ತಲಾ ಆದಾಯ ಸಿದ್ಧಾಪುರ ನಂ-೦೧, ರಾಜ್ಯದ ಸರಾಸರಿ ತಲಾ ಆದಾಯಕ್ಕಿಂತ ೧.೧೦ ಹೆಚ್ಚು!

ಹಲವು ಕ್ಷೇತ್ರ, ವಿಚಾರಗಳಲ್ಲಿ ಜಿಲ್ಲೆಗೆ ಮೊದಲ ಸ್ಥಾನದಲ್ಲಿರುವ ಸಿದ್ದಾಪುರ ಈಗ ಜಿಲ್ಲೆಯ ಅತಿ ಹೆಚ್ಚು ತಲಾ ಆದಾಯದ ತಾಲೂಕಾಗಿ ಹೊರಹೊಮ್ಮಿದೆ. ಅಭಿವೃದ್ಧಿ, ಮೂಲಭೂತ ಅನುಕೂಲಗಳ ವಿಚಾರದಲ್ಲಿ ಈಗಲೂ ಹಿಂದುಳಿದಿರುವ ಸಿದ್ದಾಪುರ ತಾಲೂಕು ತಲಾ ಆದಾಯದಲ್ಲಿ ಮುಂದಿರುವುದನ್ನು ಆರ್ಥಿಕ ಮತ್ತು ಸಾಂಖ್ಯಿಕ ನಿರ್ಧೇಶನಾಲಯ ಖಚಿತಪಡಿಸಿದೆ.

ಉತ್ತರ ಕನ್ನಡ ಜಿಲ್ಲೆಯ ೧೨ ತಾಲೂಕುಗಳಲ್ಲಿ ಜೊಯಡಾ ಬಿಟ್ಟರೆ ಅತ್ಯಂತ ಹಿಂದುಳಿದ ತಾಲೂಕು ಸಿದ್ದಾಪುರ ಆದರೆ ಈ ತಾಲೂಕು ತಲಾ ಆದಾಯದಲ್ಲಿ ಮೊದಲ ಸ್ಥಾನದಲ್ಲಿರುವುದು ವಿಶೇಶ.

ತಾಲೂಕುವಾರು ತಲಾ ಆದಾಯ… ಸಿದ್ದಾಪುರ- ೩೩೩೮೫೯ ರೂ.

ಶಿರಸಿ-೨೬೨೦೫೫, ಕುಮಟಾ ೨೫೦೬೧೭,ಹೊನ್ನಾವರ-೨೪೯೩೪೫, ಜೊಯಡಾ೨೦೮೩೫೦. ಹಳಿಯಾಳ-೨೦೬೦೬೦, ಕಾರವಾರ೨೦೫೬೦೮, ಮುಂಡಗೋಡು-೧೯೮೦೦೦,

ಯಲ್ಲಾಪುರ-೧.೯೨೩೯೪, ಅಂಕೋಲಾ..೧೮೯೦೬೩, ಭಟ್ಕಳ-೧೮೧೩೦೬, ದಾಂಡೇಲಿ೮೮.೦೬೦

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ಧಾಪುರದ ತಲಾ ಆದಾಯ ೩.೩೩ ಸಾವಿರಗಳಾಗಿದ್ದರೆ, ಅತಿ ಕಡಮೆ ತಲಾ ಆದಾಯದ ತಾಲೂಕಾಗಿ ದಾಂಡೇಲಿ ಗುರುತಿಸಿಕೊಂಡಿದೆ. ದಾಂಡೇಲಿ ತಾಲೂಕಿನ ತಲಾ ಆದಾಯ ಒಂದು ಲಕ್ಷರೂಪಾಯಿ ಕುಡಾ ತಲುಪದಿರುವುದು ಸೋಜಿಗ.

ಜಿಲ್ಲೆಯ ಆರ್ಥಿಕ ಮೂಲಗಳಾದ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಎಲ್ಲಾ ತಾಲೂಕುಗಳಲ್ಲೂ ವಿಸ್ತರಿಸಿವೆ. ಆದರೆ ಸಿದ್ದಾಪುರದ ಜನಸಂಖ್ಯೆ ಕಡಿಮೆ, ವೈಯಕ್ತಿಕ ಜಮೀನು ಪ್ರಮಾಣ ಹೆಚ್ಚು. ಈ ಕಾರಣಗಳ ಜೊತೆಗೆ ಕೃಷಿ, ಹೈನುಗಾರಿಕೆ, ತೋಟಗಾರಿಕೆಯಲ್ಲಿ ಸಿದ್ಧಾಪುರದ ಪ್ರಗತಿ ಇಲ್ಲಿಯ ತಲಾ ಆದಾಯ ಹೆಚ್ಚಿಸಿರಬಹುದು ಎಂದು ಅಂದಾಜಿಸಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *