ವಾಹನ ಸವಾರರು ಸೇರಿದಂತೆ ಸಾರ್ವಜನಿಕರಿಗೆ ಅಪಾಯ ತರಬಹುದಾದ ಮರಗಳನ್ನು ತೆರವು ಮಾಡುವುದು ಸೇರಿದಂತೆ ಮಳೆಗಾಲದ ಪೂರ್ವತಯಾರಿ ಮಾಡಿ ಮಳೆಗಾಲಕ್ಕೆ ಸಿದ್ಧರಾಗಲು ಶಾಸಕ ಭೀಮಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಶಿರಳಗಿ ಸೇವಾ ಸಹಕಾರಿ ಸಂಘದ ಬಾವಿ ಕಾಮಗಾರಿ ಶಂಕುಸ್ಥಾಪನೆ ಮಾಡಿ ಶಿರಳಗಿ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟರಿಗೆ ಗ್ರಾ.ಪಂ. ನೀಡಿದ ನೀರಿನ ಟ್ಯಾಂಕ್ ಗಳು ಮತ್ತು ಆಶಾ ಕಾರ್ಯಕರ್ತೆಯರಿಗೆ ಕಪಾಟುಗಳನ್ನು ವಿತರಿಸಿ ಮಾತನಾಡಿದ ಅವರು ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಶಿಕ್ಷಣ, ಮೂಲಭೂತ ಸೌಕರ್ಯ, ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಆದ್ಯತೆಯ ಮೇಲೆ ಮಾಡುತಿದ್ದೇನೆ ಮಲೆನಾಡಿನಲ್ಲಿ ಮಳೆಗಾಲದಲ್ಲಿ ವಿಶೇಶ ಸಿದ್ಧತೆ ಬೇಕಾಗುತ್ತದೆ. ಗಟಾರ ಸ್ವಚ್ಛಗೊಳಿಸುವುದು, ಮರಗಳನ್ನು ತೆರವು ಮಾಡುವುದು ಸೇರಿದಂತೆ ಮಳೆಗಾಲದ ಸಿದ್ಧತೆಗಳನ್ನು ಅಧಿಕಾರಿಗಳು ಪೂರೈಸಬೇಕು. ಸಾರ್ವಜನಿಕರ ಸಹವಾಲುಗಳಿಗೆ ಸ್ಫಂದಿಸಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
