ವಸಂತ ನಾಯ್ಕರ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…. ಕೆ.ಜಿ. ನಾಯ್ಕ ಹಣಜಿಬೈಲ್‌ ಸವಾಲು

ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಈಗಲೂ ನಿಷ್ಪಕ್ಷಪಾತ ಮತ್ತು ನಿರ್ಭೀತ ವಿಚಾರಣೆಗೆ ಒತ್ತೇಯಿಸುತ್ತೇವೆ ಎಂದು ಪ್ರತಿಪಾದಿಸಿರುವ ಬಿ.ಜೆ.ಪಿ. ನಾಯಕ ಕೆ.ಜಿ. ನಾಯ್ಕ ಹಣಜಿಬೈಲ್‌ ಯಾವ ಗೊಡ್ಡು ಬೆದರಿಕೆಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಅಪ್ರಾಪ್ತ ಬಾಲಕಿಯರ ವಿಚಾರದ ಪ್ರಕರಣದಲ್ಲಿ ಯಾವ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಮವಾಗಬೇಕು ಬಿ.ಜೆ.ಪಿ. ಹೆಣ ಬೀಳಿಸುವ ಪಕ್ಷವಲ್ಲ ಜನರ ಸಮಸ್ಯೆಗೆ ಸ್ಫಂದಿಸುವ ಪಕ್ಷ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಸಂತ ನಾಯ್ಕ ಅರೋಪಕ್ಕೆ ಪ್ರತಿಕ್ರೀಯಿಸಿದ ಕೆ.ಜಿ.ನಾಯ್ಕ ನಮ್ಮ ಸಾರ್ವಜನಿಕ ಜೀವನ ಪಾರದರ್ಶಕವಾಗಿದೆ. ಅವರು ಮಾಡಿರುವ ಆರೋಪ ಸಾಬೀತು ಮಾಡಿದರೆ ರಾಜಕೀಯ ಜೀವನದಿಂದ ನಿವೃತ್ತಿ ಯಾಗುತ್ತೇನೆ ಎಂದು ಸವಾಲೆಸೆದ ಅವರು ಇದೇ ರೀತಿ ಅವರ ಮೇಲೆ ಬಂದಿರುವ ಆರೋಪ ಸಾಬೀತಾದರೆ ಅವರು ರಾಜಕೀಯ ಜೀವನ ತ್ಯಜಿಸುತ್ತಾರೆಯೆ? ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿ.ಜೆ.ಪಿ. ತಾಲೂಕಾ ಮಂಡಳದ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಸಿದ್ಧಾಪುರದಲ್ಲಿ ಅಕ್ರಮ ಸಾರಾಯಿ ಮಾರಾಟ, ಅಕ್ರಮ ಚಟುವಟಿಕೆಗಳು ಹೆಚ್ಚಿವೆ. ಇದರ ಹಿಂದೆ ಯಾರಿದ್ದಾರೆ? ಎಂದು ಪ್ರಶ್ನಿಸಿದರು.

ಮಾಧ್ಯಮಗೋಷ್ಠಿ ಮೊದಲು ಪಕ್ಷದ ಸಭೆ ನಡೆಸಿದ ನಾಯಕರು ನಂತರ ನಿಯೋಗದ ರೀತಿ ಸ್ಥಳೀಯ ಪೊಲೀಸ್‌ ಠಾಣೆಗೆ ತೆರಳಿ ನಿಷ್ಠೂರ ಮತ್ತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಬಾಧಿತರಿಗೆ ನ್ಯಾಯ ಒದಗಿಸಲು ಆಗ್ರಹಿಸಿದರು.

  • ಕಾಂಗ್ರೆಸ್‌ ನಾಯಕರ ಹೆಸರು ಹೇಳಿಕೊಂಡ ಆರೋಪಿಗಳ ತಂಡ ಸಂತೋಷ ನಾಯ್ಕರನ್ನು ಹೆದರಿಸಿ, ಅವರ ಕುಟುಂಬಸ್ಥರನ್ನು ಬೆದರಿಸಿ ಅವರ ಬಳಿ ಇದ್ದ ದಾಖಲೆಗಳನ್ನು ಅಪಹರಿಸಿದೆ. ನಾಲ್ಕು ದಿನಗಳ ವರೆಗೆ ತನಿಖೆಯ ಗತಿ ಏನಾಗಿದೆ ಎನ್ನುವ ಮಾಹಿತಿ ಇಲ್ಲ, ನಮಗೆ ವೈಯಕ್ತಿಕ, ರಾಜಕೀಯ ಸೇಡು ತೀರಿಸಿಕೊಳ್ಳಲು ಸಮಯವಿಲ್ಲ. ಸಿದ್ಧಾಪುರದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರವನ್ನು ನಾವೇ ಹೇಳಿಕೊಳ್ಳಬಾರದು. ಕಾನೂನು, ರಾಜಕೀಯ, ಅನಿವಾರ್ಯವಾದರೆ ವೈಯಕ್ತಿಕ ಹೋರಾಟಕ್ಕೂ ಸಿದ್ಧ ಅವರ ನಡೆ ನೋಡಿ ನಮ್ಮ ನಡೆ ನಿರ್ಧಾರವಾಗಲಿದೆ…. -ಕೆ.ಜಿ.ನಾಯ್ಕ ಹಣಜಿಬೈಲ್

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

2 Comments

Leave a Reply

Your email address will not be published. Required fields are marked *