ಮಧು ಬಂಗಾರಪ್ಪನವರ ಮನ ಒಲಿಸುತ್ತೇವೆ- ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನು ಸನ್ಯಾಸಿಗಳಲ್ಲ: ಬಸವರಾಜ್ ಹೊರಟ್ಟಿ

ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನೂ‌ ಸನ್ಯಾಸಿಗಳಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ.

Basavaraj Horatti

ಬೆಂಗಳೂರು: ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನೂ‌ ಸನ್ಯಾಸಿಗಳಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ, ವಿಧಾನಪರಿಷತ್ ನಲ್ಲಿ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆಗೆ ನಮ್ಮ ಬೆಂಬಲವೂ ಇದೆ. ನಾವು ಸಹಿ ಹಾಕಿ ಇಟ್ಟುಕೊಂಡಿದ್ದೇವೆ, ವರಿಷ್ಠರು ಹೇಳಿದ ತಕ್ಷಣ ವಿಧಾನಪರಿಷತ್ ಕಾರ್ಯದರ್ಶಿಗೆ ಪತ್ರ ಕೊಡುತ್ತೇವೆ. ಹೊರಟ್ಟಿ ಅವರು ಸಭಾಪತಿ ಆಗಬೇಕು ಎಂದು ಎಚ್.ಡಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಪಷ್ಟತೆ ಇದೆ ಎಂದರು.

ಸಭಾಪತಿ ಸ್ಥಾನ ಜೆಡಿಎಸ್ ಗೆ ಸಿಗಲಿದೆ. ಈಗಾಗಲೇ ಹೆಚ್.ಡಿ ದೇವೇಗೌಡರು ನನ್ನನ್ನು ಸಭಾಪತಿ ಮಾಡಲು ತೀರ್ಮಾನ ಮಾಡಿದ್ದಾರೆ. ಈ ವಿಚಾರ ನನ್ನ ಬಳಿ ಚರ್ಚೆ ಮಾಡಿದ ನಂತರ ತೀರ್ಮಾನ ಆಗಬೇಕಿದೆ ಎಂದರು.

ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ನಾವೇನು ರಾಜಕೀಯ ಸನ್ಯಾಸಿಗಳಲ್ಲ. ಸಭಾಪತಿ ವಿಚಾರವನ್ನು ದೇವೇಗೌಡರು, ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಜೆಡಿಎಸ್ 13 ಸದಸ್ಯರಿದ್ದಾರೆ. ನಾವೂ ನೋಡಿ ಬೆಂಬಲ ನೀಡಬೇಕಲ್ಲ ಎಂದರು. 

ಜನತಾ ಪರಿವಾರ ಒಗ್ಗೂಡಿಸಲು ಮುಂದಾಗಿದ್ದೇವೆ. ಮಧು ಬಂಗಾರಪ್ಪ ಅವರನ್ನು ಮನವೊಲಿಸುತ್ತೇವೆ. ಅದೇ ರೀತಿ ಜಿ.ಟಿ ದೇವೇಗೌಡರನ್ನೂ ಬೇಟಿ ಮಾಡುತ್ತೇವೆ. ಗುಬ್ಬಿ ಶ್ರೀನಿವಾಸ್ ಸೇರಿ ಯಾರು ಯಾರು ಅಸಮಾಧಾನ ಹೊಂದಿರುವವರು ಇದ್ದಾರೋ ಅವರೆಲ್ಲರನ್ನೂ ಮನವೊಲಿಕೆ ಮಾಡುತ್ತೇವೆ ಎಂದರು.

ನಮ್ಮಲ್ಲಿ ಪರಸ್ಪರ ಸಂಪರ್ಕದ ಸಮಸ್ಯೆ ಆಗಿದೆ. ಯಾರು ಏನೇ ಹೇಳಿದರೂ ಅದನ್ನು ನಂಬಿ ಬಿಡುತ್ತಾರೆ. ಬಿಹಾರ ಮಾದರಿಯಲ್ಲಿ ಜನತಾ ಪರಿವಾರ ಒಗ್ಗೂಡಿಸುತ್ತೇವೆ. ಜನತಾ ಪರಿವಾರದಿಂದ ಬೇರೆ ಪಕ್ಷಗಳಿಗೆ ಹೋದವರು ಸೋಲು ಕಂಡಿದ್ದಾರೆ. ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷ ಮಾಡಲು ದೇವೇಗೌಡರು ತೀರ್ಮಾನಿಸುತ್ತಾರೆ. 2023ಕ್ಕೆ ಜನತಾ ಪರಿವಾರದ ಸರ್ಕಾರ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕ ಸೇರಿ ಎಲ್ಲಾ ಕಡೆ ಪ್ರಾದೇಶಿಕ ಪಕ್ಷಗಳ ಯುಗ ಪ್ರಾರಂಭವಾಗಿದೆ. ಎಲ್ಲರನ್ನೂ ಪಕ್ಷದಲ್ಲಿ ಉಳಿಸಿಕೊಳ್ಳುವ ತೀರ್ಮಾನ ಮಾಡುತ್ತಿದೆ ಎಂದು ಹೇಳಿದರು.

ಪಕ್ಷದ ಹಿರಿಯ ಮುಖಂಡ ಕೋನರೆಡ್ಡಿ ಮಾತನಾಡಿ, ಜೆಡಿಎಸ್ ನಿಂದ ಹೊರ ಹೋದವರು ಬಹಳ ಜನ ಇದ್ದಾರೆ. ಮತ್ತೆ ಎಲ್ಲರನ್ನೂ ಕರೆಯೋ ಪ್ರಯತ್ನ ಮಾಡುತ್ತೇವೆ. ಪಕ್ಷ ಬಿಟ್ಟು ಹೋಗಬೇಡಿ ಎಂದು ಮನವೊಲಿಸುತ್ತೇವೆ. ಜೆಡಿಎಸ್ ಬಿಟ್ಟು ಹೋದವರಿಗೆ ಬೇರೆ ಪಕ್ಷಗಳು ಹೊಂದುವುದಿಲ್ಲ ಎಂದು ತಿಳಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *