


ಶಿರಸಿ: ಸಹಕಾರ ಕ್ಷೇತ್ರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಶಕ್ತಿಯಾಗಿದೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು.

ಶಿರಸಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಬಸವೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ನಿ. ಶಿರಸಿ ಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ 25 ವರ್ಷಗಳಿಂದ ಗ್ರಾಹಕರ ನಂಬಿಕೆ ಮತ್ತು ವಿಶ್ವಾಸವನ್ನು ಕಾಯ್ದುಕೊಂಡು, ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿರುವ ಸೊಸೈಟಿಯ ಆಡಳಿತ ಮಂಡಳಿ, ಸಿಬ್ಬಂದಿವರ್ಗ ಹಾಗೂ ಸಮಸ್ತ ಶೇರುದಾರರಿಗೆ ಶಾಸಕರು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜಡೆ ಸಂಸ್ಥಾನ ಮಠದ ಶ್ರೀ ಮ. ನಿ. ಪ್ರ. ಡಾ. ಮಹಾಂತ ಮಹಾಸ್ವಾಮಿಗಳು ಉಪಸ್ಥಿತರಿದ್ದರು.



ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕೆನರಾ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೆ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಶಾಸಕ ಶಿವರಾಮ್ ಹೆಬ್ಬಾರ್, ಮಾಜಿ ಶಾಸಕ ವಿ. ಎಸ್. ಪಾಟೀಲ್, ಪ್ರಮುಖ ಮುಖಂಡರಾದ ಮಂಜುನಾಥ ಗೌಡ, ವೀರೇಂದ್ರ ಆರ್. ಪಾಟೀಲ್, ಜಿ. ಟಿ. ಹೆಗಡೆ ತಟ್ಟಿಸರ ಸೇರಿದಂತೆ ಸಹಕಾರಿ ಕ್ಷೇತ್ರದ ಪ್ರಮುಖ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________

